ಚಂದ್ರಶೇಖರ ಪಾಟೀಲರ ಶಾಲ್ಮಲಾ ನನ್ನ ಶಾಲ್ಮಲಾ: ಇತರ ಸಾಧನೆ

0
16
  • # ಕೆ.ಶಿವು.ಲಕ್ಕಣ್ಣವರ

ಚಂದ್ರಶೇಖರ ಪಾಟೀಲರ ಶಾಲ್ಮಲಾ ನನ್ನ ಶಾಲ್ಮಲಾವೂ..!
ಮತ್ತು ಅವರ ಒಟ್ಟಾರೆ ಸಾಹಿತ್ಯ ಮತ್ತು ಇತರ ಸಾಧನೆಗಳೂ..!!

ಚಂದ್ರಶೇಖರ ಪಾಟೀಲರು ಈಗ ತೀರಿದ್ದಾರೆ. ಆ ನೆನಪಲ್ಲಿ ಈ ಲೇಖನ ಅವರಿಗೆ ಅರ್ಪಣೆ…
ಚಂದ್ರಶೇಖರ ಪಾಟೀಲರಿಗೆ ಇಗೋ ನಮನಗಳು…

Contact Your\'s Advertisement; 9902492681

ಎಲ್ಲೋ ಹುಟ್ಟಿ ಎಲ್ಲೋ ಬೆಳೆದು ಒಳಗೊಳಗೇ ಹರಿಯುವವಳು
ಜೀವ ಹಿಂಡಿ ಹಿಪ್ಪೆ ಮಾಡಿ ಒಳಗೊಳಗೇ ಕೊರೆಯುವವಳು, ಸದಾ..!
ಗುಪ್ತಗಾಮಿನಿ ನನ್ನ ಶಾಲ್ಮಲಾ..!!

ಹಸಿರು ಮುರಿವ ಎಲೆಗಳಲ್ಲಿ ಬಸಿರ ಬಯಕೆ ಒಸರುವವಳು
ತುಟಿ ಬಿರಿಯುವ ಹೂಗಳಲ್ಲಿ ಬೆಂಕಿ ಹಾಡು ಉಸುರುವವಳು, ಸದಾ..!
ತಪ್ತಕಾಮಿನಿ ನನ್ನ ಶಾಲ್ಮಲಾ..!!

ಭೂಗರ್ಭದ ಮೌನದಲ್ಲಿ ಧುಮ್ಮೆನುತ ಬಳುಕುವವಳು
ಅರಿವಿಲ್ಲದೆ ಮೈಯ ತುಂಬಿ ಕನಸಿನಲ್ಲಿ ತುಳುಕುವವಳು, ಸದಾ..!
ಸುಪ್ತಮೋಹಿನಿ ನನ್ನ ಶಾಲ್ಮಲಾ..!!

ನನ್ನ ಬದುಕ ಭುವನೇಶ್ವರಿ ನನ್ನ ಶಾಲ್ಮಲಾ,
ನನ್ನ ಹೃದಯ ರಾಜೇಶ್ವರಿ ನನ್ನ ಶಾಲ್ಮಲಾ, ಸದಾ..!
ಗುಪ್ತಗಾಮಿನಿ ನನ್ನ ಶಾಲ್ಮಲಾ..!!

ಹೀಗೆಯೇ ಚಂಪಾ ಪ್ರೀತಿಸಿದ ಗುಪ್ತಗಾಮಿನಿ ಶಾಲ್ಮಲಾ ನದಿಯ ಕುರಿತು ವರ್ತಿಸುತ್ತಾರೆ. ಅಲ್ಲದೇ ಚಂಪಾ ಅತಿಯಾಗಿ ಪ್ರೀತಿಸಿದ ನದಿಯೂ ಹೌದು ಈ ಶಾಲ್ಮಲಾ ಎಂಬ ಗುಪ್ತಗಾಮಿನಿ ನದಿಯು. ಈ ಕುರಿತೇ ಚಂಪಾ ಶಾಲ್ಮಲಾ ನನ್ನ ಶಾಲ್ಮಲಾ ಕವನ ಬರೆದರು. ಕನ್ನಡ ನಾಡಿನ ಸಾಹಿತ್ಯಿಕ, ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಚಳುವಳಿಗಳ ಮುಂಚೂಣಿಯ ಧೀಮಂತ ಸಾಹಿತಿಯೂ..!–

