ಬಿಸಿ ಬಿಸಿ ಸುದ್ದಿ

ನಾಟಕದ ಮೂಲಕ ಜನಜಾಗೃತಿ ಸಾಧ್ಯ: ಸಿದ್ದು ಸವದಿ

ರಬಕವಿ-ಬನಹಟ್ಟಿ: ನಾಟಕ ಕಲೆ ಶ್ರೇಷ್ಠವಾದುದು. ನಾಟಕದ ಮೂಲಕ ಜನಜಾಗೃತಿ ಉಂಟು ಮಾಡಲು ಸಾಧ್ಯ. ಮುಂದಿನ ದಿನಗಳಲ್ಲಿಯೂ ನಾಟಕ ಕಲೆ ಉಳಿಯಬೇಕಾದರೆ ಪ್ರತಿಯೊಬ್ಬರು ನಾಟಕ ನೋಡುವುದರ ಜೊತೆಗೆ ಕಲಾವಿದರನ್ನು ಪ್ರೋತ್ಸಾಹಿಸಬೇಕು ಎಂದು ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ಹೇಳಿದರು.

ಅವರು ಬನಹಟ್ಟಿಯ ಭದ್ರನವರ ಕಲ್ಯಾಣ ಮಂಟಪದಲ್ಲಿ ರಬಕವಿ-ಬನಹಟ್ಟಿ ತಾಲೂಕು ಆಡಳಿತ, ನಗರಸಭೆ, ತಾಲೂಕು ಪಂಚಾಯತ ಮತ್ತು ಪೊಲೀಸ್ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸಾಣೇಹಳ್ಳಿ ಶಿವ ಸಂಚಾರ ಕಲಾ ತಂಡದವರು ಪ್ರದರ್ಶನ ಮಾಡಿದ ಗಡಿಯಂಕ ಕುಡಿಮುದ್ದ ನಾಟಕವನ್ನು ಉದ್ಘಾಟಿಸಿ ಮಾತನಾಡಿದರು. ನಾಟಕಗಳಿಂದ ಸಾಮಾಜಿಕ ಬದಲಾವಣೆ ಸಾಧ್ಯ. ಸಾಣೇಹಳ್ಳಿ ಸ್ವಾಮೀಜಿಯವರು ನಾಟಕ ಕಲೆಯನ್ನು ಪ್ರೋತ್ಸಾಹಿಸುವುದರ ಮೂಲಕ ಶ್ರೇಷ್ಠ ಕಾರ್ಯವನ್ನು ಮಾಡುತ್ತಿದ್ದಾರೆ. ಸಾಮಾಜಿಕ, ಧಾರ್ಮಿಕವಾಗಿ ಜಾಗೃತಿಯನ್ನು ಮೂಡಿಸುತ್ತಿದ್ದಾರೆ. ಇಂಥ ನಾಟಕಗಳು ಜನರಲ್ಲಿ ಬದಲಾವಣೆ ತರಲು ಸಾಧ್ಯವಾಗುತ್ತದೆ. ಕನ್ನಡ ನಾಡಿನ ಸಂಸ್ಕೃತಿ ಶ್ರೇಷ್ಠವಾದುದು ನಮ್ಮ ಸಂಸ್ಕೃತಿಯನ್ನು ನಾಟಕಗಳಿಂದ ಪ್ರಚಾರ ಮಾಡಲು ಸಾಧ್ಯವಾಗುತ್ತದೆ. ಎಂದರು.

