ದಾವಣಗೆರೆ: ಹೆಸ್ಕುಂದ ಚಂದ್ರಶೇಖರ ಅಡಿಗ ಅವರ ಐವತ್ತು ವರ್ಷಗಳ ಕಲಾ ಹಾಗೂ ಸಾಂಸ್ಕೃತಿಕ ಸೇವೆ ಅವಿಸ್ಮರಣೀಯವಾಗಿದೆ ಎಂದು ಮೈಸೂರಿನ ಸಾಹಿತಿ ಡಾ.ಕಬ್ಬಿನಾಲೆ ವಸಂತ ಭಾರದ್ವಜ್ ಅಭಿಪ್ರಾಯಪಟ್ಟರು.
ನಗರದ ಕುವೆಂಪು ಕನ್ನಡ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಹೆಸ್ಕುಂದ ಚಂದ್ರಶೇಖರ ಅಡಿಗ ಸ್ಮರಣೆಯ ‘ಚಂದ್ರಬಿಂಬ’ ಕೃತಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
‘ಚಂದ್ರಶೇಖರ ಅಡಿಗರು ಹೋಟೆಲ್ ಉದ್ಯಮದ ಮೂಲಕ ಅನ್ನವನ್ನು ಅನ್ನಪೂರ್ಣೇಶ್ವರಿ ಎಂದು ಪರಿಭಾವಿಸಿದ್ದರು. ಉದ್ಯಮದಲ್ಲಿ ಕಾಯಕ ನಿಷ್ಠೆ, ಕರ್ಮಯೋಗ ಪಾಲಿಸಿರುವುದರ ಜೊತೆಗೆ ಸಂಸಾರಕ್ಕೂ ಅರ್ಥ ತಂದುಕೊಟ್ಟಿದ್ದಾರೆ. ಅಡಿಗರ ಬಳಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಮೆಚ್ಚುಗೆಯ ಲೇಖನ ಬೆರೆದಿರುವುದು ವಿಶೇಷವಾಗಿದೆ. ಅರ್ಥಪೂರ್ಣವಾಗಿ ಅವರನ್ನು ನೆನಪಿಸಿಕೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.
ಜಾನಪದ ತಜ್ಞ ಡಾ.ಎಂ.ಜಿ. ಈಶ್ವರಪ್ಪ, ‘ಚಂದ್ರಶೇಖರ ಅಡಿಗರು ಹೋಟೆಲ್ ಉದ್ಯಮದ ಜೊತೆಗೆ ಸಂಸ್ಕೃತಿಯನ್ನು ಹೊಟ್ಟೆಗೆ ಹಾಗೂ ಮೆದುಳಿಗೆ ಆಹಾರವಾಗಿ ನೀಡಿದ್ದಾರೆ. ಜನರ ಬಾಯಿಯೊಳಗೆ ಇನ್ನೂ ಉಳಿದವರು ಅಮರರಾಗಿದ್ದಾರೆ’ ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಬಿ.ವಾಮದೇವಪ್ಪ ಅಧ್ಯಕ್ಷತೆ ವಹಿಸಿದ್ದರು. ಕಲಾವಿದೆ ಆಶಾ ಶ್ರೀನಿವಾಸ್ ಆಚಾರ್ಯ ಹಾಜರಿದ್ದರು. ಶ್ರೀಮತಿ ಚಂದ್ರಶೇಖರ ಅಡಿಗ ಸ್ವಾಗತಿಸಿದರು. ಅದಿತಿ ಆಚಾರ್ಯ ಹಾಗೂ ಅಭಿರಾಮ ಆಚಾರ್ಯ ಭರತನಾಟ್ಯ ಕಾರ್ಯಕ್ರಮ ನಡೆಸಿಕೊಟ್ಟರು. ದೀಪಾ ಅಡಿಗ ಪ್ರಾರ್ಥಿಸಿದರು. ಸಾಲಿಗ್ರಾಮ ಗಣೇಶ ಶೆಣೈ ನಿರೂಪಿಸಿದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…