‘ಚಂಪಾ’ ಎಂದೇ ಕನ್ನಡ ಸಾಹಿತ್ಯಲೋಕದಲ್ಲಿ ಚಿರಪರಿಚಿತ ಇರುವ ಚಂದ್ರಶೇಖರ ಪಾಟೀಲರು ಕವಿ -ನಾಟಕಕಾರಾದವರು. ಕನ್ನಡ ನಾಡಿನ ಸಾಹಿತ್ಯಿಕ, ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಚಳುವಳಿಗಳ ಮುಂಚೂಣಿಯಲ್ಲಿ ಕೇಳಿಬರುವ ಹೆಸರೇ ’ಚಂಪಾ’ ಅವರದು. ಹಾವೇರಿ ಜಿಲ್ಲೆಯ ಹತ್ತೀಮತ್ತೂರಿನಲ್ಲಿ ಜನಿಸಿದರು ಚಂದ್ರಶೇಖರ ಪಾಟೀಲರು.

ತಂದೆ ಬಸವರಾಜ ಹಿರೇಗೌಡ ಪಾಟೀಲ, ತಾಯಿ ಮುರಿಗೆವ್ವ.ಹತ್ತೀಮುತ್ತೂರಿನಲ್ಲಿ ಪ್ರಾಥಮಿಕ, ಮಾಧ್ಯಮಿಕ ಶಾಲಾ ವಿದ್ಯಾಭ್ಯಾಸ ಮಾಡಿದರು. ಹಾವೇರಿಯಲ ಮುನ್ಸಿಪಲ್ ಹೈಸ್ಕೂಲಿನಲ್ಲಿ ಶಿಕ್ಷಣ ಪಡೆದ ಅವರು ಹೆಚ್ಚಿನ ಅಧ್ಯಯನಕ್ಕಾಗಿ ಧಾರವಾಡದ ಕರ್ನಾಟಕ ಕಾಲೇಜು ಸೇರಿದವರು. ಕಾಲೇಜಿನಲ್ಲಿದ್ದ ದಿನಗಳಲ್ಲಿಯೇ ‘ಚಂಪಾ’ ಅವರ ಅಕ್ಷರಗಳಿಗೆ ಕಾವ್ಯದ ಗರಿ ಮೂಡಿದವು. ಆಗ ಖ್ಯಾತ ಕವಿ ವಿ.ಕೆ.ಗೋಕಾಕರು ಕರ್ನಾಟಕ ಕಾಲೇಜಿನಲ್ಲಿದ್ದರು.

’ನಮಗೆಲ್ಲ ಕಾವ್ಯಲೋಕದ ರಹಸ್ಯಗಳನ್ನು ತೋರಿಸಿಕೊಟ್ಟವರು ಗುರು ವಿ.ಕೃ. ಗೋಕಾಕರು’ ಎನ್ನುವ ಚಂಪಾ ಅವರು ವಿದ್ಯಾರ್ಥಿಯಾಗಿದ್ದ ದಿನಗಳಲ್ಲಿಯೇ ಅವರ ಪ್ರಥಮ ಕವನ ಸಂಕಲನ ‘ಬಾನುಲಿ’ಯಲ್ಲಿ ಪ್ರಕಟವಾಯಿತು.

ನವ್ಯ ಮಾರ್ಗದಲ್ಲಿ ತಮ್ಮ ಕಾವ್ಯ ಕೃಷಿ ಆರಂಭಿಸಿದ ಅವರು ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್ ಎಂ.ಎ.ಪದವೀಧ ಪಡೆದವರು. ತಾವು ಓದಿದ ವಿಶ್ವವಿದ್ಯಾನಿಲಯದ ಇಂಗ್ಲಿಷ್ ವಿಭಾಗದಲ್ಲಿ ಅಧ್ಯಾಪಕರಾಗಿ ವೃತ್ತಿ ಆರಂಭಿಸಿದ ‘ಚಂಪಾ’ ಅವರು ಗೆಳೆಯರಾದ ಗಿರಡ್ಡಿ ಗೋವಿಂದರಾಜು, ಸಿದ್ದಲಿಂಗ ಪಟ್ಟಣ ಶೆಟ್ಟಿ ಜೊತೆಗೆ ಸೇರಿ ‘ಸಂಕ್ರಮಣ’ ಎಂಬ ದ್ವೈಮಾಸಿಕ ಸಾಹಿತ್ಯ ಪತ್ರಿಕೆ ಆರಂಭಿಸಿದಬರು,

