ಬಿಸಿ ಬಿಸಿ ಸುದ್ದಿ

ಅಂಗನವಾಡಿ ನೌಕರರ ಬೇಡಿಕೆಗಳ ಈಡೇರಿಸಲು ಪ್ರತಿಭಟನೆ

ಸುರಪುರ: ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲೂಕು ಘಟಕದಿಂದ ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃಧ್ಧಿ ಇಲಾಖೆ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಲಾಗಿದೆ.

ಈ ಸಂದರ್ಭದಲ್ಲಿ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಸುರೇಖಾ ಕುಲಕರ್ಣಿ ಮಾತನಾಡಿ,ನಮ್ಮ ಅಂಗನವಾಡಿ ನೌಕರರ ೨೬ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅನೇಕ ವರ್ಷಗಳಿಂದ ಸರಕಾರಕ್ಕೆ ಮನವಿ ಮಾಡಲಾಗುತ್ತಿದೆ.ಆದರೆ ಸರಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇದೇ ತಿಂಗಳು ೧೦ನೇ ತಾರೀಖು ಬೆಂಗಳೂರಿನಲ್ಲಿ ಅನಿರ್ಧಿಷ್ಟ ಹೋರಾಟ ಹಮ್ಮಿಕೊಳ್ಳಲಾಗಿತ್ತು.ಆದರೆ ಮುಖ್ಯಮಂತ್ರಿಗಳು ನಮ್ಮ ಮುಖಂಡರ ಸಭೆಯನ್ನು ನಡೆಸಿ ಮಾತುಕತೆ ನಡೆಸುವುದಾಗಿ ತಿಳಿಸಿದ್ದರಿಂದ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು,ಸರಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಮತ್ತೆ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ನಂತರ ಶಿಶು ಅಭಿವೃಧ್ಧಿ ಯೋಜನಾಧಿಕಾರಿಗಳಿಗೆ ಬರೆದ ಮನವಿಯನ್ನು ಕಚೇರಿಯ ಸಹಾಯಕರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷರಾದ ಬಸ್ಸಮ್ಮ ಆಲ್ಹಾಳ,ಖಜಾಂಚಿ ರಾಧಾಬಾಯಿ ಲಕ್ಷ್ಮೀಪುರ,ಹುಣಸಗಿ ತಾಲೂಕು ಅಧ್ಯಕ್ಷ ನಸೀಮಾ ಮುದನೂರು,ಮಂಜುಳಾ ಝಂಡದಕೇರಾ,ಫರವಿನ್ ಶರ್ಕಿಮೊಹಲ್ಲಾ,ಚಂದ್ರಕಲಾ ದೇರವಗೋನಾಲ,ಮಲ್ಲಮ್ಮ ದೇವತ್ಕಲ್,ಸುಲೋಚನಾ ವಜ್ಜಲ್,ಸೂಗಮ್ಮ ದೀವಳಗುಡ್ಡ,ಜಯಮಾಲಾ ರತ್ತಾಳ,ಬೀಬಿ ಇಶ್ರತ್ ಕೆಂಭಾವಿ,ವಿಜಯಲಕ್ಷ್ಮೀ ಕೆಂಭಾವಿ ಸೇರಿದಂತೆ ಅನೇಕರಿದ್ದರು.

emedialine

Recent Posts

ನಾಳೆ ದಿವಂಗತ ಡಾ. ಎಸ್.ಎಸ್ ಪಾಟೀಲ್ ಅವರ ದ್ವಿತೀಯ ಪುಣ್ಯಸ್ಮರಣೆ: ಪ್ರಶಸ್ತಿ ಪ್ರದಾನ

ಕಲಬುರಗಿ:  ನಾಳೆ ಕರ್ಮಯೋಗಿ ದಿವಂಗತ ಡಾ. ಎಸ್ ಎಸ್ ಪಾಟೀಲ್ ಅವರ ದ್ವಿತೀಯ ಪುಣ್ಯ ಸ್ಮರಣೆಯ ಪ್ರಯುಕ್ತ ಕರ್ಮಯೋಗಿ ಪ್ರಶಸ್ತಿ…

13 hours ago

ರಾಜ್ಯಪಾಲರ ಅವಹೇಳನ ಖಂಡಿಸಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

ಕಲಬುರಗಿ; ರಾಜ್ಯಪಾರಿಗೆ ಅವಮಾನ ಮಾಡಿದ ಕಾಂಗ್ರೆಸ್ ಕ್ರಮವನ್ನು ಖಂಡಿಸಿ ಹಾಗೂ ಮುಡಾ ಹಗರಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ…

13 hours ago

ಶಕ್ತಿ ಯೋಜನೆ: ಕಲಬುರಗಿಯಲ್ಲಿ 757.87 ಲಕ್ಷ ಮಹಿಳೆಯರ ಉಚಿತ ಪ್ರಯಾಣ | ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ರಾಜ್ಯ ಸರ್ಕಾರದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾದ ಶಕ್ತಿ ಯೋಜನೆ ಜಾರಿಗೆ ಬಂದು ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದು, ಕಾಂಗ್ರೆಸ್…

14 hours ago

ಪರಿಸರ ಸ್ನೇಹಿ ಗಣಪನನ್ನು ಪ್ರತಿಷ್ಠಾಪಿಸುವಂತೆ ಡಿ.ಸಿ. ಸೂಚನೆ

ಕಲಬುರಗಿ: ಗೌರಿ-ಗಣೇಶ ಹಬ್ಬ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪಿ.ಓ.ಪಿ ಗಣಪನನ್ನು ತ್ಯಜಿಸಿ ಪರಿಸರ ಸ್ನೇಹಿ ಮಣ್ಣಿನ ಗಣಪನನ್ನು ಪ್ರತಿಷ್ಠಾಪಿಸುವ ಮೂಲಕ ಗಣೇಶೋತ್ಸವನ್ನು…

14 hours ago

ಮಹಿಳೆಯರ ಸುರಕ್ಷತೆಗೆ ಸರಕಾರಗಳು ಕಠಿಣ ಕ್ರಮ ಕೈಗೊಳ್ಳಬೇಕು: ಡಾ. ಸುಧಾ ಆರ್ ಹಾಲಕಾಯಿ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕಲ್ಕತ್ತಾ ಮತ್ತು ಬೇರೆ ಕಡೆಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣಗಳು…

15 hours ago

ಮಲ್ಲಿಕಾರ್ಜುನ್ ಜಿನಕೇರಿಗೆ ಸನ್ಮಾನ

ಕಲಬುರಗಿ: ಬಿಜೆಪಿ ಎಸ್ಸಿ ಮೋರ್ಚದ ನಗರ ಅಧ್ಯಕ್ಷರಾಗಿ ಮಲ್ಲಿಕಾರ್ಜುನ್ ಜಿನಕೇರಿ ಅವರಿಗೆ ನೇಮಕ ಮಾಡಿದಕ್ಕೆ  ಮಾದಿಗ ಸಮಾಜದ ಯುವ ಹೋರಾಟಗಾರರ…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420