ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದಲ್ಲಿ ಅಪ್ಪು ಅಭಿಮಾನಿ ಬಳಗದಿಂದ ಎಳ್ಳಮವಾಸ್ಯೆ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ನಟ ಪುನೀತ್ ರಾಜಕುಮಾರ ಅವರ ೨೦ ಅಡಿಯ ಕಟೌಟ್ ನಿರ್ಮಿಸಿ ಹಾಲಿನ ಅಭೀಷೇಕ ಮಾಡುವ ಮೂಲಕ ಅಪ್ಪು ಸ್ಮರಣೆ ಹಾಗು ಗೌರವ ಸಲ್ಲಿಸಿದರು.ಅಲ್ಲದೆ ಇದೇ ಸಂದರ್ಭದಲ್ಲಿ ಅಪ್ಪು ನೆನಪಲ್ಲಿ ಅನ್ನದಾಸೋಹ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು,ನಟರಾಗಿದ್ದ ಪುನೀತ್ ರಾಜಕುಮಾರ ಅವರು ಕೇವಲ ಒಬ್ಬ ನಟರಾಗಿ ಮಾತ್ರ ಹೊರಗಿನ ಜನರಿಗೆ ಗೊತ್ತಾಗಿದ್ದರು,ಆದರೆ ಅವರು ಮಾಡಿದ ಸಮಾಜ ಸೇವೆ ಎಲ್ಲರಿಗೂ ಮಾದರಿಯಾಗಿದೆ.ಅನಾಥಾಶ್ರಮ,ವೃದ್ಧಾಶ್ರಮ,ಸಾವಿರಾರು ಮಕ್ಕಳಿಗೆ ಉಚಿತ ಶಿಕ್ಷಣ ಅಲ್ಲದೆ ಅವರೊಬ್ಬ ಹೆಸರಾಂತ ನಟರಾದರು ಸರಕಾರದ ಯಾವುದೇ ಜಾಹೀರಾತಿನಲ್ಲಿ ನಟಿಸಲು ನಯಾಪೈಸೆ ಸಂಭಾವನೆ ಪಡೆಯದೆ ಸಮಾಜಕ್ಕೆ ಒಳ್ಳೆಯದಾಗುವ ನಿಟ್ಟಿನಲ್ಲಿ ನಟಿಸಿ ಜನರಿಗೆ ಉತ್ತಮವಾದ ಸಂದೇಶ ನೀಡುವ ಜೊತೆಗೆ ನಮ್ಮಂತ ಕೋಟ್ಯಾಂತರ ಅಭಿಮಾನಿಗಳು ಹಾಗು ಯುವಕರಿಗೆ ಮಾದರಿಯಾಗಿದ್ದು,ಅವರ ನೆನಪು ಚಿರವಾಗಿ ಉಳಿಸುವ ನಿಟ್ಟಿನಲ್ಲಿ ನಾವೆಲ್ಲರು ಅವರ ಕೆಲಸವನ್ನು ಸಾಧ್ಯವಾದಷ್ಟು ಮಾಡುವ ಮೂಲಕ ಅಪ್ಪು ಅವರನ್ನು ಸ್ಮರಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಅಜಯ್ ಬಿಲ್ಲವ್,ಮಲ್ಲಿಕಾರ್ಜುನ ಸುಬೇದಾರ್,ಬಸಪ್ಪ ಬಂಕಾಪುರ,ಹುಲಗಪ್ಪ,ಭೀಮಪ್ಪ,ರಾಮು ಬಂಕಾಪುರ,ನಾಗರಾಜ್, ರಾಹುಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…