1976 ರವರೆಗೂ ‘ಸಂಕ್ರಮಣ’ ಈ ಮೂರು ಜನರ ಸಂಪಾದಕತ್ವದಲ್ಲಿ ಪ್ರಕಟವಾಯಿತು. ನಂತರ ಮುಂದೆ ‘ಚಂಪಾ’ ಅವರೇ ಅದರ ಜವಾಬ್ದಾರಿ ವಹಿಸಿಕೊಂಡರು. ಐದು ದಶಕಗಳ ಸತತವಾಗಿ ಪ್ರಕಟವಾದ ಹಿರಿಮೆ ‘ಸಂಕ್ರಮಣ’ದ್ದು.

ಹೈದರಾಬಾದಿನ ವಿದೇಶಿ ಭಾಷಾ ಕೇಂದ್ರೀಯ ಸಂಸ್ಥೆಯಿಂದ ಇಂಗ್ಲಿಷ್‌ನಲ್ಲಿ ಡಿಪ್ಲೊಮಾ ಪದವಿ (1969) ಪಡೆದಿರುವ ಅವರು ಇಂಗ್ಲೆಂಡಿನ ಲೀಡ್ಸ್ ವಿಶ್ವವಿದ್ಯಾಲಯದಿಂದ ಭಾಷಾಶಾಸ್ತ್ರದಲ್ಲಿ ಎಂ.ಎ. ಪದವಿ ಗಳಿಸಿದ್ದವರು.
ಕರ್ನಾಟಕ ವಿಶ್ವವಿದ್ಯಾನಿಲಯದ ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕರಾಗಿ, ಛೇರ್‌ಮನ್ ಆಗಿ ನಿವೃತ್ತರಾಗಿ ಈಗ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ.

ಎಡಪಂಥೀಯ ರಾಜಕೀಯ ಸಿದ್ಧಾಂತಗಳಿಗೆ ಬದ್ಧವಾಗಿರುವ ಲೋಹಿಯಾವಾದಿ ‘ಚಂಪಾ’ ಅವರು ತುರ್ತುಪರಿಸ್ಥಿತಿಯ ದಿನಗಳಲ್ಲಿ, ಅದನ್ನು ಪ್ರತಿಭಟಿಸಿ, ಜೆ.ಪಿ. ಚಳುವಳಿ ಬೆಂಬಲಿಸಿ ಜೈಲುವಾಸ ಅನಿಭವಿಸಿದವರು. ಗೋಕಾಕ್ ಚಳುವಳಿಯ ಪ್ರಮುಖ ನಾಯಕರಲ್ಲಿ ಒಬ್ಬರಾಗಿರುವ ಅವರು ಕರ್ನಾಟಕದ ಭಾಷಾ ಚಳುವಳಿಯಲ್ಲಿ ಸಕ್ರಿಯ ಪಾತ್ರವಹಿಸುತ್ತಿದ್ದಾರೆ.

ಇಂತಹ ಚಂದ್ರಶೇಖರ ಪಾಟೀಲರ ಕುರಿತು ಸಾಹಿತ್ಯಿಕ ಮತ್ತು ಇತರೆ ಸಾಧನೆಗಳ‌ ಬಗೆಗೆ ಇನ್ನೊಂಷ್ಟು..!– ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕರೂ ಆದ ಚಂದ್ರಶೇಖರ ಪಾಟೀಲರು ಹುಟ್ಟಿದ್ದು ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ 1839 ರ ಜೂನ್‌ 18 ರಂದು ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ ಅವರ ಪುತ್ರನಾಗಿ ಜನಿಸಿದರು.

