ಡಾ. ಅಂಬೇಡ್ಕರ್ ಮೂರ್ತಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ

0
18

ಕಲಬುರಗಿ: ಇದೇ ಜ.4 ರಂದು ತಾಲ್ಲೂಕು ಆಡಳಿತ ಭವನ (ಮಿನಿ ವಿಧಾನಸೌಧ ) ಹಾಗೂ ಡಾ. ಬಿ ಆರ್ ಅಂಬೇಡ್ಕರ್ ಅವರ ಮೂರ್ತಿ ಉದ್ಘಾಟನೆ ಕಾರ್ಯಕ್ರಮಕ್ಕೆ ತಾಲ್ಲೂಕಿನ ಎಲ್ಲ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬಿಜೆಪಿ ಹಿರಿಯ ಮುಖಂಡ ಚನ್ನವಿರ ಕಾಳುಕಿಂಗೆ ಮನವಿ ಮಾಡಿದರು.

ಆಳಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಹಿರಿಯ ಮುಖಂಡ ಚನ್ನವಿರ ಕಾಳುಕಿಂಗೆ ಹಾಗೂ ಎಸ್ಸಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ  ಸುನೀಲ ಹಿರೋಳಿಕರ್ ತಾಲ್ಲೂಕು ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ರವಿವಾರ ಸಂಜೆ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ತಾಲ್ಲೂಕಿನ ಎಲ್ಲ ದಲಿತಪರ ಸಂಘಟನೆಗಳು,ಬುದ್ಧ- ಬಸವ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸ ಬೇಕೆಂದು ಕೋರಿದರು.

Contact Your\'s Advertisement; 9902492681

ಬಿಜೆಪಿ ಹಿರಿಯ ಮುಖಂಡರಾದ ಆನಂದರಾವ ಗಾಯಕವಾಡ, ಬಿಜೆಪಿ ಜಿಲ್ಲಾ ಮಾಧ್ಯಮ ಪ್ರತಿನಿಧಿ, ಸಂತೋಷ ಹಾದಿಮನಿ,ಎಸ್ಸಿ ಮೋರ್ಚಾ ಮಂಡಲ ಕಾರ್ಯದರ್ಶಿ ಗೌತಮ್ ಕೊಚ್ಚಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here