ದಾವಣಗೆರೆ : ಧೂಡಾಗೆ ಜಮೀನು ನೀಡಲು ರೈತರ ಸಹಮತಿ, ನಿವೇಶನ ಆಕಾಂಕ್ಷಿಗಳಲ್ಲಿ ನಿರೀಕ್ಷೆ

ದಾವಣಗೆರೆ: ಇಲ್ಲಿನ ಹಳೇ ಕುಂದವಾಡದಲ್ಲಿ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರವು (ಧೂಡಾ) 53 ಎಕರೆಯಲ್ಲಿ ಹೊಸ ಬಡಾವಣೆ ಅಭಿವೃದ್ಧಿಪಡಿಸಲು ಉದ್ದೇಶಿಸಿದ್ದ ಯೋಜನೆಗೆ ಒಂದು ಎಕರೆಗೆ ₹ 1.18 ಕೋಟಿ ದರದಲ್ಲಿ ಜಮೀನು ನೀಡಲು ರೈತರು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಒಪ್ಪಿಗೆ ಸೂಚಿಸಿದ್ದಾರೆ.

ಡಿಸೆಂಬರ್‌ 17ರಂದು ನಡೆದ ಸಭೆಯಲ್ಲಿ ಹಲವು ರೈತರು ಭೂಮಿ ನೀಡಲು ಹಿಂದೇಟು ಹಾಕಿದ್ದರು. ಆದರೆ, ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹೆಚ್ಚಿನ ದರ ಕೊಡಿಸುವ ಭರವಸೆ ಸಿಕ್ಕಿದ್ದರಿಂದ ರೈತರು ಜಮೀನು ನೀಡಲು ಸಹಮತಿ ನೀಡಿದ್ದಾರೆ. ಇದರೊಂದಿಗೆ ನಿವೇಶನ ಆಕಾಂಕ್ಷಿಗಳಲ್ಲಿ ನಿರೀಕ್ಷೆಗಳು ಗರಿಗಿದರಿವೆ.

ಹಳೇ ಕುಂದವಾಡ ಗ್ರಾಮದ ವಿವಿಧ ಸರ್ವೆ ನಂಬರ್‌ಗಳಲ್ಲಿ ಒಟ್ಟು 53 ಎಕರೆ 19.8 ಗುಂಟೆ ಜಮೀನಿನಲ್ಲಿ ವಸತಿ ಯೋಜನೆ ಅಭಿವೃದ್ಧಿಪಡಿಸಲು ‘ಧೂಡಾ’ ನಿರ್ಧರಿಸಿತ್ತು. ಬೇಡಿಕೆ ಸಮೀಕ್ಷೆ ನಡೆಸಿದಾಗ 20 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಇದೀಗ ರೈತರು ಜಮೀನು ನೀಡಲು ಒಪ್ಪಿಗೆ ನೀಡಿರುವುದರಿಂದ ಯೋಜನೆ ಅನುಷ್ಠಾನದ ಮುಖ್ಯ ಘಟ್ಟವೊಂದು ನಿರ್ವಿಘ್ನವಾಗಿ ನೆರವೇರಿದಂತಾಗಿದೆ.

ಸಭೆಯಲ್ಲಿ ಪಾಲ್ಗೊಂಡಿದ್ದ ರೈತರು, ‘ಒಂದು ಎಕರೆಗೆ ₹ 1.25 ಕೋಟಿ ದರ ನಿಗದಿಗೊಳಿಸಬೇಕು. ಭೂಮಿ ನೀಡುವ ರೈತರಿಗೆ ಒಂದು ನಿವೇಶನವನ್ನು ಧೂಡಾ ನಿಗದಿಗೊಳಿಸುವ ದರದಲ್ಲಿ ನೀಡಬೇಕು’ ಎಂಬ ಬೇಡಿಕೆಯನ್ನು ಮುಂದಿಟ್ಟಿದ್ದರು. ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್‌, ಧೂಡಾ ಅಧ್ಯಕ್ಷ ದೇವರಮನಿ ಶಿವಕುಮಾರ್‌ ಅವರು ಸಮಾಲೋಚನೆ ನಡೆಸಿ, ಅಂತಿಮವಾಗಿ ಒಂದು ಎಕರೆಗೆ ₹ 1.18 ಕೋಟಿ ದರ ನಿಗದಿಗೊಳಿಸಲು ಮುಂದಿಟ್ಟ ಪ್ರಸ್ತಾವಕ್ಕೆ ರೈತರು ಸಹಮತ ವ್ಯಕ್ತಪಡಿಸಿದರು.