ಅವರ ಪ್ರಾರಂಭಿಕ ಶಿಕ್ಷಣ ಹಾವೇರಿಯ ಪ್ರೌಢಶಿಕ್ಷಣ ಮತ್ತು ಧಾರವಾಡದಲ್ಲಿ ನಡೆಯಿತು. ತಂದೆಗೆ ಇಂಗ್ಲಿಷ್‌ ಬಗ್ಗೆ ಅಭಿಮಾನವಿದ್ದುದರಿಂದ ಪ್ರೇರಿತರಾಗಿ ಇವರು ಸಂಪಾದಿಸಿದ್ದು ಎಂ.ಎ. (ಇಂಗ್ಲಿಷ್‌) ಪದವಿಯನ್ನು. ಬಿಟೀಷ್‌ ಕೌನ್ಸಿಲ್‌ ವಿದ್ಯಾರ್ಥಿವೇತನ ಪಡೆದು ಇಂಗ್ಲೆಂಡ್‌ನ ಲೀಡ್ಸ್‌ ವಿಶ್ವವಿದ್ಯಾಲಯದಿಂದ ಪಡೆದ ಎಂ.ಎ. (ಭಾಷಾಶಾಸ್ತ್ರ) ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್‌ ಸಂಸ್ಥೆಯಿಂದ ಇಂಗ್ಲಿಷ್‌ ಪದವಿ ಪಡೆದರು. ಅಧ್ಯಯನದ ಡಿಪ್ಲೊಮ, ಶಿಕ್ಷಣದ ಪ್ರತಿ ಹಂತದಲ್ಲಿಯೂ ರ್ಯಾಂಕ್‌ ಪಡೆದ ವಿದ್ಯಾರ್ಥಿಯಾಗಿದ್ದವರು.

ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್‌ ಉಪನ್ಯಾಸಕರಾಗಿ ಬೋಧಕ ವೃತ್ತಿ ಆರಂಭಿಸಿ ಪ್ರಾಧ್ಯಾಪಕರಾಗಿ ಮತ್ತು ತಮ್ಮ ಕಾವ್ಯ ಹಾಗೂ ನಾಟಕಗಳ ಮೂಲಕ ಪ್ರಸಿದ್ಧರಾಗುತ್ತಾ ಬಂದವರು. ಹಾವೇರಿಯ ಮುನಿಸಿಪಲ್‌ ಹೈಸ್ಕೂಲಿನಲ್ಲಿದ್ದಾಗಲೇ ಕವನ ಬರೆಯುವುದರ ಬಗ್ಗೆ ಆಸೆ ಬೆಳೆಯತೊಡಗಿತ್ತು.

ಅರವಿಂದರ ಬಗ್ಗೆ ಭಾವೋದ್ವೇಗದಿಂದ ಮಾತನಾಡುತ್ತಿದ್ದ ಗಂಗಾಧರ ಸವದತ್ತಿ ಮಾಸ್ತರರು, ವ್ಯಂಗ್ಯ ಶೈಲಿಯಲ್ಲಿ ಬದುಕಿನ ಹಾಗೂ ಭಾಷೆಯ ಎಳೆಗಳನ್ನು ಬಿಚ್ಚಿಡುತ್ತಿದ್ದ ಆರ್.ವಿ.ಕುಲಕರ್ಣಿ (ಪ್ರಬಂಧಕಾರರಾದ ರಾ.ಕು.) ಮತ್ತು ಗಣಿತದ ಪ್ರಮೇಯಗಳನ್ನು ಬಿಡಿಸುವ ಮುನ್ನ ಹಿಂದಿನ ರಾತ್ರಿ ಬರೆದಿದ್ದ ಕವನಗಳನ್ನೂ ವಾಚಿಸಲು ಪ್ರಾರಂಭಿಸುತ್ತಿದ್ದ ಪಿ.ಜಿ. ಬಿದರಿಮಠ ಮಾಸ್ತರು ಹೀಗೆಯೇ ಹಲವಾರು ಮಂದಿ ಇವರ ಎಳೆ ವಯಸ್ಸಿನಲ್ಲಿಯೇ ಸಾಹಿತ್ಯದ ಪ್ರಭಾವ ಬೀರಿದ್ದರು.

ಧಾರವಾಡದ ಕಾಲೇಜಿಗೆ ಬಂದಾಗ ಪ್ರಿನ್ಸಿಪಾಲರಾಗಿದ್ದ ವಿ.ಕೃ.ಗೋಕಾಕರು ನವ್ಯಕಾವ್ಯ ನಿರ್ಮಿತಿಯ ನೇತಾರರಲ್ಲೊಬ್ಬರಾಗಿದ್ದಾರು. ಇವರ ಪ್ರಭಾವಕ್ಕೆ ಒಳಗಾಗಿ ಕವನಗಳನ್ನೂ ಬರೆಯತೊಡಗಿದ್ದು ಹಲವಾರು ಕವನಗಳು ‘ಪ್ರಪಂಚ ಪತ್ರಿಕೆ’ಯಲ್ಲಿ ಪ್ರಕಟಗೊಂಡವು.

