ಬಿಸಿ ಬಿಸಿ ಸುದ್ದಿ

ಶಹಾಬಾದ: ಸಂಭ್ರಮದಿಂದ ಆಚರಿಸಿದ ಎಳ್ಳು ಅಮವ್ಯಾಸೆ ಹಬ್ಬ

ಶಹಾಬಾದ: ಎಳ್ಳು ಅಮಾವಾಸ್ಯೆ ಅಪ್ಪಟ ರೈತರ ಹಬ್ಬ. ಹೊಲದಲ್ಲಿ ಬೆಳೆದು ನಿಂತಿರುವ ಹಿಂಗಾರು ಪೈರುಗಳ ನಡುವೆ ಬನ್ನಿ ಮರ ಇಲ್ಲವೆ ಬನ್ನಿಕಂಟಿಯನ್ನು ಹುಡುಕಿ ಅದಕ್ಕೆ ಪೂಜೆ ಸಲ್ಲಿಸುವುದರೊಂದರಿಗೆ ಭೂಮಿತಾಯಿಗೆ ಚೆರಗ ಚೆಲ್ಲುವ ಮೂಲಕ ಎಳ್ಳು ಅಮವ್ಯಾಸೆ ಹಬ್ಬವನ್ನು ರವಿವಾರ ರೈತರು ಆಚರಿಸಿದರು.

ಎಳ್ಳು ಅಮವಾಸ್ಯೆ ೩-೪ದಿನ ಇರುವಾಗಲೇ ರೆತರ ಮನೆಗಳಲ್ಲಿ ಹಬ್ಬದ ತಯಾರಿ ನಡೆಯುತ್ತದೆ. ಎಳ್ಳು ಹಚ್ಚಿದ ಸಜ್ಜೆ, ಜೋಳದ ರೊಟ್ಟಿ ತಯಾರಿಸುವುದು, ನಾನಾ ಬಗೆಯ ಚಟ್ನಿ, ಕಾಳು, ಎಣ್ಣೆಗಾಯಿ, ಎಳ್ಳು ಹಾಗೂ ಸೇಂಗಾ ಹೋಳಿಗೆ ತಯಾರಿಸಲಾಗುತ್ತದೆ. ಅಮಾವಾಸ್ಯೆ ದಿನ ದೊಡ್ಡ ಬುತ್ತಿಯ ಗಂಟು ಕಟ್ಟಿಕೊಂಡು ಕುಟುಂಬದವರೆಲ್ಲರೂ ಎತ್ತಿನ ಬಂಡಿಯಲ್ಲಿ ಕುಳಿತು ಹೊಲಕ್ಕೆ ಹೋಗುವ ದೃಶ್ಯ ಮಾತ್ರ ದೊಡ್ಡ ಸಡಗರದಂತೆ ಕಾಣುತ್ತಿತ್ತು. ಜತೆಗೆ ತಮ್ಮ ಸಂಬಂಧಿಗಳು, ಊರಿನ ಇತರರು ಮತ್ತು ಹಿತೆಷಿಗಳನ್ನು ಹೊಲಕ್ಕೆ ಕರೆದೊಯ್ದು, ಚೆರಗ ಚೆಲ್ಲಿದ ನಂತರ ಸಾಮೂಹಿಕ ಊಟ ಸವಿದು ಆತ್ಮೀಯತೆಯನ್ನು ಮೆರೆದರು.

ಎತ್ತುಗಳಿಗೆ ಝೂಲ ಹಾಕಿ ಕೋಡಣಸು, ಗೊಂಡೆ, ಹಣೆಕಟ್ಟುಗಳಿಂದ ಶೃಂಗರಿಸಲಾಗಿತ್ತಿ.ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ಎತ್ತುಗಳು ಕೊರಳ ಮತ್ತು ಹಣೆಗೆಜ್ಜೆಯನ್ನು ನುಡಿಸುತ್ತ ಹೊಲಗಳ ಕಡೆಗೆ ಬಂಡಿ ಎಳೆದುಕೊಂಡು ಸಾಗುವುದು ಗ್ರಾಮೀಣ ಸೊಗಡನ್ನು ಎತ್ತಿ ತೋರಿಸುತ್ತಿತ್ತು.

ಎಳ್ಳು ಅಮಾವಾಸ್ಯೆ ಹಬ್ಬ ರೈತರ ಹಬ್ಬವಾಗಿದ್ದು, ಜಾತಿ, ಮತ ಭೇದವಿಲ್ಲ. ಒಕ್ಕಲುತನ ಅವಲಂಬಿಸಿರುವ ಮುಸ್ಲಿಂ ಕುಟುಂಬಗಳೂ ಎಳ್ಳು ಅಮಾವಾಸ್ಯೆಯಂದು ಹೊಲಕ್ಕೆ ಹೋಗಿ ಚೆರಗ ಚೆಲ್ಲಿದರು.

emedialine

Recent Posts

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

3 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

4 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

17 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

17 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

19 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

19 hours ago