ಸುರಪುರ ವೀಕೆಂಡ್ ಕರ್ಫ್ಯೂ ಮೊದಲ ದಿನ ಯಶಸ್ವಿ

ಸುರಪುರ: ರಾಜ್ಯದಲ್ಲಿ ಕೊರೊನಾ ಹಾಗು ಒಮೈಕ್ರಾನ್ ಸೊಂಕಿನ ಪ್ರಕರಣಗಳು ದಿನೆ ದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಸುರಪುರ ನಗರದಲ್ಲಿ ಮೊದಲ ದಿನದ ಕರ್ಫ್ಯೂ ಯಶಸ್ವಿಯಾಗಿದೆ.

ಶುಕ್ರವಾರ ರಾತ್ರಿಯಿಂದಲೂ ಪೊಲೀಸ್ ಇಲಾಖೆ ಹಾಗು ನಗರಸಭೆಯಿಂದ ವ್ಯಾಪಕವಾಗಿ ಪ್ರಚಾರ ನಡೆಸಿ ವೀಕೆಂಡ್ ಕರ್ಫ್ಯೂ ಅಂಗವಾಗಿ ಯಾರೂ ಮನೆಯಿಂದ ಹೊರಗೆ ಬರದಂತೆ ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ತಿಳಿಸಲಾಗಿತ್ತು.ಅದರಂತೆ ಶನಿವಾರ ಮುಂಜಾನೆಯಿಂದಲೂ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದಾಗಿದ್ದವು.ಆದರೆ ಹಾಲು ಹಣ್ಣು ತರಕಾರಿ ಮಾಂಸ ಮೊಟ್ಟೆ ಮತ್ತು ಮೆಡಿಕಲ್ ಶಾಪ್‌ಗಳು ಕಿರಾಣಿ ಅಂಗಡಿಗಳು ಎಂದಿನಂತೆ ವ್ಯಾಪಾರ ನಡೆಸಿದರು.

ಆದರೆ ಶನಿವಾರ ಬೆಳಿಗ್ಗೆಯಿಂದಲೂ ನಗರದಾದ್ಯಂತ ಎಲ್ಲಾ ಕಡೆಗಳಲ್ಲಿ ಪೊಲೀಸರು ಗಸ್ತು ನಡೆಸಿ ಕರ್ಫ್ಯೂ ಉಲ್ಲಂಘಿಸದಂತೆ ನಿಗಾವಹಿಸಿದ್ದರು.ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪಿಐ ಸುನೀಲಕುಮಾರ್ ಮೂಲಿಮನಿಯವರ ನೇತೃತ್ವದಲ್ಲಿ ಬೀಡುಬಿಟ್ಟಿದ್ದ ಪೊಲೀಸರು ಅನಾವಶ್ಯಕವಾಗಿ ಹೊರಗೆ ಬಂದವರಿಗೆ ದಂಡದ ಬಿಸಿ ಮುಟ್ಟಿಸಿದರು.

ಈ ಕುರಿತು ಪೊಲೀಸ್ ಇನ್ಸ್ಪೇಕ್ಟರ್ ಸುನೀಲಕುಮಾರ ಮೂಲಿಮನಿ ಮಾತನಾಡಿ,ಈಗಾಗಲೇ ಜನರಿಗೆ ಅನಾವಶ್ಯಕವಾಗಿ ಹೊರಗೆ ಬರದಂತೆ ತಿಳಿಸಿದ್ದರು ಕೆಲವರು ಹೊರಗಡೆ ಬಂದು ಓಡಾಡುತ್ತಿದ್ದವರ ೧೫ ಬೈಕ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಅಲ್ಲದೆ ಮಾಸ್ಕ್ ಧರಿಸದೆ ಓಡಾಡುತ್ತಿದ್ದ ೫೦ ಜನರಿಗೆ ದಂಡ ಹಾಕಿ ಎಚ್ಚರಿಕೆ ನೀಡಲಾಗಿದೆ ಅಲ್ಲದೆ ಹೋಟೆಲ್ ಒಂದರಲ್ಲಿ ಕೊರೊನಾ ಲಸಿಕೆ ಪಡೆದುಕೊಳ್ಳದೆ ಕೆಲಸ ಮಾಡುತ್ತಿರುವವನ ಮೇಲೆ ಕೇಸ್ ದಾಖಲಿಸಲಾಗಿದೆ ಎಂದು ತಿಳಿಸಿದರು.

ಆದರೆ ಮೊದಲ ದಿನದ ಕರ್ಫ್ಯೂ ಯಶಸ್ವಿ ಮದ್ಯೆಯೆ ನಗರದ ತರಕಾರಿ ಮಾರುಕಟ್ಟೆಯಲ್ಲಿ ಜನ ಜಂಗುಳಿ ಸೇರಿರುವುದು ಕಂಡು ಬಂದಿದೆ.ರಸ್ತೆ ಬದಿಯಲ್ಲಿಯೇ ತರಕಾರಿ ಮಾಡುತ್ತಿರುವುದರಿಂದ ಮತ್ತು ಕಿರಾಣಿ ಅಂಗಡಿಗಳು ತೆಗೆದಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿರುವುದು ಕಂಡುಬಂದಿದೆ.ಮಹಾತ್ಮ ಗಾಂಧಿ ವೃತ್ತ,ದರಬಾರ ರಸ್ತೆಯಲ್ಲಿ ಅಂಗಡಿ ಮುಂಗಟ್ಟುಗಳು ಬಂದಾಗಿದ್ದರೆ ರಸ್ತೆಗಳು ಬಿಕೋ ಎಂದರೆ ತರಕಾರಿ ಮಾರುಕಟ್ಟೆಯಲ್ಲಿ ಹಾಗು ಸರದಾರ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರು.ಇವೆಲ್ಲವುಗಳ ಮದ್ಯೆ ಮೊದಲ ದಿನದ ಕರ್ಫ್ಯೂ ಯಶಸ್ವಿಯಾಗಿದೆ.

emedialine

Recent Posts

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

6 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

7 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

7 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

7 hours ago

ಕಲಬುರಗಿ ಹಾಲಿಗೆ ಮಹಾರಾಷ್ಟ್ರ ದಲ್ಲಿ ಬೇಡಿಕೆ: ಸಚಿವ ಪ್ರಿಯಾಂಕ್ ಖರ್ಗೆ ಪ್ರಶಂಸೆ

ಕಲಬುರಗಿ: ಕಲಬುರಗಿ-ಯಾದಗಿರಿ-ಬೀದರ್‌ ಸಹಕಾರಿ ಹಾಲು ಒಕ್ಕೂಟದಲ್ಲಿ ಗುಣಮಟ್ಟದ ಹಾಲು ಉತ್ಪಾದನೆಯಾಗುತ್ತಿದ್ದು, ಇದಕ್ಕೆ ಭಾರಿ ಜನಮನ್ನಣೆ ದೊರೆತಿದ್ದು ಜಿಲ್ಲಾ ಉಸ್ತುವಾರಿ ಹಾಗೂ…

8 hours ago

ಆರೋಗ್ಯ ಮೇಳ: ಉಚಿತ ಆರೋಗ್ಯ ತಪಾಸಣೆ ಮಾಡಿಕೊಂಡ 1,227 ಜನ

ಕಲಬುರಗಿ: ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420