ಕಾವ್ಯದಲ್ಲಿ ಬೆಳೆದ ಆಸಕ್ತಿಯಿಂದ ಹಲವಾರು ಮಂದಿ ಉದಯೋನ್ಮುಖರು ಸೇರಿ ‘ಕಮಲ ಮಂಡಲ’ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿದರು. ,1957 ರಲ್ಲಿ ಇವರು ಬರೆದ ಕವನಗಳಾದ ಹೊಂಗನಸ ಹಡಗು, ನಾಳಿಗಿದೋ ಸ್ವಾಗತ, ಚರಿಪನಾದವೊ ಹಾಡು ಹಕ್ಕಿಯೋ ಮುಂತಾದ ಕವನಗಳು ಪ್ರಕಟಗೊಂಡ ನಂತರ 1960 ರಲ್ಲಿ ‘ಬಾನುಲಿ’ ಎಂಬ ಸಂಗ್ರಹವನ್ನು ಹೊರತಂದರು.

ನಂತರ ಬಂದ ಕವನ ಸಂಗ್ರಹಗಳೆಂದರೆ ಮಧ್ಯ ಬಿಂದು, ಹತ್ತೊಂಬತ್ತು ಕವನಗಳು, ಗಾಂಧಿ ಸ್ಮರಣೆ, ಓ! ನನ್ನ ದೇಶ ಬಾಂಧವರೇ, ಹೂವು ಹೆಣ್ಣು ತಾರೆ, ಅರ್ಧ ಸತ್ಯದ ಹುಡುಗಿ, ಗುಂಡಮ್ಮನ ಹಾಡು, ಶಾಲ್ಮಲಾ ನನ್ನ ಶಾಲ್ಮಲಾ, ದೇವಬಾಗ ಮುಂತಾದವುಗಳು…!

ಸಾಹಿತ್ಯ ಪತ್ರಿಕೆಯೊಂದರ ಅವಶ್ಯಕತೆಯನ್ನು ಮನಗಂಡು ಸಮಾನ ಮನಸ್ಕರೊಡನೆ ಸಮಾಲೋಚಿಸಿ ಡಿರಡ್ಡಿ ಗೋವಿಂದರಾಜ, ಸಿದ್ಧಲಿಂಗ ಪಟ್ಟಣಶೆಟ್ಟಿ, ಇವರುಗಳೊಡನೆ ಸೇರಿ 1964 ರಲ್ಲಿ ಪ್ರಾರಂಭಿಸಿದ ಪತ್ರಿಕೆಯೇ ಸಂಕ್ರಮಣ.ಈ ಪತ್ರಿಕೆಯು ನವ್ಯದ ಉಚ್ಛ್ರಾಯ ಸ್ಥಿತಿಯಲ್ಲಿ ಪ್ರಾರಂಭವಾಗಿದ್ದು ಎಪ್ಪತ್ತರ ದಶಕದ ನಂತರ ದಲಿತ, ಬಂಡಾಯ ಸಾಹಿತ್ಯ ಚಳವಳಿ ಮುಂತಾದವುಗಳನ್ನು ಒಳಗೊಂಡಿದ್ದು ಹಲವಾರು ಯುವ ಬರಹಗಾರರಿಗೆ ವೇದಿಕೆಯನ್ನು ಕಲ್ಪಿಸಿದ ಪತ್ರಿಕೆಯು.

