ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಅಂಗನವಾಡಿ ನೌಕರರಿಂದ ಪ್ರತಿಭಟನೆ

ಶಹಾಬಾದ: ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಸೋಮವಾರ ಅಂಗನವಾಡಿ ನೌಕರರು ಪ್ರತಿಭಟನೆ ನಡೆಸಿ ಗ್ರೇಡ್-೨ ತಹಸೀಲ್ದಾರ ಗುರುರಾಜ ಸಂಗಾವಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ರಾಜ್ಯದಲ್ಲಿ ಮಹಿಳೆಯರ ಮತ್ತು ಮಕ್ಕಳ ಸರ್ವತೋಮುಖ ಅಭಿವೃದ್ಧಿ ಅಂಗನವಾಡಿ ನೌಕರರು ಸದಾ ದುಡಿಯುತ್ತಿದ್ದಾರೆ. ಕೊರೊನಾ ಸಂದರ್ಭದಲ್ಲಿ ಫ್ರಂಟ್‌ಲೈನ್ ವಾರಿಯರ್ಸ್ ಆಗಿ ದುಡಿದು ೫೯ ಜನರು ಬಲಿದಾನವಾಗಿದ್ದಾರೆ. ಮಾತ್ರವಲ್ಲದೆ, ೨೯೩ ಜನರು ಕೊರೊನಾ ಸೋಂಕಿಗೊಳಗಾಗಿದ್ದಾರೆ. ಕೆಲವರು ಕುಟುಂಬದವರನ್ನು ಕಳೆದುಕೊಂಡು ಒಂಟಿಯಾಗಿದ್ದಾರೆ.

ಕೊರೊನಾ ಲಾಕ್‌ಡೌನ್ ಇದ್ದಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನೂತನ ಶಿಕ್ಷಣ ನೀತಿ ೨೦೨೦ (ಎನ್‌ಇಪಿ)ನ್ನು ತಂದಿದೆ. ಐಸಿಡಿಎಸ್ ಯೋಜನೆಗೆ ಸಂಬಂಧಿಸಿ ೩ ರಿಂದ ೬ ವ? ಅಂದರೆ ೩೬ ತಿಂಗಳ ಮಗುವಿನಿಂದ ೫ ವ? ೧೦ ತಿಂಗಳ ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ದಾಖಲಾಗುತ್ತಿದ್ದರು. ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳಲ್ಲಿ ಅನಿಯಮಿತವಾಗಿ ಎಲ್.ಕೆ.ಜಿ – ಯು.ಕೆ.ಜಿ.ಗಳನ್ನು ತೆರೆದಿದ್ದರಿಂದ ಅಂಗನವಾಡಿ ಕೇಂದ್ರಕ್ಕೆ ಈಗಾಗಲೇ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ೫ ವ? ತುಂಬುವುದಕ್ಕೆ ಮೊದಲು ಎನ್‌ಇಪಿಯ ಪ್ರಕಾರ ೫ ವ?ದ ಮಕ್ಕಳಿಗೆ ಬಾಲವಾಟಿಕಾ ಎನ್ನುವ ಪ್ರತ್ಯೇಕ ವ್ಯವಸ್ಥೆ ಮಾಡಿದರೆ ಅಂಗನವಾಡಿಗಳಲ್ಲಿ ಕೇವಲ ೩ ವ?ದ ಮಕ್ಕಳು ಮಾತ್ರ ಇರುತ್ತಾರೆ. ಮಕ್ಕಳ ರಾಷ್ಟ್ರೀಯ ನೀತಿ ಮತ್ತು ಗುರಿಗಳನ್ನು ಸಾಧಿಸಲು ಸಾಧ್ಯವಿಲ್ಲ ಎಂದರು.

