ಮೊಬೈಲ್ ರಿಚಾರ್ಜ್ -ಡಾಟಾ ಪ್ಯಾಕ್ ದರ ಹೆಚ್ಚಳವನ್ನು ವಿರೋಧಿಸಿ ಪ್ರತಿಭಟನೆ

0
12

ಶಹಾಬಾದ: ಮೊಬೈಲ್ ರಿಚಾರ್ಜ್ ಹಾಗೂ ಡಾಟಾ ಪ್ಯಾಕ್ ದರ ಹೆಚ್ಚಳವನ್ನು ವಿರೋಧಿಸಿ ನಗರದ ಎಐಡಿಎಸ್‌ಒ ಯುವಜನ ಸಂಘಟನೆ ವತಿಯಿಂದ ಶುಕ್ರವಾರ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಸ್‌ಯುಸಿಐ (ಸಿ) ಪಕ್ಷದ ಸದಸ್ಯರಾದ ಗುಂಡಮ್ಮ ಮಡಿವಾಳ , ಕೋವಿಡನಂತಹ ಪರಿಸ್ಥಿತಿಯಲ್ಲಿ ಸಾಮಾನ್ಯ ಜನರ ಆರ್ಥಿಕ ಸ್ಥಿತಿಯು ತೀವ್ರ ಸಂಕಷ್ಟದಲ್ಲಿದೆ. ಆದರೆ ತಮ್ಮ ಲಾಭಕ್ಕಾಗಿ ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರಿಚಾರ್ಜ್ ಹಾಗೂ ಡಾಟಾ ಪ್ಯಾಕ್ ದರಗಳನ್ನು ಹೆಚ್ಚಿಸಿವೆ. ಫೋನ್ ಮತ್ತು ಇಂಟರ್ನೆಟ್ ಮೇಲಿನ ಅವಲಂಬನೆಯು ಅಸಾಧಾರಣವಾಗಿ ಹೆಚ್ಚಾಗಿದೆ.

Contact Your\'s Advertisement; 9902492681

ವಿದ್ಯಾರ್ಥಿಗಳು, ಯುವಕರು, ಮತ್ತು ಸಾರ್ವಜನಿಕರು ತಮ್ಮ ಜೀವನೋಪಾಯಕ್ಕಾಗಿ ಆನ್ಲೈನ್ ತರಗತಿಗಳು, ಆನ್ಲೈನ್ ಅಪ್ಲಿಕೇಶನಗಳು, ಆನ್ಲೈನ್ ವಹಿವಾಟುಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಇದರಿಂದ ಮೊಬೈಲ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಇಂತಹ ಪರಸ್ಥಿತಿಯಲ್ಲಿ ಏರ‍್ಟೆಲ್, ಜಿಯೋ, ವೊಡಾಪೋನ್, ಐಡಿಯಾದಂತಹ ಎಲ್ಲಾ ಮೊಬೈಲ್ ಕಂಪನಿಗಳು ನೆಟ್ ಪ್ಯಾಕ್ ಮತ್ತು ರೀಚಾರ್ಜ್ ದರಗಳನ್ನು ಶೇಕಡಾ ೨೦ ರಿಂದ ೨೫ ವರೆಗೆ ಹೆಚ್ಚಿಸಿವೆ. ಇದು ಸಂಪೊರ್ಣವಾಗಿ ಜನವಿರೋಧಿಯಾಗಿದೆ .ಇದಕ್ಕೆ ಸರ್ಕಾರಗಳು ಕುಮ್ಮಕ್ಕು ನೀಡುತ್ತಿರುವುದು ಮಾತ್ರ ದುರಂತ ಎಂದರು.

ಎಐಡಿವಾಯ್‌ಒ ಕಾರ್ಯದರ್ಶಿ ರಮೇಶ ದೇವಕರ್ ಮಾತನಾಡಿ, ಪೂರೈಕೆದಾರರು ಮತ್ತು ಗ್ರಾಹಕರ ನಡುವೆ ತೀರ್ಪುಗಾರರ ಪಾತ್ರವನ್ನು ವಹಿಸಬೇಕಾದ ಭಾರತಿಯ ಟೆಲಿಕಾಂ ನಿಯಂತ್ರಣ ಪ್ರಾದಿಕಾರವು (ಟ್ರಾಯ್) ಸಂಪೂರ್ಣವಾಗಿ ಮೌನವಾಗಿರುವುದನ್ನು ನೋಡಿ ಆಘಾತವಾಗಿದೆ. ಈ ಕೂಡಲೇ ಟ್ರಾಯ್ ಮಧ್ಯ ಪ್ರವೇಶಿಸಿ ಖಾಸಗಿ ಟೆಲಿಕಾಂ ಕಂಪನಿಗಳ ಹಗಲು ದರೋಡೆಯನ್ನು ನಿಲ್ಲಿಸಬೇಕು ಎಂದರು.

ಈ ಹೋರಾಟದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಸಿದ್ದು ಚೌದ್ರಿ ಮತ್ತು ಸ್ಥಳೀಯ ಅಧ್ಯಕ್ಷರಾದ ರಘು ಪವಾರ, ತೇಜಸ್ ಇಬ್ರಾಹಿಂಪುರ,ರಾಜೇಂದ್ರ ಅತನೂರ, ತುಳಜರಾಮ ಎನ.ಕೆ, ತಿರುಪತಿ, ದೇವರಾಜ, ಶ್ರೀನಿವಾಸ್, ಶ್ರೀಶೈಲ್, ರಘು ಮಾನೆ, ಹಣಮಂತ, ಅಂಬ್ರೇಶ, ಕಿರಣ ಮಾನೆ, ಅಜಯ ಸೇರಿದಂತೆ ಸಾರ್ವಜನಿಕರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here