ಸುಮಾರು ಐದು ದಶಕಗಳಿಗೂ ಹೆಚ್ಚು ಕಾಲದಿಂದಲೂ ಪ್ರಕಟವಾಗುತ್ತಿದೆ. ಉತ್ತರ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಎನಿಸಿಕೊಂಡಿರುವ ಧಾರವಾಡದಲ್ಲಿದ್ದಾಗಿನಿಂದಲೂ ಕನ್ನಡ ಪರ ಕಾಳಜಿ ವಹಿಸಿ, ಕನ್ನಡ ಪರ ಹೋರಾಟವನ್ನು ನಡೆಸುತ್ತಾ ಬಂದವರು ಚಂಪಾ. ಹಲವಾರು ಸಂಘಟನೆಗಳಲ್ಲಿ ಪ್ರಮುಖ ಪಾತ್ರವಹಿಸಿದವರು. ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆಯ ಸಂಚಾಲಕರಾಗಿ, ಅಖಿಲ ಕರ್ನಾಟಕ ಕೇಂದ್ರ ಕನ್ನಡ ಕ್ರಿಯಾ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಧಾರವಾಡದ ನಾಟಕ ಕೂಟದ ಕಾರ್ಯದರ್ಶಿಯಾಗಿ, ಮ್ಯಾಳ ನಾಟಕ ಸಂಘದ ಕಾರ್ಯಾಧ್ಯಕ್ಷರಾಗಿ, ಕರ್ನಾಟಕ ವಿಶ್ವವಿದ್ಯಾಲಯದ ವಿಶ್ವಚೇತನ ಸಾಂಸ್ಕೃತಿಕ ವೇದಿಕೆಯ ನಿಯೋಜಕರಾಗಿ-ಹೀಗೆಯೇ ಹಲವು ಹತ್ತು ಸಂಘಟನೆಗಳಲ್ಲಿ ಮುಖ್ಯವಾಗಿ ಗೋಕಾಕ ಚಳವಳಿ ಮುಂತಾದ ಜನಪರ ಚಳವಳಿಗಳಲ್ಲಿ ತೊಡಗಿಸಿಕೊಂಡಿದ್ದವರು, ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ 29 ದಿನ 25 ರಾತ್ರಿ ಜೈಲುವಾಸವನ್ನನುಭವಿಸಿದವರು.

ಇದಲ್ಲದೇ ಕನ್ನಡಕ್ಕಾಗಿ ದುಡಿಯುತ್ತಿದ್ದ ಇವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಿಸಿತು. ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಚುನಾಯಿತ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದವರು ಚಂಪಾ. ಪರಿಷತ್ತಿನ ಅಧ್ಯಕ್ಷರಾಗಿದ್ದಾಗ ಪರಿಷತ್ತನ್ನೂ ಪ್ರಬಲ ಹೋರಾಟದ ವೇದಿಕೆಯನ್ನಾಗಿ ರೂಪಿಸಿದ್ದು, ಪುಸ್ತಕ ಮಾರಾಟದ ಮೂಲಕ ಸಣ್ಣ ಪ್ರಮಾಣದ ಪ್ರಕಾಶಕರನ್ನೂ ಉತ್ತೇಜಿಸಲು ‘ಪುಸ್ತಕ ಸಂತೆ’ಯನ್ನೂ ಪ್ರತಿ ಶನಿವಾರ ಸಂಜೆ ಏರ್ಪಡಿಸಿದ್ದರ ಜೊತೆಗೆ ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು, ಶಿಕ್ಷಣ ಸಮಸ್ಯೆಯನ್ನು ಪರಿಹರಿಸಲು ಉನ್ನತ ಮಟ್ಟದ ಸಮಾಲೋಚನ ಸಭೆಯನ್ನು ಏರ್ಪಡಿಸಿದ್ದು, ಗಡಿನಾಡ ಕನ್ನಡಿಗರ ಸಮಸ್ಯೆಗಳ ಪರಿಹಾರಕ್ಕಾಗಿ ಅಧ್ಯಕ್ಷರ ಪುಸ್ತಕ ನಿಧಿಯನ್ನು ಪ್ರಾರಂಭಿಸಿದ್ದು, ಕನ್ನಡ ಭಾಷೆಗೂ ಶಾಸ್ತ್ರೀಯ ಸ್ಥಾನಮಾನ ದೊರೆಯುವಂತಾಗಲು ಹೋರಾಟ ನಡೆಸಿದ್ದು, ಪರಿಷತ್ತಿಗೆ ತನ್ನದೇ ಆದ ವೆಬ್‌ಸೈಟ್‌, ಇ-ಮೆಯಿಲ್‌ ಸೌಲಭ್ಯಗಳು, ಗಣಕ ಸಮ್ಮೇಳನದ ಆಯೋಜನೆ ಮುಂತಾದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದರು.