ಅಂಗನವಾಡಿ ನೌಕರರನ್ನು ಐಸಿಡಿಎಸ್‌ನ ೫ ಉದ್ದೇಶಗಳಿಗೆ ಬಿಟ್ಟು ಉಳಿದ ಹೆಚ್ಚುವರಿ ಕೆಲಸ ನಿಬಂಧಿಸಿ ಶಾಲಾ ಪೂರ್ವ ಶಿಕ್ಷಣಕ್ಕೆ ಒತ್ತು ನೀಡಬೇಕು.ಹೊಸ ಶಿಕ್ಷಣ ನೀತಿಯ ಶಿಫಾರಸ್ಸಿನಲ್ಲಿರುವ ೩ ರಿಂದ ೮ ವ?ದ ವರ್ಗೀಕರಣವನ್ನು ಕೈ ಬಿಡಬೇಕು.ಮಹಿಳಾ ಮಕ್ಕಳ ಅಭಿವೃದ್ದಿ ಇಲಾಖೆ ಶಿಫಾರಸ್ಸು ಮಾಡಿರುವ ೩೩೯.೪೮ ಲಕ್ಷ ಅನುದಾನ ಬಿಡುಗಡೆ ಮಾಡಿ.ಕೊರೋನಾ ಸಂದರ್ಭದಲ್ಲಿ ನಿಧನರಾದ ಕುಟುಂಬದವರಿಗೆ ಮಗಳು ಇಲ್ಲದಿದ್ದಾಗ ಸೊಸೆಗೆ ಅವರ ಹುದ್ದೆ ಕೊಡಬೇಕು.ಅನುಕಂಪದ ಆಧಾರದಲ್ಲಿ ಕೆಲಸ ಕೊಡುವಾಗ ಮಗಳು ಬದಲಿಗೆ ಸೊಸೆ ಎಂದು ಬದಲಿಸಬೇಕು.

ಕೊರೋನಾ ವಾರಿಯರ‍್ಸ ಆಗಿ ಕೆಲಸ ಮಾಡಿ ಸೋಂಕಿತರಾಗಿ ನಿಧನರಾದ ಅಂಗನವಾಡಿ ನೌಕರರಿಗೆ ಕೂಡಲೇ ೩೦ ಲಕ್ಷ ಪರಿಹಾರ ಬಿಡುಗಡೆ ಮಾಡಬೇಕು.ಕೊರೋನಾ ಸಂದರ್ಭದಲ್ಲಿ ಕೆಲಸದ ಒತ್ತಡದಿಂದ ಮೃತರಾದವರಿಗೆ ಮರಣ ಪರಿಹಾರ ೧ ಲಕ್ಷ ರೂ. ಕೊಡಬೇಕು.ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮತ್ತು ಐಎಲ್‌ಸಿ ಶಿಫಾರಸ್ಸಿನಂತೆ ನೌಕರರಂತೆ ಗುರುತಿಸಿ ಕನಿ? ವೇತನ ಜಾರಿ ಮಾಡಬೇಕು.

ಅಂಗನವಾಡಿ ನೌಕರರನ್ನು ಖಾಯಂ ಮಾಡಬೇಕು. ಮಾಡುವ ತನಕ ೨೬ ಸಾವಿರ ವೇತನ ಕೊಡಬೇಕು. ಜೆಟ್‌ನಲ್ಲಿ ಕಡಿತವಾಗಿರುವ ೮೪೫೨.೩೮ ಕೋಟಿ ಹಣ ವಾಪಸ್ ನೀಡಬೇಕು.ಐಸಿಡಿಎಸ್ ಯೋಜನೆಗೆ ಅನುದಾನವನ್ನು ಹೆಚ್ಚಳ ಮಾಡಿ ದೇಶದ ಮಕ್ಕಳ ಮತ್ತು ಮಹಿಳೆಯರನ್ನು ರಕ್ಷಿಸಬೇಕು.ಬಿಎಲ್‌ಒ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈ ಬಿಡಬೇಕು.ಅಂಗನವಾಡಿ ಕೇಂದ್ರಗಳ ಬಾಡಿಗೆಗೆ ಇರುವ ಮಾನದಂಡ ತೆಗೆಯಬೇಕು. ಆಯಾ ತಿಂಗಳಲ್ಲೇ ಬಾಡಿಗೆ ಹಣ ಬಿಡುಗಡೆ ಮಾಡಬೇಕು.ಎಂಬ ಬೇಡಿಕೆ ಸೇರಿದಂತೆ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿಐಟಿಯು ಅಧ್ಯಕ್ಷೆ ಶೇಖಮ್ಮ ಕುರಿ, ಪ್ರಧಾನ ಕಾರ್ಯದರ್ಶಿ ರುದ್ರಮ್ಮ ಕಟ್ಟಿಮನಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420