ಬಿಸಿ ಬಿಸಿ ಸುದ್ದಿ

ಶಹಾಬಾದ: ಚರಗ ಚೆಲ್ಲಿ ಭೂಮಿತಾಯಿಗೆ ಕೃತಜ್ಞತೆ ಸಲ್ಲಿಸಿದ ರೈತರು

ಶಹಾಬಾದ: ಎಳ್ಳ ಅಮವಾಸ್ಯೆ ನಿಮಿತ್ಯ ರವಿವಾರ ತಾಲೂಕಿನಾದ್ಯಂತ ರೈತಾಪಿ ವರ್ಗದವರು ಹೊಲದಲ್ಲಿ ಬೆಳೆದು ನಿಂತ ಪೈರಿಗೆ ಸಂಭ್ರಮದಿಂದ ಚರಗ ಚೆಲ್ಲಿ ಭೂಮಿತಾಯಿಗೆ ಕೃತಜ್ಞತೆ ಸಲ್ಲಿಸಿದರು.

ನಗರದ ಸುತ್ತಮುತ್ತಲಿನ ಗ್ರಾಮಗಳಾದ ಭಂಕೂರ, ಮುತ್ತಿಗಿ, ನಗರದ ಸುತ್ತಮುತ್ತಲಿನ ಗ್ರಾಮಗಳಾದ ಭಂಕೂರ, ಮುತ್ತಿಗಿ, ರಾವೂರ, ಮಾಲಗತ್ತಿ, ತೊನಸಿನ ಹಳ್ಳಿ, ಮರತೂರ, ತೆಗನೂರ, ಕಿರಣಗಿ, ಗೋಳಾದಲ್ಲಿ ರೈತರು ಭೂತಾಯಿಗೆ ಚರಗ ಚೆಲ್ಲಿ ಎಳ್ಳ ಅಮಾವಾಸ್ಯೆಯನ್ನು ಸಂಭ್ರಮದಿಂದ ಆಚರಿಸಿದರು. ರೈತಾಪಿ ಜನರು ತಮ್ಮ ಹೊಲಗಳಿಗೆ ತೆರಳಿ ಜೋಳದ ದಂಟಿನ ಮಂಟಪವನ್ನು ಕಟ್ಟಿ ಪಂಚ ಪಾಂಡವರಿಗೆ ಕೂಡಿಸಿ ಪೂಜೆ ಮಾಡಿದರು. ಬೆಳೆದ ಬೇಳೆಗಳಾದ ತೊಗರಿ, ಜೋಳ, ಕಡಲೆ, ಗೋಧಿ ಬೆಳೆಗಳಿಗೆ ಪೂಜೆ ಸಲ್ಲಿಸಿ ಚರಗ ಚೆಲ್ಲುವ ಮೂಲಕ ಬೆಳೆ ಸಮೃದ್ಧಿಯಾಗಲಿ ಎಂದು ಭೂತಾಯಿಗೆ ಪ್ರಾರ್ಥನೆ ಸಲ್ಲಿಸಿದರು.

ಬೆಳಿಗ್ಗೆ ಎತ್ತಿನ ಬಂಡಿ, ಟ್ರ್ಯಾಕ್ಟರ್, ಮೋಟಾರ ಸೈಕಲ್‌ಗಳಲ್ಲಿ ಹೊಲಗಳಿಗೆ ತೆರಳಿದ ರೈತರು ತಮ್ಮ ಸ್ನೇಹಿತರನ್ನು ಕರೆದುಕೊಂಡು ಚರಗಕ್ಕೆ ಮೆರಗು ತಂದರು. ಹಬ್ಬದ ವಿಶೇಷವಾಗಿ ಹೊಲದಲ್ಲಿ ಮೊದಲು ಭೂಮಿ ತಾಯಿಗೆ ಪೂಜೆ ಸಲ್ಲಿಸಿ ಮೊದಲ ನೈವೈಧ್ಯವನ್ನು ಹುಲ್ಲುಲ್ಲಿಗೋ ಚಳ್ಳಂಬಚರಿಗೋ ಎಂದು ಕೂಗುತ್ತಾ ಹೊಲದ ತುಂಬೆಲ್ಲ ಚರಗ ಚೆಲ್ಲಿದರು.

ಬಳಿಕ ಹಬ್ಬದ ಊಟಕ್ಕೆಂದು ತಯಾರಿಸಿದ್ದ ಶೆಂಗಾ ಹೋಳಿಗೆ, ಮೊಸರು,ಚಟ್ನಿ, ಎಳ್ಳಿನ ಸಜ್ಜೆ ರೊಟ್ಟಿ, ಅನ್ನದ ಬಾನ, ಕಡಬು, ಹೋಳಿಗೆ,ಕರಿಗಡಬು ನಾನಾತರಹದ ಪಲ್ಯೆ ಸೇರಿದಂತೆ ಬಗೆಬಗೆಯ ಭೋಜನವನ್ನು ಹೊಲದಲ್ಲಿ ಕುಳಿತು ಕುಟುಂಬ ವರ್ಗದವರು, ಸ್ನೇಹಿತರು ಹಾಗೂ ಬಂದು ಭಾಂದವರು ಸವಿದರು.

emedialine

Recent Posts

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

21 mins ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

54 mins ago

ಖಾಸಗಿ ಶಾಲೆಗಳಲ್ಲಿ ಡೊನೆಷನ್ ಹೆಚ್ಚಳ: ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೆಚ್ಚಿನ ಶುಲ್ಕ ಪಡೆಯುವ ಖಾಸಗಿ ಶಾಲೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ…

56 mins ago

ಅಭಾ ವೀರಶೈವ ಲಿಂಗಾಯತ ಮಹಾಸಭಾ ಚುನಾಣೆಗೆ 22 ನಾಮಪತ್ರ ಸಲ್ಲಿಕೆ

ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ವiಬಾಸಭಾ ಸುರಪುರ ತಾಲೂಕು ಘಟಕಕ್ಕೆ ಅಧ್ಯಕ್ಷ ಮತ್ತು ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು,ಒಟ್ಟು…

1 hour ago

ಡೆಂಘೀ ಜ್ವರದ ಲಕ್ಷಣ ಕಂಡುಬಂದಲ್ಲಿ ಆಸ್ಪತ್ರೆಗೆ ಬಂದು ಪರೀಕ್ಷಿಸಿಕೊಳ್ಳಿ; ಡಾ.ಆರ್.ವಿ ನಾಯಕ

ಸುರಪುರ: ತಾಲೂಕಿನ ಜನರು ಯಾರಿಗಾದರೂ ವಿಪರೀತ ಜ್ವರ,ತಲೆ ನೋವು ಕಾಣಿಸಿಕೊಂಡಲ್ಲಿ ತಕ್ಷಣ ಅಂತವರು ಹತ್ತಿರದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ…

1 hour ago

ಕೊಲೆ ಆರೋಪಿಗಳನ್ನು ಬಂಧಿಸಲು ಪೊಲೀಸರು ಮುಂದಾಗಬೇಕು

ಸುರಪುರ: ತಿಪ್ಪನಹಳ್ಳಿ ಗ್ರಾಮದಲ್ಲಿ ಏಪ್ರಿಲ್ 16 ರಂದು ರಾತ್ರಿ ಭಾಗಪ್ಪ ಲಕ್ಷ್ಮೀಪುರ ಎನ್ನುವ ಸಾವು ಅಸ್ವಾಭಾವಿಕ ಸಾವಲ್ಲ ಅದು ಕೊಲೆಯಾಗಿದ್ದು,ಕೂಡಲೇ…

1 hour ago