ಶಹಾಬಾದ: ನಗರದಲ್ಲಿ ಬುಧವಾರ ನಡೆದ ಬಸವೇಶ್ವರ ಪುತ್ಥಳಿ ಶಂಕುಸ್ಥಾಪನೆಯ ಅಡಿಗಲ್ಲಿನಲ್ಲಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ ಅಧಿಕಾರಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ನಗರಸಭೆಯ ಸದಸ್ಯ ರವಿ ರಾಠೋಡ ಮೇಲಾಧಿಕಾರಿಗಳಿಗೆ ಆಗ್ರಹಿಸಿದ್ದಾರೆ.
ಶಂಕುಸ್ಥಾಪನೆ ಅಡಿಗಲ್ಲಿನಲ್ಲಿ ಅತಿಥಿಗಳ ಸಾಲಿನಲ್ಲಿ ನಗರಸಭೆಯ ಸದಸ್ಯ ನಾಗರಾಜ ಕರಣಿಕ್, ವೀರಶೈವ ಸಮಾಜದ ಅಧ್ಯಕ್ಷರು ಹಾಗೂ ನಗರಸಭೆಯ ಸದಸ್ಯ ಸೂರ್ಯಕಾಂತ ಕೋಬಾಳ,ವೀರಶೈವ ಸಮಾಜದ ನಿಕಟ ಪೂರ್ವ ಅಧ್ಯಕ್ಷ ವಿಜಯಕುಮಾರ ಮುಟ್ಟತ್ತಿ, ಹಳೆಶಹಾಬಾದ ವೀರಶೈವ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ ಚಂದನಕೇರಾ ಅವರ ಹೆಸರನ್ನು ಹಾಕುವ ಮೂಲಕ ಶಿಷ್ಟಾಚಾರ ಉಲ್ಲಂಘನೆ ಅಧಿಕಾರಿಗಳು ಮಾಡಿದ್ದಾರೆ.
ನಗರಸಭೆಯ ಸದಸ್ಯರ ಹೆಸರಿನ ಸಾಲಿನಲ್ಲಿ ನಾಗರಾಜ ಕರಣಿಕ್ ಹಾಗೂ ಸೂರ್ಯಕಾಂತ ಕೋಬಾಳ ಹೆಸರು ಹಾಕದೇ ಗೌರವ ಅತಿಥಿಗಳ ಸಾಲಿನಲ್ಲಿ ಹಾಕಿ ಒಂದು ಕಣ್ಣಿಗೆ ಬೆಣ್ಣೆ ಮತ್ತು ಇನ್ನೊಂದು ಕಣ್ಣಿಗೆ ಸುಣ್ಣ ಎನ್ನುವಂತೆ ಮಾಡಿದ್ದಾರೆ.ಅಲ್ಲದೇ ಅತಿಥಿಗಳಾಗಿ ಶಿಷ್ಟಾಚಾರದ ಪ್ರಕಾರ ಯಾವುದೇ ಸಮಾಜದ ಅಧ್ಯಕ್ಷರ ಹೆಸರು ಬರೋದಿಲ್ಲ ಎಂಬುದು ಗೊತ್ತಿದ್ದರೂ, ಒಂದು ಸಮಾಜದ ಮುಖಂಡರನ್ನು ಓಲೈಸಲು ಹೋಗಿ ಹೆಸರು ಹಾಕಿರುವುದು ಶಿಷ್ಟಾಚಾರದ ಸಂಪೂರ್ಣ ಉಲ್ಲಂಘನೆಯಾಗಿದೆ.
ಅಲ್ಲದೇ ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ನಾಟೇಕಾರ ಅಧಿಕಾರದ ಅವಧಿ ಮುಗಿದಿದ್ದರೂ ಅವರ ಹೆಸರನ್ನು ಅತಿಥಿಗಳ ಸಾಲಿನಲ್ಲಿ ಹಾಕಲಾಗಿದೆ. ಈ ಕೂಡಲೇಶಿಷ್ಟಾಚಾರ ಉಲ್ಲಂಘನೆ ಮಾಡಿದ ಅಧಿಕಾರUಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ರವಿ ಒತ್ತಾಯಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…