ಕಾವ್ಯ ಕೃಷಿಯಲ್ಲೇ ತೊಡಗಿಸಿಕೊಂಡಿದ್ದ ಚಂಪಾರವರು ಹಲವಾರು ಸಮಸ್ಯೆಗಳ ಮಿಡಿತಕ್ಕೆ ಒಳಗಾಗಿ ಕಾವ್ಯ ಮಾಧ್ಯಮದಿಂದ ನಾಟಕ ಮಾಧ್ಯಮವನ್ನೂ ಆಯ್ದುಕೊಂಡು ಹಲವಾರು ನಾಟಕಗಳನ್ನೂ ರಚಿಸಿದ್ದು ಅವುಗಳಲ್ಲಿ ಕೊಡೆಗಳು, ಅಪ್ಪ, ಕುಂಟ ಕುಂಟ ಕುರುವತ್ತಿ, ಗುರ್ತಿನವರು, ಟಿಂಗರ ಬುಡ್ಡಣ್ಣ, ಕತ್ತಲರಾತ್ರಿ, ಗೋಕರ್ಣದ ಗೌಡಸಾನಿ, ಜಗದಂಬೆಯ ಬೀದಿ ನಾಟಕ, ಬುರಡಿ ಬಾಬನ ವಸ್ತ್ರಾಪಹರಣ ಪವಾಡ, ನಳ ಕವಿಯ ಮಸ್ತಕಾಭಿಷೇಕ, ವಂದಿಮಾಗಧ ಮುಂತಾದವುಗಳು.

ಇವರ ಸಂಪಾದಿತ ಕೃತಿಗಳೆಂದರೆ ಸಂಕ್ರಮಣ ಕಾವ್ಯ, ಗಾಂಧಿ ಗಾಂಧಿ, ಜೂನ್‌ 75 ಮಾರ್ಚ್ 77, ಬಂಡಾಯ ಮತ್ತು ಸಾಹಿತ್ಯ, ನೆಲ್ಸನ್‌ಮಂಡೇಲಾ, ಕನ್ನಡ ನಾಡಿಗೊಂದು ಪ್ರಾದೇಶಿಕ ಪಕ್ಷ, ಸಂಕ್ರಮಣ ಸಾಹಿತ್ಯ (3 ಸಂಪುಟಗಳಲ್ಲಿ), ಗಾಂಧಿ ಎನ್ನುವ ಹೆಸರು ಮುಂತಾದವುಗಳಾದರೆ ಇತರ ಕೃತಿಗಳೆಂದರೆ ಬೇಂದ್ರೆ-ನಾ ಕಂಡಂತೆ, ನನಗೆ ಕಂಡಷ್ಟು, 26 ದಿನ 25 ರಾತ್ರಿ, ಕನ್ನಡ ಕನ್ನಡ ಬರ್ರಿ‍ ನಮ್ಮ ಸಂಗಡ ಮತ್ತು ಇಂಗ್ಲಿಷ್‌ನಲ್ಲಿ ರಚಿಸಿದ ಕೃತಿ AT THE OTHER END ಮುಂತಾದ ಕೃತಿಗಳು.

ಕನ್ನಡ ನಾಡು-ನುಡಿ, ಸಂಸ್ಕೃತಿ ಯ ರಕ್ಷಣೆಗಾಗಿ ಹೋರಾಡುತ್ತಾ ಬಂದಿರುವ ಚಂಪಾರವರಿಗೆ ಬಂದಿರುವ ಪ್ರಶಸ್ತಿಗಳು ಹಲವಾರು-ರಾಜ್ಯ ಸಾಹಿತ್ಯ ಅಕಾಡಮಿ ಬಹುಮಾನ (1960, 74, 76), ರಾಜ್ಯ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ (1988), ದಿನಕರ ದೇಸಾಯಿ ಪ್ರತಿಷ್ಠಾನ ಪ್ರಶಸ್ತಿ (1989), ಕರ್ನಾಟಕ ನಾಟಕ ಅಕಾಡಮಿ ಪ್ರಶಸ್ತಿ (1992), ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (1995), ಕೆ.ವಿ. ಶಂಕರಗೌಡ ರಂಗಭೂಮಿ ಪ್ರಶಸ್ತಿ (1996) ಸಂದೇಶ್‌ ಮಾಧ್ಯಮ ಪ್ರಶಸ್ತಿ (1996) ಕರುನಾಡ ಭೂಷಣ ಪ್ರಶಸ್ತಿ (2006), ಆಳ್ವಾಸ್‌ ನುಡಿಸಿರಿ ಪ್ರಶಸ್ತಿ (2011) ಮತ್ತು ಪಂಪ ಪ್ರಶಸ್ತಿ (2911) ಮುಂತಾದ ಪ್ರಶಸ್ತಿಗಳು ಸಂದಿವೆ ಚಂದ್ರಶೇಖರ ಪಾಟೀಲರ ಸಾಹಿತ್ಯ ಸಾಧನೆಗೆ..!

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here