Tuesday, August 6, 2024
ಮನೆಬಿಸಿ ಬಿಸಿ ಸುದ್ದಿಯಡಿಯೂರಪ್ಪ ಮುಖ್ಯಮಂತ್ರಿಯಾಗಲು ವಿಶೇಷ ಪೂಜೆ

ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ವಿಶೇಷ ಪೂಜೆ

ಕಲಬುರಗಿ: ಬಿ.ಎಸ್. ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಲೆಂದು ಬುಧವಾರ ನಗರದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಅಭಿಷೇಕ, ವಿಶೇಷ ಪೂಜೆಯನ್ನು ನೆರವೇರಿಸಲಾಯಿತು.

ವೀರಶೈವ ಲಿಂಗಾಯತ ಸ್ವಾಭಿಮಾನಿ ಬಳಗ ಹಾಗೂ ಬಿ.ಎಸ್. ಯಡಿಯೂರಪ್ಪ ಅಭಿಮಾನಿ ಬಳಗದ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡ ವಿಶೇಷ ಪೂಜೆಯ ಸಂದರ್ಭದಲ್ಲಿ ಸ್ವಾರ್ಥ ಅತಂತ್ರ ಸರ್ಕಾರದಿಂದ ಬೇಸರಗೊಂಡಿರುವ ರಾಜ್ಯದ ಜನತೆಗೆ ನೆಮ್ಮದಿ ಸಿಗಲಿ. ರೈತ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸದೃಢ ಸರ್ಕಾರ ಬರಲಿ ಎಂದು ಪ್ರಾರ್ಥಿಸಿಸಿದರು.

ಈ ಸಂದರ್ಭದಲ್ಲಿ ಎಂ.ಎಸ್. ಪಾಟೀಲ್ ನರಿಬೋಳ್, ಶ್ರೀಮತಿ ದಿವ್ಯಾ ಹಾಗರಗಿ, ಶ್ವೇತಾ ಸಿಂಗ್, ರಾಜೇಶ್ ಹಾಗರಗಿ, ಮುತ್ತು, ಸದ್ದಾಂ ಖನ್ನಿ ಮುಂತಾದವರು ಉಪಸ್ಥಿತರಿದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular