ಬಿಸಿ ಬಿಸಿ ಸುದ್ದಿ

ಕೊವಿಡ್ ಚಿಕಿತ್ಸೆಗಾಗಿ 1000 ಹಾಸಿಗೆ ಮೀಸಲು; ವೈದ್ಯಕೀಯ ಅಧೀಕ್ಷಕ ಅರುಣಕುಮಾರ್‌

ಹುಬ್ಬಳ್ಳಿ: ಕೋವಿಡ್‌ನ ಮೂರನೆ ಅಲೆ ಎದುರಿಸಲು ಕಿಮ್ಸ್‌ ಸಜ್ಜಾಗಿದ್ದು, ನಮ್ಮಲ್ಲಿರುವ ಒಟ್ಟು 2,000 ಹಾಸಿಗೆಗೆಳ ಪೈಕಿ ಒಂದು ಸಾವಿರ ಹಾಸಿಗೆಗಳನ್ನು ಕೋವಿಡ್‌ ರೋಗಿಗಳಿಗೆ ಮೀಸಲಿಡಲಾಗಿದೆ ಎಂದು ಕಿಮ್ಸ್‌ ವೈದ್ಯಕೀಯ ಅಧೀಕ್ಷಕ ಸಿ. ಅರುಣಕುಮಾರ್‌ ಹೇಳಿದರು.

ಕೋವಿಡ್‌ ಹಾಗೂ ಓಮೈಕ್ರಾನ್‌ ಎದುರಿಸಲು ಕಿಮ್ಸ್‌ ಮಾಡಿಕೊಂಡ ತಯಾರಿ ಬಗ್ಗೆ ಪರಿಶೀಲನೆ ಮಾಡಲು ಬುಧವಾರ ಆಸ್ಪತ್ರೆಗೆ ಭೇಟಿ ನೀಡಿದ ಕಾಂಗ್ರೆಸ್‌ ತಂಡಕ್ಕೆ ಅವರು ಈ ಮಾಹಿತಿ ನೀಡಿದರು.

‘ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡುವ ಜೊತೆಗೆ; ಕೋವಿಡ್‌ ಅಲ್ಲದ ರೋಗಿಗಳ ಚಿಕಿತ್ಸೆಗೂ ತೊಂದರೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ‘ವೇದಾಂತ್‌ ಕೇರ್ಸ್‌ ಫೀಲ್ಡ್‌’ ಆಸ್ಪತ್ರೆಯಲ್ಲಿ 100, ತಾಯಿ ಮತ್ತು ಮಗುವಿನ ಆಸ್ಪತ್ರೆಯಲ್ಲಿ 200 ಹಾಸಿಗೆಗಳನ್ನು ಮೊದಲು ಬಳಕೆ ಮಾಡಲಾಗುವುದು’ ಎಂದು ತಿಳಿಸಿದರು.

‘ಕಿಮ್ಸ್‌ನಲ್ಲಿ 1500 ಆಮ್ಲಜನಕ ಸೌಲಭ್ಯ ಹೊಂದಿರುವ ಹಾಸಿಗೆಗಳಿದ್ದು, 150 ಐಸಿಯು ಹಾಸಿಗೆಗಳಿಗೆ ವೆಂಟಿಲೇಟರ್‌ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ರೋಗಿಗಳಿಗೆ ಒದಗಿಸಲು ಅಗತ್ಯವಾಗಿ ಬೇಕಾದಷ್ಟು ಆಮ್ಲಜನಕ ಸಂಗ್ರಹಣಾ ಸಾಮರ್ಥ್ಯ ನಮ್ಮಲ್ಲಿದೆ’ ಎಂದು ವಿವರಿಸಿದರು. ಕಿಮ್ಸ್‌ ಉಪ ವೈದ್ಯಕೀಯ ಅಧೀಕ್ಷಕ ರಾಜಶೇಖರ ದ್ಯಾಬೇರಿ, ಮುಖ್ಯ ವೈದ್ಯಕೀಯ ಅಧಿಕಾರಿ ಸಿದ್ದೇಶ್ವರ ಕಟಕೋಳ ಇದ್ದರು.

ನಿಯೋಗದಲ್ಲಿ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ್‌ ಹಳ್ಳೂರ, ರಜತ್‌ ಉಳ್ಳಾಗಡ್ಡಿಮಠ, ನಾಗರಾಜ ಗೌರಿ, ನಿರಂಜನ ಹಿರೇಮಠ, ಇಮ್ರಾನ್‌ ಯಲಿಗಾರ, ಶಾಹಿಮಾನ್‌ ಮುಜಾಹಿದ್‌ ಇದ್ದರು. ಇವರ ತಂಡ ವೇದಾಂತ್‌ ಫೀಲ್ಡ್‌ ತಾತ್ಕಾಲಿಕ ಆಸ್ಪತ್ರೆಗೆ ಭೇಟಿ ನೀಡಿ ‘ಇದು ಸ್ವಚ್ಛವಾಗಿಲ್ಲ. ನಿರ್ವಹಣೆ ಕೊರತೆ ಎದ್ದು ಕಾಣುತ್ತಿದೆ’ ಎಂದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

3 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

4 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

4 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

4 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

5 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

5 hours ago