ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಧಾರ್ಮಿಕ ತಾರತಮ್ಯ: ಬಗೆಹರಿಯದಿದ್ದಲ್ಲಿ ಉಗ್ರ ಹೋರಾಟ

ಉಡುಪಿ: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಹಿಂದಿನಿಂದಲೂದಲೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುತ್ತಿದ್ದರು.ಈ ಮೊದಲು ಹಿಜಾಬ್ ಖಂಡನೆ ಇತ್ತಾದರೂ ಇದೀಗ ತೀವ್ರವಾಗಿದೆ.ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿದ ಕಾರಣ ಅವರನ್ನು ತರಗತಿಯಿಂದ ಹೊರ ಹಾಕಲಾಗಿತ್ತು. ಇದು ಧಾರ್ಮಿಕ ತಾರತಮ್ಯವಾಗಿದ್ದು ಇದನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ಇಂದು ಸುದ್ದಿಗೋಷ್ಠಿಯಲ್ಲಿ ಖಂಡಿಸಿ ಮುಖಂಡರು ಮಾತನಾಡಿದರು.

ಭಾರತೀಯ ಸಂವಿಧಾನದ ೨೫ನೇ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಮೂಲಭೂತ ಹಕ್ಕುಗಳಾಗಿ ಸೇರಿಸಿದೆ. ಇದರ ಪ್ರಕಾರ ಎಲ್ಲಾ ವ್ಯಕ್ತಿಗಳು ಮುಕ್ತವಾಗಿ ಧರ್ಮವನ್ನು ಪ್ರತಿಪಾದಿಸುವ,ಆಚರಿಸುವ,ಪ್ರಚಾರ ಮಾಡುವ ಹಕ್ಕನ್ನು ಹೊಂದಿದ್ದಾರೆ ಇದಲ್ಲದೆ ಎಲ್ಲಾ ಪಂಗಡಗಳು ತಮ್ಮದೇ ಆದ ಧಾರ್ಮಿಕ ನಿರ್ವಹಣೆಯನ್ನು ಮಾಡಬಹುದಾಗಿದೆ ಎಂದು ಸಂವಿಧಾನದ ೨೬ನೇ ವಿಧಿಯು ಹೇಳುತ್ತದೆ.ಒಂದು ಮುಸ್ಲಿಂ ಮಹಿಳೆಗೆ ಹಿಜಾಬ್ ಧರಿಸುವುದು ಅವರ ಧಾರ್ಮಿಕ ನಂಬಿಕೆಗಳಲ್ಲಿ ಒಂದಾಗಿದೆ ಆದರೆ ಈ ಹಕ್ಕನ್ನು ಅವರಿಂದ ಕಸಿದುಕೊಳ್ಳಲಾಗುತ್ತಿದೆ.

ಬಹುಮುಖ್ಯವಾಗಿ ವಿದ್ಯಾರ್ಥಿನಿಯರು ಮೊದಲಿನಿಂದಲೂ ಹಿಜಾಬ್ ಧರಿಸುತ್ತಿದ್ದರು ಆದರೆ ಇದೀಗ ಶಿಕ್ಷಕ ವೃಂದದ ಕೆಲವೊಬ್ಬರು ಹಿಜಾಬ್ ಧರಿಸಲು ತಡೆಯುತ್ತಿದ್ದಾರೆ ಹಾಗೂ ತರಗತಿಗೆ ಪ್ರವೇಶಿಸಲು ನಿರಾಕರಿಸುತ್ತಿದ್ದಾರೆ. ಆ ವಿದ್ಯಾರ್ಥಿನಿಯರ ಪೋಷಕರು ಈ ಹಿಂದೆ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದರು ಅದಲ್ಲದೆ ಸತತವಾಗಿ ಇದರ ಕುರಿತು ಮಾತನಾಡಲು ಹೋದಾಗ ಅಲ್ಲಿಯ ಪ್ರಾಂಶುಪಾಲರು ಯಾವುದೇ ರೀತಿಯ ಸ್ಪಂದನೆ ನೀಡುತ್ತಿಲ್ಲ. ಮೊನ್ನೆ ಇದರ ಕುರಿತು ಅಪರ ಜಿಲ್ಲಾಧಿಕಾರಿ ಮತ್ತು ಡಿಡಿಪಿಯುಯವರಿಗೆ ಮನವಿ ಮಾಡಿದ್ದು, ಸಮಸ್ಯೆಗೆ ಪರಿಹಾರ ನೀಡುತ್ತಾರೆ ಎಂದು ಭರವಸೆ ನೀಡಿದ್ದರು. ಆದರೆ ನಿನ್ನೆ ಪುನಃ ಆ ವಿದ್ಯಾರ್ಥಿನಿಯರನ್ನು ಇದೇ ಕಾರಣಕ್ಕೆ ತರಗತಿಯಿಂದ ಹೊರ ಹಾಕಿದ್ದಾರೆ.