ಧೂಡಾ ಆಯುಕ್ತ ಬಿ.ಟಿ. ಕುಮಾರಸ್ವಾಮಿ, ತಹಶೀಲ್ದಾರ್‌ ಗಿರೀಶ್, ಉಪನೋಂದಣಾಧಿಕಾರಿ ಹಾಗೂ ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಕೆ.ಎಚ್. ಶ್ರೀಕರ್, ಪ್ರಾಧಿಕಾರದ ಸದಸ್ಯರಾದ ಮಾರುತಿರಾವ್ ಘಾಟ್ಗೆ, ಲಕ್ಷ್ಮಣ, ಬಾತಿ ಚಂದ್ರಶೇಖರ್, ಗೌರಮ್ಮ ವಿ. ಪಾಟೀಲ್, ರೈತ ಮುಖಂಡರಾದ ಜಿ.ಸಿ. ದೇವರಾಜ್, ಎಂ.ಹನುಮಂತಪ್ಪ, ಷಣ್ಮುಖಪ್ಪ, ನರಸಪ್ಪರ ಶಿವಣ್ಣ ಸಭೆಯಲ್ಲಿ ಹಾಜರಿದ್ದರು.

‘ಶೀಘ್ರವೇ ಸರ್ಕಾರಕ್ಕೆ ಪ್ರಸ್ತಾವ’: ‘ಈ ಭಾಗದ ಜಮೀನಿಗೆ ಒಂದು ಎಕರೆಗೆ ₹ 50 ಲಕ್ಷ ದರವನ್ನು ಉಪನೋಂದಣಿ ಕಚೇರಿ ನಿಗದಿಗೊಳಿಸಿದೆ. ಇದರ ಎರಡು ಪಟ್ಟು ದರ ನಿಗದಿಗೊಳಿಸಲು ಅವಕಾಶವಿತ್ತು. ಆದರೆ, ಉದ್ದೇಶಿತ ಯೋಜನೆಯ ಜಮೀನು ನಗರಕ್ಕೆ ಹೊಂದಿಕೊಂಡಿರುವುದರಿಂದ ಹೆಚ್ಚಿನ ಬೆಲೆ ನೀಡಬೇಕು ಎಂದು ರೈತರು ಪ್ರತಿಪಾದಿಸಿದ್ದರು. ಹೀಗಾಗಿ ಎಕರೆಗೆ ₹ 1.18 ಕೋಟಿ ದರವನ್ನು ಜಿಲ್ಲಾಧಿಕಾರಿ ನಿಗದಿಪಡಿಸಿದ್ದಾರೆ. ಹೆಚ್ಚುವರಿ ₹ 18 ಲಕ್ಷಕ್ಕೆ ಅನುಮೋದನೆ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಧೂಡಾ ಆಯುಕ್ತ ಬಿ.ಟಿ.ಕುಮಾರಸ್ವಾಮಿ ‘ಇ-ಮೀಡಿಯಾಲೈನ್’ಗೆ ಪ್ರತಿಕ್ರಿಯಿಸಿದರು.

‘ಭೂಮಿ ನೀಡುವ ರೈತರಿಗೆ ಒಂದು ನಿವೇಶನ ನೀಡಬೇಕು ಎಂಬ ಬೇಡಿಕೆಯ ಬಗ್ಗೆಯೂ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು. ಸರ್ಕಾರದಿಂದ ಅನುಮೋದನೆ ಸಿಕ್ಕ ತಕ್ಷಣವೇ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಲಾಗುವುದು. ರೈತರ ಜಮೀನು ಖರೀದಿಸಲು ಅಗತ್ಯವಿರುವ ಹಣ ನಮ್ಮ ಬಳಿ ಲಭ್ಯವಿದೆ’ ಎಂದು ಅವರು ಮಾಹಿತಿ ನೀಡಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

9 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

11 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

12 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

12 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

12 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420