ಗ್ರಾಮ ಪಂಚಾಯಿತಿ ಸದಸ್ಯರಿಗೆ ತರಬೇತಿ ಕಾರ್ಯಗಾರ

ಮಡಿವಾಳ: ಗ್ರಾಮ ಪಂಚಾಯತಿ ಸದಸ್ಯರು ಗ್ರಾಮೀಣಾಭಿವೃದ್ಧಿಯಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸುತ್ತಾರೆ. ಸದಸ್ಯರಿಗೆ ಪಂಚಾಯತ್‌ ರಾಜ್ ವ್ಯವಸ್ಥೆ ಮತ್ತು ಕಾರ್ಯವಿಧಾನದ ಬಗ್ಗೆ ಅರಿವು ಇರಬೇಕಾಗುತ್ತದೆ ಎಂದು ಪಿಡಿಒ ದೀಪಾ.ಎನ್ ತಿಳಿಸಿದ್ದಾರೆ.

ಜನರ ಯೋಜನೆ, ಜನರ ಅಭಿವೃದ್ಧಿ(ವಿ ವಿ ಸಿ) ಮತ್ತು ಗ್ರಾಮೀಣ ಬಡತನ ನಿವಾರಣಾ ಯೋಜನೆ (ವಿವಿಆರ್ ವಿ) ಹಾಗೂ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಮೈಸೂರು ವತಿಯಿಂದ ಮಾಲೂರು ತಾಲ್ಲೂಕಿನ ಮಡಿವಾಳ ಗ್ರಾಮದಲ್ಲಿ  ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಸದಸ್ಯರು, ಸ್ತ್ರೀ ಶಕ್ತಿ ಒಕ್ಕೂಟದ ಪ್ರತಿನಿಧಿಗಳು, ಗ್ರಾಮ ಪಂಚಾಯಿತಿ ನೌಕರರಿಗೆ ಒಂದು ದಿನದ ತರಬೇತಿಯನ್ನು ಪಿಡಿಒ ದೀಪಾ.ಎನ್ ರವರು ನೀಡಿದರು. ಬಡತನ ನಿರ್ಮೂಲನೆ ಸರ್ಕಾರದ ಸೇವೆಗಳ ಬಳಕೆ ಬಗ್ಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ತರಬೇತಿ ಕಾರ್ಯಗಾರವು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಮಮತ.ಆರ್ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಸದಸ್ಯರಾದ ಪದ್ಮ, ಎಲ್. ಮಂಜುನಾಥ್, ಪದ್ಮಾವತಿ, ನಾಗೇಂದ್ರ ಗೌಡ, ಶುಭಾಷಿಣಿ, ಮಂಜುಳ, ನವೀನ್. ಕೆ. ಎಸ್, ಲಾವಣ್ಯ, ವೆಂಕಟಲಕ್ಷ್ಮೀ ಹಾಗೂ ಇತರರು ಇದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

1 hour ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

1 hour ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

1 hour ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

1 hour ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

1 hour ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420