Tuesday, July 16, 2024
ಮನೆಬಿಸಿ ಬಿಸಿ ಸುದ್ದಿಕಸಾಪ: ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಬಡಿಗೇರ ರಾಜಿನಾಮೆ

ಕಸಾಪ: ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಬಡಿಗೇರ ರಾಜಿನಾಮೆ

ಕಲಬುರಗಿ: ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಸುರೇಶ ಬಡಿಗೇರ ರಾಜಿನಾಮೆ ನೀಡಿದ್ದಾರೆ.
ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಅವರ ಏಕಚಕ್ರಾಧಿಪಥ್ಯವನ್ನು ವಿರೋಧಿಸಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕಗಳ ಅಧ್ಯಕ್ಷರ ನೇಮಕದಲ್ಲಿ ತಮ್ಮನ್ನು ಗಣನೆಗೆ ತೆಗೆದುಕೊಳ್ಳದೆ ನೇಮಕ ಮಾಡಿದ್ದರೆ. ಪರಿಷತ್ತನ ಕಾರ್ಯಚಟುವಟಿಕೆಗಳ ಆಯೋಜನೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದ್ದಾರೆ. ಪರಿಷತನ ಹಣಕಾಸಿನ ವಿಷಯದಲ್ಲಿಯೂ ಕೂಡ ವ್ಯತ್ಯಾಸ ಕಂಡುಬರುತ್ತಿದ್ದು, ಕೋಶಾಧ್ಯಕ್ಷ ಸ್ಥಾನ ನಮಕೆವಾಸ್ತೆ ಆಗಿಬಿಟ್ಟಿದೆ.

ತಮ್ಮ ಸ್ವಂತ ಖರ್ಚಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕೆಲಸ ಮಾಡಲು ಆಗುವುದಿಲ್ಲ ಎಂದು ತಿಳಿಸಿದ ಅವರು, ಕಸಾಪ ಚುನಾವಣೆಯಲ್ಲಿ ತೇಗಲತಿಪ್ಪಿ ಅವರನ್ನು ಬೆಂಬಲಿಸಿ ಆಯ್ಕೆ ಮಾಡಿದ್ದಕ್ಕೆ ಕೆಲವರನ್ನು ದೂರ ಮಾಡುತ್ತಿರುವುದು ಖಂಡನೀಯವಾಗಿದೆ ಎಂದು ಅವರು ತಿಳಿಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular