ಕಲಬುರಗಿ: ಜಗತ್ತಿನಲ್ಲಿಯೇ ಉತ್ತಮ ರಾಷ್ಟ್ರ ಕಟ್ಟುವುದು ವಿದ್ಯಾರ್ಥಿ ಯುವಜನರ ಕೈಯಲ್ಲಿದೆ, ವಿದ್ಯಾವಂತರಿಗಿಂತ ಹೃದಯವಂತ ಮನಸ್ಸುಗಳಿಂದ ಬಲಿಷ್ಠ ರಾಷ್ಟ್ರ ಕಟ್ಟಲು ಸಾಧ್ಯವೆಂದು ಹಿರಿಯ ಸಾಹಿತಿಗಳಾದ ಡಾ. ಸ್ವಾಮಿರಾವ ಕುಲಕರ್ಣಿ ಹೇಳಿದರು.
ಶನಿವಾರ ಕಲಬುರಗಿ ನಗರದ ಆಳಂದ ರಸ್ತೆಯಲ್ಲಿರುವ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದ ದಶಮಾನೋತ್ಸವ ಸಮಾರಂಭದ ನಿಮಿತ್ಯ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ವಿಶೇಷ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡುತ್ತ ರೈತನು ಉತ್ತಮ ಸಮಯದಲ್ಲಿ ಬೀಜ ಬಿತ್ತಿ ಉತ್ತಮ ಫಸಲು ಪಡೆಯುವ೦ತೆ, ವಿದ್ಯಾರ್ಥಿಗಳು ಕೂಡ ನಿರ್ದಿಷ್ಟ ಗುರಿಯೊಂದಿಗೆ ನಿರಂತರ ಪ್ರಯತ್ನ ಮಾಡಿದಾಗ ಮಾತ್ರ ಸಾಧನೆಯ ಶಿಖರ ವೇರುತ್ತಾನೆ. ಸಾಧನೆ ಎನ್ನುವುದು ಸೋಮಾರಿಗಳ ಸೊತ್ತಲ್ಲ, ಅದು ಉತ್ತಮ ಪರಿಶ್ರಮವಾದಿಗಳ ಸ್ವತ್ತಾಗಿದೆ ಎಂದು ಮಾರ್ಮಿಕವಾಗಿ ನುಡಿದರು.
ತರಬೇತಿ ಕೇಂದ್ರದ ಮುಖ್ಯಸ್ಥರಾದ ಅಸ್ಲಾಂ ಶೇಖ್ ಮಾತನಾಡುತ್ತಾ ಮಸೀದಿ, ಮಂದಿರಗಳಲ್ಲಿ ದೇವರು ಇರದೆ ಯಾರು ಸಮಾಜಕ್ಕಾಗಿ ನಿಸ್ವಾರ್ಥ ಸೇವೆ ಮಾಡುತ್ತಾರೆ ಅಂಥವರಲ್ಲಿ ದೇವರಿರುತ್ತಾನೆ.ನಾವು ಕೂಡ ನಿಸ್ವಾರ್ಥದಿಂದ ಸಮಾಜಸೇವೆ ಮಾಡುತ್ತ ಸಮಾಜದ ಋಣ ತೀರಿಸೋಣ ಎಂದು ಹೇಳಿದರು.
ಜನಪರ ಹೋರಾಟಗಾರ ನ್ಯಾಯವಾದಿ ಹಣಮಂತರಾಯ ಎಸ. ಅಟ್ಟೂರ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಶಾರದಾ ವಿವೇಕ ಪದವಿ ಮಹಾವಿದ್ಯಾಲಯದ ಉಪನ್ಯಾಸಕರಾದ ಹಣಮಂತರಾಯ ಗುಡ್ಡೆವಾಡಿ, ಮಿಲೇನಿಯಂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಸ್ ಕೆ ಕುಂಬಾರ, ರಘುನಂದನ್ ಕುಲಕರ್ಣಿ ಆಗಮಿಸಿದರು.
ವಿವಿಧ ಕ್ಷೇತ್ರದಲಿೢ ಸೇವೆಗೈಯುತ್ತಿರುವ ಶಾಂತೇಶ ಎಳಿಮಲಿ, ಪರಮೇಶ್ವರ ಎಸ್ ವಡ್ಡಳ್ಳಿ, ಅಭಿಷೇಕ ಎಸ.ತಾರಾಪೂರ, ಮಂಜುಳಾ ಬಿ. ಅಕ್ಕಿ, ಭಾಗ್ಯ ಲಕ್ಷ್ಮಿ ಎಸ್. ಬೂಸಾ, ಶ್ರುತಿ ಅವರಿಗೆ ವಿಶೇಷವಾಗಿ ಗೌರವಿಸಲಾಯಿತು.
ಇದೆ ಸಂದರ್ಭದಲ್ಲಿ ಹೊಸ ವರ್ಷಾಚರಣೆ ನಿಮಿತ್ಯ ಕಲ್ಯಾಣ ಕರ್ನಾಟಕ ಭಾಗದ ಖ್ಯಾತ ಕಲಾವಿದರಾದ ಶ್ರವಣಕುಮಾರ ಮಠ, ರಾಜು ಹೆಬ್ಬಾಳ, ಮಹೇಶ ತೆಲೆಕುಣಿ, ಹಾಗೂ ವಿದ್ಯಾರ್ಥಿಗಳಿಂದ ಹಾಸ್ಯ, ರಸಮಂಜರಿ ಕಾರ್ಯಕ್ರಮ ನಡೆಯಿತು. ರಂಜಿತಾ ಶ್ರೀಚಂದ, ಸುಲ್ತಾನಾ ಯಾದಗಿರಿ, ಶಿಲ್ಪಾ ಬೇಡರ, ಅಶ್ವಿನಿ ಆಚಾರ್ಯ, ತ್ರಿವೇಣಿ ರಾಜರಕರ, ಸೇರಿದಂತೆ ಹಲವಾರು ಜನ ಭಾಗವಹಿಸಿದ್ದರು
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…