ಇದೇ ಸಂದರ್ಭದಲ್ಲಿ ರಬಕವಿ-ಬನಹಟ್ಟಿ ತಹಶೀಲ್ದಾರ ಸಂಜಯ ಇಂಗಳೆ ಮಾತನಾಡಿ, ಮೂರು ದಿನಗಳ ಕಾಲ ನಾಟಕವನ್ನು ಹಮ್ಮಿಕೊಳ್ಳಲಾಗಿದ್ದು, ಸೋಮವಾರ ಸಂಜೆ 6.30ಕ್ಕೆ ಒಕ್ಕಲಿಗ ಮುದ್ದಣ್ಣ, ಮಂಗಳವಾರ ಸತ್ಯಹರಿಶ್ಚಂದ್ರ ನಾಟಕವನ್ನು ಹಮ್ಮಿಕೊಳ್ಳಲಾಗಿದ್ದು, ಕಲಾವಿದರನ್ನು ಪ್ರೋತ್ಸಾಹಿಸಿ, ಕಲೆಯನ್ನು ಉಳಿಸಿ ಬೆಳೆಸಿ. ಈ ನಾಡಿನ ಸಂಸ್ಕೃತಿ, ಅಭಿರುಚಿಗಳು ನಾಟಕ ಕಲೆಯ ಮೂಲಕ ಕಂಡು ಬರುತ್ತವೆ ಎಂದರು.

ವೇದಿಕೆಯ ಮೇಲೆ ರಬಕವಿ-ಬನಹಟ್ಟಿ ನಗರಸಭೆಯ ಅಧ್ಯಕ್ಷ ಶ್ರೀಶೈಲ ಬೀಳಗಿ, ಗ್ರೇಡ್-2 ತಹಶೀಲ್ದಾರ ಎಸ್.ಬಿ.ಕಾಂಬಳೆ, ನಗರ ಘಟಕದ ಅಧ್ಯಕ್ಷ ಧರೆಪ್ಪ ಉಳ್ಳಾಗಡ್ಡಿ, ಸಿಪಿಐ ಜೆ. ಕರುಣೇಶಗೌಡ, ರಬಕವಿ-ಬನಹಟ್ಟಿ ನಗರಸಭೆ ಪೌರಾಯುಕ್ತ ಶ್ರೀನಿವಾಸ ಜಾಧವ, ಮಹಾಲಿಂಗಪುರ ಪುರಸಭೆ ಮುಖ್ಯಾಧಿಕಾರಿ ಎಚ್. ಎಸ್. ಚಿತ್ತರಗಿ ಇದ್ದರು.

ಸಮಾರಂಭದಲ್ಲಿ ಉಪತಹಶೀಲ್ದಾರ ಶ್ರೀಕಾಂತ ಮಾಯನ್ನವರ, ಶಂಕರ ಜಾಲಿಗಿಡದ, ದುಂಡಪ್ಪ ಮಾಚಕನೂರ, ವೆಂಕಟೇಶ ನಿಂಗಸಾನಿ, ಬಿ. ಡಿ. ಭದ್ರನ್ನವರ, ಎಂ. ಬಿ. ನಾಶಿ, ಚಿದಾನಂದ ಸೊಲ್ಲಾಪುರ, ಗೌರಿ ಮಿಳ್ಳಿ, ವೈಷ್ಣವಿ ಬಾಗೇವಾಡಿ, ಅನುರಾಧಾ ಹೊರಟ್ಟಿ, ಪ್ರಭು ಪೂಜಾರಿ, ಮಾಲಾ ಬಾವಲತ್ತಿ, ಪವಿತ್ರಾ ತುಕ್ಕನ್ನವರ ಸವಿತಾ ಹೊಸೂರ, ಈಶ್ವರ ಬಿರಾದಾರ ಪಾಟೀಲ, ಎಂ. ಆರ್. ಕವಟಕೋಪ, ಪಿ. ಆರ್. ಮಠಪತಿ, ರಾಚಯ್ಯ ಮಠಪತಿ, ಎಂ. ಎಸ್. ನೀಲನವರ, ವಿ. ಪಿ. ಕುಗಟಿ, ಸದಾಶಿವ ಕುಂಬಾರ, ಅಮಸಿದ್ದ ಬಿರಾದಾರ, ಮಂಜುನಾಥ ಸಿದ್ದನ್ನವರ, ಎಸ್. ಎಸ್. ಸಜ್ಜನ, ರವಿ ಈಟಿ, ವಿಜಯಕುಮಾರ ನಿಡಗುಂದಿ ಸೇರಿದಂತೆ ಅನೇಕರು ಇದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

2 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

2 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

2 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

3 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago