ಹಾವೇರಿ: ಫೆಬ್ರುವರಿ ಅಂತ್ಯಕ್ಕೆ ಒಳಚರಂಡಿ ಕಾಮಗಾರಿ ಮತ್ತು ಹಾವೇರಿ ನಗರದ 24×7 ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ (ಕೆಯುಐಡಿಎಫ್ಸಿ) ವ್ಯವಸ್ಥಾಪಕ ನಿರ್ದೇಶಕ ಎಂ.ಟಿ.ರೇಜು ತಾಕೀತು ಮಾಡಿದರು.
ನಗರಕ್ಕೆ ಶುಕ್ರವಾರ ಭೇಟಿ ನೀಡಿದ ರೇಜು, ನಗರಸಭೆ ಕಚೇರಿಯಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ನಂತರ ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳೊಂದಿಗೆ ನಗರದ ಫಿಲ್ಟರ್ ಹೌಸ್ ಹಾಗೂ ಅಪೂರ್ಣಗೊಂಡಿರುವ ಎಸ್.ಟಿ.ಪಿ ವ್ಯಾಪ್ತಿಯಲ್ಲಿ ನಿರಂತರ ನೀರು ಸರಬರಾಜು ಮಾಡುವ ಕಾಮಗಾರಿಯನ್ನು ವೀಕ್ಷಿಸಿದರು.
ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಅವರು, ಹಾವೇರಿ ನಗರದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಆರು ವರ್ಷಗಳಿಂದ ಒಳಚರಂಡಿ ಕಾಮಗಾರಿ ಹಾಗೂ 24×7 ಕುಡಿಯುವ ನೀರಿನ ಕಾಮಗಾರಿ ನೆನೆಗುದಿಗೆ ಬಿದ್ದಿವೆ. ಜನರಿಗೆ ಸಮರ್ಪಕ ನೀರು ಪೂರೈಕೆ ಸಾಧ್ಯವಾಗುತ್ತಿಲ್ಲ. 15 ದಿನಗಳಿಗೊಮ್ಮೆ ನೀರು ಪೂರೈಸುವ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಪದೇ ಪದೆ ಮನವಿ ಮಾಡಿದರೂ ಸಹ ಸ್ಪಂದಿಸುತ್ತಿಲ್ಲ. ಜನರು ಜನಪ್ರತಿನಿಧಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಸಮಸ್ಯೆಯನ್ನು ಬಿಚ್ಚಿಟ್ಟರು.
ಕೆಲವೆಡೆ ಕಳಪೆ ಕಾಮಗಾರಿಗಳು ನಡೆದ ಕಾರಣ ಎಲ್ಲೆಂದರಲ್ಲಿ ಪೈಪುಗಳು ಒಡೆಯುತ್ತಿವೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಕಾಮಗಾರಿಗಳ ವಿಳಂಬದಿಂದ ಜನರ ತೆರಿಗೆ ಹಣ ಪೋಲಾಗುತ್ತಿದೆ ಹಾಗೂ ಜನರು ಕಿರಿಕಿರಿ ಅನುಭವಿಸುವಂತಾಗಿದೆ ಎಂದು ಬೇಸರ ತೋಡಿಕೊಂಡರು.
ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಮುಗಿಯದ ಕಾರಣ, ವರ್ಷದಿಂದ ವರ್ಷಕ್ಕೆ ಯೋಜನೆಗಳ ವೆಚ್ಚವೂ ಹೆಚ್ಚುತ್ತಿದೆ. ಅಧಿಕಾರಿಗಳ ಸಮನ್ವಯದ ಕೊರತೆ ಮತ್ತು ಭ್ರಷ್ಟಾಚಾರ ಕೂಡ ಯೋಜನೆಗಳ ವೈಫಲ್ಯಕ್ಕೆ ಕಾರಣವಾಗಿದೆ. ಕೂಡಲೇ ಕಾಮಗಾರಿ ಪೂರ್ಣಗೊಳಿಸಿ ಜನರಿಗೆ ಯೋಜನೆಯ ಪ್ರಯೋಜನ ದೊರಕಿಸಿಕೊಡುವಂತೆ ಸಂಜೀವಕುಮಾರ ನೀರಲಗಿ ಮನವಿ ಮಾಡಿದರು.
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…