ಸುರಪುರ: ಗ್ರಾಮ ಪಂಚಾಯತಿ ಸದಸ್ಯೆಯೊಬ್ಬರು ತಮ್ಮ ಗ್ರಾಮದಲ್ಲಿನ ರಸ್ತೆ ಹದಗೆಟ್ಟಿದ್ದನ್ನು ಕಂಡು ತಮ್ಮ ಸ್ವಂತ ಹಣದಲ್ಲಿಯೇ ರಸ್ತೆಯನ್ನು ದುರಸ್ಥಿಗೊಳಿಸುವ ಮೂಲಕ ಇತರೆ ಗ್ರಾಮ ಪಂಚಾಯತಿ ಸದಸ್ಯರಿಗೆ ಮಾದರಿಯಾಗಿದ್ದಾರೆ.
ತಾಲೂಕಿನ ದೇವಾಪುರ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯೆ ಸೂಗಮ್ಮ ಮಲಕಣ್ಣ ಆವಂಟಿಯವರು ರಸ್ತೆ ದುರಸ್ತಿಗೊಳಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದ ಸದಸ್ಯೆಯಾಗಿದ್ದಾರೆ.ಗ್ರಾಮದಲ್ಲಿನ ಬಸವೇಶ್ವರ ವೃತ್ತದಿಂದ ಗ್ರಾಮದೊಳಗಿನ ಗ್ರಾಮ ದೇವತೆ ದೇವಸ್ಥಾನಕ್ಕೆ ಹೋಗುವ ರಸ್ತೆ ಮತ್ತು ಗ್ರಾಮ ಪಂಚಾಯತಿ ಬಳಿಯಿಂದ ಗ್ರಾಮ ದೇವತೆ ದೇವಸ್ಥಾನಕ್ಕೆ ಹೋಗುವ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದವು.ಇದರಿಂದ ಗ್ರಾಮದ ಜನರು ಬೇಸತ್ತಿದ್ದರು ಅಲ್ಲದೆ ಈ ರಸ್ತೆಯಲ್ಲಿ ಹೋಗಲು ಹಿಡಿಶಾಪ ಹಾಕುವಂತಾಗಿದ್ದವು.ಇದರಿಂದ ಜನರು ಗ್ರಾಮ ಪಂಚಾಯತಿಯ ನಿರ್ಲಕ್ಯ್ಯಕ್ಕೆ ಬೇಸರ ವ್ಯಕ್ತಪಡಿಸುತ್ತಿದ್ದರು.ಇದರಿಂದಾಗಿ ಆ ರಸ್ತೆಯನ್ನು ಸದಸ್ಯೆ ಸೂಗಮ್ಮ ಮಲಕಣ್ಣ ಆವಂಟಿಯವರು ತಾವೇ ತಮ್ಮ ಸ್ವಂತ ಹಣದಲ್ಲಿ ದುರಸ್ತಿಗೊಳಿಸಲು ಮುಂದಾಗಿದ್ದಾರೆ.
ಶನಿವಾರ ಬೆಳಿಗ್ಗೆಯಿಂದ ಟ್ರ್ಯಾಕ್ಟರ್ಗಳ ಮೂಲಕ ಮುರiನ್ನು ತರಿಸಿ ನಂತರ ಅದನ್ನು ಜೆಸಿಬಿ ಯಂತ್ರದ ಮೂಲಕ ಸಮತಟ್ಟು ಮಾಡಿಸಿ ಸಂಜೆಯ ವೇಳೆಗೆ ಜನರ ಓಡಾಟಕ್ಕೆ ಉತ್ತಮವಾಗಿಸಿ ಕೊಟ್ಟಿದ್ದಾರೆ.ಇದರಿಂದ ಗ್ರಾಮದ ಜನರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.ಜನರ ಅನುಕೂಲಕ್ಕಾಗಿ ಪಂಚಾಯತಿ ವತಿಯಿಂದ ದುರಸ್ತಿಗೊಳಿಸಲು ವಿಳಂಬ ಮಾಡಿದಾಗ ಸ್ವತಃ ತಾವೇ ಸ್ವಂತ ಹಣದಿಂದ ರಸ್ತೆ ದುರಸ್ತಿ ಮಾಡಿಸುವ ಮೂಲಕ ಈಗ ಗ್ರಾಮದ ಜನರ ಮೆಚ್ಚುಗೆಯನ್ನು ಗಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮಂಡಳಿ ಪಣ ತೊಟ್ಟಿದ್ದು, ಬರುವಂತಹ…
ಸುರಪುರ: ನಗರದಲ್ಲಿ ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ…
ಸುರಪುರ:ದೇಶದಲ್ಲಿ ಹಲವು ಸಂಸ್ಕøತಿಗಳು ಇರುತ್ತವೆ,ಅಂತಹ ಸಂಸ್ಕøತಿಗಳಲ್ಲಿ ಕನ್ನಡ ಮತ್ತು ಕರ್ನಾಟಕ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕಳೆದ 82 ವರ್ಷಗಳಿಂದ…
ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ…
ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…
ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6.…