ವಿಕೇಂಡ ಕರ್ಫ್ಯೂ : ಬಸ್ ಸಂಚಾರ ವಿರಳ, ರಸ್ತೆಗಳು ಖಾಲಿಖಾಲಿ

ಶಹಾಬಾದ: ಒಮಿಕ್ರಾನ್ ಮತ್ತು ಕೊರೊನಾ ವೈರಸ್ ಮಹಾಮಾರಿ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ರಾಜ್ಯಾದಾಧ್ಯಾದಂತ ಎರಡು ದಿನಗಳ ವೀಕೆಂಡ್ ಕರ್ಫ್ಯೂ ಹೇರಲ್ಪಟ್ಟಿದಲ್ಲದೇ, ಪೊಲೀಸ್ ಇಲಾಖೆಯ ಕಠಿಣ ಕ್ರಮದಿಂದಾಗಿ ಶನಿವಾರ ಜನಸಂಚಾರ ವಿರಳವಾಗಿತ್ತು.

ಸರ್ಕಾರದ ಆದೇಶದ ಮೇರೆಗೆ ಒಮಿಕ್ರಾನ್ ಮತ್ತು ಕೊರಾನಾ ವೈರಸ್ ಹರಡದಂತೆ ಮುಂಜಾಗ್ರತ ಕೈಗೊಂಡ ಪರಿಣಾಮವಾಗಿ ಪೊಲೀಸ್ ಇಲಾಖೆ ಶುಕ್ರವಾರ ರಾತ್ರಿ೮ ಗಂಟೆಯಿಂದ ಅಗತ್ಯ ವಸ್ತುಗಳನ್ನು ಬಿಟ್ಟು ಎಲ್ಲಾ ಅಂಗಡಿಗಳನ್ನು ಸಂಪೂರ್ಣವಾಗಿ ಮುಚ್ಚಿಸಲಾಗಿತ್ತು. ಜನರು ಮನೆಯಿಂದ ಹೊರಬರಲು ಹಿಂದೆಮುಂದೆ ನೋಡುತ್ತಿದ್ದು, ನಗರಕ್ಕೆ ಜನರು ಬರುವುದು ಹಾಗೂ ಬೇರೆ ಊರಿಗೆ ಹೋಗುವ ಜನರ ಸಂಖ್ಯೆ ಕಡಿಮೆಯಾಗಿತ್ತು.

ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ, ಎಂದಿನಂತೆ ಇರದೇ ಜನದಟ್ಟಣೆಯಿಲ್ಲದೇ ಬಿಕೋ ಎನ್ನುತ್ತಿತ್ತು.ಯಾವಾಗಲೂ ರೇಲ್ವೆ ನಿಲ್ದಾಣದ ಸಮೀಪ ನೂರಾರು ಜನರ ಜನದಟ್ಟಣೆ ಕಾಣುತ್ತಿತ್ತು.ಆದರೆ ವಿಕೆಂಡ್ ಕರ್ಫ್ಯೂ ರೇಲ್ವೆ ನಿಲ್ದಾಣ ಸುತ್ತಮುತ್ತಲಿನಲ್ಲಿ ಯಾವುದೇ ಅಂಗಡಿಗಳು ತೆರೆದಿರಲಿಲ್ಲ.ಅಲ್ಲದೇ ಲಾಡ್ಜ್, ಬಾರ್, ರೆಸ್ಟೋರೆಂಟ ಮುಚ್ಚಿದ್ದರಿಂದ ವ್ಯಾಪಾರ ವಹಿವಾಟಿಗೆ ತೊಂದರೆಯಾಗಿದೆ ಎಂದು ವ್ಯಾಪಾರಸ್ಥರು ಅಸಮಾಧಾನ ಹೊರಹಾಕಿದರು.

ಕೆಲವು ಕಲ್ಯಾಣ ಮಂಟಪದಲ್ಲಿ ಮದುವೆಗಳು ನಡೆದಿದ್ದು ಬಿಟ್ಟರೇ, ಸಂಪೂರ್ಣ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು. ಅನಗತ್ಯವಾಗಿ ಜನರು ಮಾಸ್ಕ್ ಧರಿಸದೇ ಓಡಾಡುತ್ತಿರುವುದು ಕಂಡು ಬಂತು.ನಗರದ ಮುಖ್ಯ ಬಜಾರನಲ್ಲಿ ಕಿರಾಣಾ, ತರಕಾರಿ, ಮೆಡಿಕಲ್ ಹಾಗೂ ಹಾಲು ಬಿಟ್ಟರೇ ಎಲ್ಲಾ ಅಂಗಡಿಗಳು ಮುಚ್ಚಲ್ಪಟ್ಟಿದ್ದವು.

ಬಸ್ ನಿಲ್ದಾಣದಲ್ಲಿ ಯಾವಾಗಲೂ ಜನಜಂಗುಳಿಯಿಂದ ಕೂಡಿರುವ ಸ್ಥಳ ಸಂಪೂರ್ಣ ಜನರಿಲ್ಲದೇ ಸ್ಮಶಾನ ಸ್ಥಿತಿ ಆವರಿಸಿದಂತಾಗಿತ್ತು. ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ತೀರ ವಿರಳವಾಗಿತ್ತು. ನಗರದ ಜನರು ಮನೆಯಲ್ಲಿಯೇ ಉಳಿದು ಗೃಹ ಬಂಧನಕ್ಕೆ ಜಾರಿಕೊಂಡ ಸನ್ನಿವೇಶ ಮಾತ್ರ ಸರ್ವೆ ಸಾಮಾನ್ಯವಾಗಿತ್ತು. ಆದರೆ ಸಂಜೆಯಾದಂತೆ ಒಬ್ಬೊಬ್ಬರು ಹೊರಗಡೆ ಬರುವುದು ಕಂಡು ಬಂದಿತು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

10 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420