ಬಿಸಿ ಬಿಸಿ ಸುದ್ದಿ

ಅಸ್ಪೃಶ್ಯತೆ ನಿರ್ಮೂಲನೆಗೆ ಸಂಘಟಿತರಾಗಲು ಕರೆ

ಕಲಬುರಗಿ: ಶತಮಾನಗಳಿಂದ ಬೇರು ಬಿಟ್ಟಿರುವ ಜಾತಿ ವ್ಯವಸ್ಥೆ ಮತ್ತು ಮೌಢ್ಯಾಚರಣೆಗಳನ್ನು ನಿರ್ಮೂಲನೆ ಮಾಡಬೇಕಾದರೆ ಪ್ರತಿಯೊಬ್ಬರು ಶಿಕ್ಷಣ ಪಡೆದು ಶಿಕ್ಷಣವಂತರಾಗಬೇಕು ಎಂದು ಸಾಹಿತಿ ಧರ್ಮಣ್ಣ ಎಚ್ ಧನ್ನಿ ಕರೆ ನೀಡಿದರು.

ಜಿಲ್ಲೆಯ ಚಿತ್ತಾಪೂರ ತಾಲೂಕಿನ ಚಾಮನೂರ ಗ್ರಾಮದ ದೇವಮ್ಮ ದೇವಸ್ಥಾನದ ಆವರಣದಲ್ಲಿ ತಾಲೂಕಾ ಸಮಾಜ ಕಲ್ಯಾಣ ಇಲಾಖೆ ಹಾಗೂ ಸಂಸ್ಕಾರ ಪ್ರತಿಷ್ಠಾನ ಇವರು ಜಂಟಿಯಾಗಿ ಆಯೋಜಿಸಿದ ಅಸ್ಪೃಶ್ಯತೆ ನಿರ್ಮೂಲನಾ ಜನ ಜಾಗೃತಿ ಹಾಗೂ ಬೀದಿ ನಾಟಕ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲಿ ಎಷ್ಟೇ ಮುಂದುವರಿದರೂ ಇನ್ನೂ ಅಸ್ಪೃಶ್ಯತೆ ಅಳಿಸಲು ಸಾಧ್ಯವಾಗಿಲ್ಲ. ಬುದ್ಧ ಬಸವ ಡಾ ಅಂಬೇಡ್ಕರ ಅವರು ನಿರಂತರ ಹೋರಾಟ ಮಾಡಿದ್ದಾರೆ. ಇಂದು ಸರ್ವರಿಗೂ ಸಮ ಬಾಳು ಸಮ ಪಾಲು ಅವಕಾಶ ಮಾಡಿ ಕೊಟ್ಟ ನಮ್ಮ ಸಂವಿಧಾನವನ್ನು ಅಧ್ಯಯನ ಮಾಡಬೇಕು. ಆ ಮೂಲಕ ಜಾತಿ ವ್ಯವಸ್ಥೆ ನಿರ್ಮೂಲನೆಗೆ ಎಲ್ಲಾ ಸಮುದಾಯದ ಜನ ಮುಂದಾಗಬೇಕು ಎಂದರು.

ಕಡಬೂರ ಗ್ರಾಪಂ ಸದಸ್ಯ ರಾಘು ದೊಡ್ಡಮನಿ ಹಾಗೂ ಸಂಗೀತ ಕಲಾವಿದ ಎಂ ಎನ್ ಸುಗಂಧಿ ರಾಜಾಪೂರ ಅವರು, ಸ್ವಾಭಿಮಾನದ ಬದುಕು ಕಲ್ಪಿಸಿ ಕೊಟ್ಟ ಸಂವಿಧಾನದ ಆದರ್ಶಗಳನ್ನು ಮೈಗೂಡಿಸಿ ಕೊಳ್ಳಬೇಕು. ಸಮಾಜದಲ್ಲಿ ಜೀವಂತವಾಗಿರುವ ಅಸ್ಪೃಶ್ಯತೆ ದೊಡ್ಡ ಪೀಡುಗಾಗಿ ಕಾಡುತ್ತಿದೆ. ಮಹಾ ಪುರುಷರ ಹೋರಾಟ ಮತ್ತು ಚಿಂತನೆಗಳು ಅರ್ಥೈಸಿ ಕೊಳ್ಳಬೇಕು ಎಂದು ಅಭಿಪ್ರಾಯ ಪಟ್ಟರು.
ಗ್ರಾಪಂ ಉಪಾಧ್ಯಕ್ಷ ಖಾಜಾಸಾಬ ಜಮಾದಾರ ಕಾರ್ಯಕ್ರಮ ಉದ್ಘಾಟಿಸಿದರು.

ಸಂಸ್ಕಾರ ಪ್ರತಿಷ್ಠಾನದ ನಿರ್ದೇಶಕ ವಿಠ್ಠಲ ಚಿಕಣಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಪಂ ಸದಸ್ಯರಾದ ಅಮೃತ ದೊರೆ, ಕಾಶಪ್ಪ ಅಮಲಗೋಳ, ಮಾಜಿ ಅಧ್ಯಕ್ಷ ಭಗವಂತ ಎಂಟಮನೆ, ಮುಖಂಡರಾದ ಭಗವಂತ ದೊರೆ, ಪೀರಪ್ಪ ಹಾದಿಮನಿ, ಸೋಫಿಸಾಬ ಮತ್ತಿತರರು ಪಾಲ್ಗೊಂಡಿದರು.

ನಂತರ ಓಂ ಸಾಯಿ ಕಲಾ ತಂಡದ ಸದಸ್ಯರಾದ ಶಶಿಕಾಂತ ನಿರಗುಡಿ, ಜಯಶ್ರೀ ಗುತ್ತೇದಾರ, ಗಂಗುಬಾಯಿ, ಸಂದೀಪ ಕಾಳಕಿಂಗೆ ಅವರಿಂದ ಎರಡು ಬೀದಿ ನಾಟಕ ಪ್ರದರ್ಶಿಸಲಾಯಿತು.

emedialine

Recent Posts

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

2 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

4 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

17 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

17 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

19 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

19 hours ago