ಅಲ್ಲಿಯ ಪ್ರಾಂಶುಪಾಲರನ್ನು ವಜಾಗೊಳಿಸಬೇಕು ಅದಲ್ಲದೇ ಪ್ರಾಧ್ಯಾಪಕರು ಹಾಜರಾತಿ ನೀಡದ ಕಾರಣ ಅವರ ಮೇಲೂ ಕಠಿಣ ಕ್ರಮ ಜರುಗಿಸಬೇಕು. ಅಲ್ಲಿ ನಡೆಯುತ್ತಿರುವ ಧಾರ್ಮಿಕ ತಾರತಮ್ಯವನ್ನು ನಿಲ್ಲಿಸಿ ವಿದ್ಯಾರ್ಥಿನಿಯರಿಗೆ ನ್ಯಾಯ ದೊರಕಬೇಕು. ಇಲ್ಲದಿದ್ದರೆ ತೀವ್ರ ರೀತಿಯ ಹೋರಾಟವನ್ನು ಎದುರಿಸಬೇಕಾಗಬಹುದು ಎಂಬ ಎಚ್ಚರಿಕೆಯನ್ನು ಪತ್ರಿಕಾಗೋಷ್ಠಿಯ ಮುಖಾಂತರ ತಿಳಿಸುತ್ತಿದ್ದೇವೆ.

ಮಸೂದ್ ಮನ್ನ ರಾಜ್ಯ ಸಮಿತಿ ಸದಸ್ಯರು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ, ಅಸೀಲ್ ಅಕ್ರಮ್ ಜಿಲ್ಲಾಧ್ಯಕ್ಷರು, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಝಮ್ ಝಮ್ ಜಿಲ್ಲಾ ಉಪಾಧ್ಯಕ್ಷೆ ಉಡುಪಿ, ಮತ್ತು ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಉಪಸ್ಥಿತರಿದ್ದರು.

emedialine

Recent Posts

ಶರಣಬಸವ ವಿಶ್ವವಿದ್ಯಾಲಯದಲ್ಲಿ 14ರಂದು ರಾಷ್ಟ್ರೀಯ ವಿಚಾರ ಸಂಕಿರಣ

ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯ ಮತ್ತು ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ ಜಂಟಿಯಾಗಿ, ನಗರದ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ದೊಡ್ಡಪ್ಪ ಅಪ್ಪ…

18 mins ago

ಕಾ.ಸೀತಾರಾಮ ಯೇಚೂರಿಗೆ ಸಿಪಿಐಎಂ ಕಚೇರಿಯಲ್ಲಿ ಶೃದ್ಧಾಂಜಲಿ

ಕಲಬುರಗಿ: ಸಿಪಿಐಎಂ ಪಕ್ಷದ ಅಖಿಲ ಭಾರತ ಪ್ರದಾನ ಕಾರ್ಯದರ್ಶಿಗಳಾಗಿದ್ದ 72 ವಯಸ್ಸಿನ ಕಾ.ಸೀತಾರಾಮ ಯೇಚೂರಿಯವರು ಇಂದು ಸಂಜೆ ನಿಧನ ಹೊಂದಿದ್ದು,…

25 mins ago

ಕ್ರೀಡೆಗಳು ವಿದ್ಯಾರ್ಥಿಗಳನ್ನು ಸಧೃಡ ಆರೋಗ್ಯವಾಗಿ ಇಡುತ್ತವೆ

ಕಲಬುರಗಿ: ಕ್ರೀಡೆಗಳು ವಿದ್ಯಾರ್ಥಿಗಳು ಸದೃಢವಾಗಿ ಮತ್ತು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ. ಅವರು ದೈನಂದಿನ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಅನಿರೀಕ್ಷಿತ ರೋಗಗಳು…

39 mins ago

PDA ಕಾಲೇಜಿನಲ್ಲಿ ಸೆ. 13,14 ರಂದು ವಿಚಾರ ಸಂಕಿರಣ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಯರಿಂಗ ಕಾಲೇಜಿನಲ್ಲಿ ನಾಳೆಯಿಂದ ಎರಡುದಿನಗಳ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ…

41 mins ago

ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತ ನೂತನ ಸಮಿತಿ ರಚನೆ

ಕಲಬುರಗಿ: ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತಿನ ಸಭೆಯಲ್ಲಿ ಜಿಲ್ಲಾ ಸಮಿತಿ ರಚಿಸಲಾಯಿತು. ಈ ವೇಳೆಯಲ್ಲಿ ಜಿಲ್ಲಾ ಅಧ್ಯಕ್ಷರಾಗಿ ರವೀಂದ್ರ…

45 mins ago

ಕಲಬುರಗಿ: ಸೆ. 13 ರಿಂದ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ”ರು ಅಭಿಯಾನ

ಕಲಬುರಗಿ: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಘಟಕದ ವತಿಯಿಂದ "ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ" ಎಂಬ ಧ್ಯೇಯವಾಕ್ಯದಡಿ ರಾಜ್ಯವ್ಯಾಪಿ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420