ಶಹಾಬಾದ: ಬೇಡ ಜಂಗಮರಿಗೆ ಸಂವಿಧಾನಬದ್ಧವಾಗಿ ದೊರೆಯಬೇಕಾದ ಬೇಡ ಜಂಗಮ ಜಾತಿ ಪ್ರಮಾಣ ಪತ್ರವನ್ನು ಸರಕಾರ ನೀಡಬೇಕೆಂದು ಆಗ್ರಹಿಸಿ ಮಂಗಳವಾರ ಹೈದ್ರಬಾದ ಕರ್ನಾಟಕ ಬೇಡಜಂಗಮ ಸಮಾಜ ಸಂಸ್ಥೆ ವತಿಯಿಂದ ತಹಸೀಲ್ದಾರ ಗುರುರಾಜ ಸಂಗಾವಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಹೈದ್ರಬಾದ ಕರ್ನಾಟಕ ಪ್ರದೇಶದಲ್ಲಿ ವಾಸಿಸುವ ಬೇಡ ಜಂಗಮರಿಗೆ ಸರಕಾರದ ನಿರ್ದೇಶನಗಳು ಹಾಗೂ ಸುತ್ತೋಲೆಗಳನ್ನು ಪರಿಗಣಿಸಿ ಬೇಡ ಜಂಗಮ ಜಾತಿ ಪ್ರಮಾಣ ನೀಡಬೇಕು.ಬೇಡ ಜಂಗಮರು ಯಾರ ಹಕ್ಕನ್ನೂ ಕಿತ್ತುಕೊಳ್ಳುತ್ತಿಲ್ಲ.ಆದರೆ ತಮಗೆ ಸಂವಿಧಾನಾತ್ಮಕವಾಗಿ ಸಿಗಬೇಕಾಗಿರುವ ಹಕ್ಕನ್ನು ಪಡೆದುಕೊಳ್ಳಲು ಹೋರಾಟ ಮಾಡುವ ಸ್ಥಿತಿ ಬಂದಿದೆ.ರಾಜ್ಯದಲ್ಲಿ ಅತಿ ಹಿಂದುಳಿದ ಜಾತಿಗಳಲ್ಲಿ ಬೇಡ ಜಂಗಮ ಸಮಾಜವೂ ಒಂದು.
ಆದ್ದರಿಂದ ಕೇಂದ್ರ ಸರಕಾರ ಸಂವಿಧಾನದಲ್ಲಿ ಸ್ಪಷ್ಟವಾಗಿ ಬೇಡ ಜಂಗಮ ಜಾತಿಯ ಬಗ್ಗೆ ನಮೂದಿಸಿದೆ.ಅಲ್ಲದೇ ಸೂರ್ಯನಾಥ ಕಾಮತ ವರದಿ ಮತ್ತು ಕೋರ್ಟ ಆದೇಶದಲ್ಲೂ ರಾಜ್ಯದ ವೀರಶೈವ ಜಂಗಮರೇ ಬೇಡ ಜಂಗಮರು ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.ಆದರೂ ಅಧಿಕಾರಿಗಳು ಜಾತಿ ಪ್ರಮಾಣ ಪತ್ರ ನೀಡುತ್ತಿಲ್ಲ.ಆದ್ದರಿಂದ ಜಂಗಮರೆಲ್ಲರೂ ಸಂಘಟನೆಯ ಮುಖಾಂತರ ನಮ್ಮ ಹಕ್ಕನ್ನು ಪಡೆಯಬೇಕಾಗಿದೆ ಎಂದರು.ಕೂಡಲೇ ನಮಗೆ ನ್ಯಾಯುತವಾಗಿ ಸಿಗಬೇಕಾದ ಪ್ರಮಾಣ ಪತ್ರವನ್ನು ಸರಕಾರ ನೀಡಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಕಾರ್ಯದರ್ಶಿ ಮರುಳಾರಾಧ್ಯ ಕಳ್ಳಿಮಠ, ಗೌರಾವಾಧ್ಯಕ್ಷ ಮೃತ್ಯುಂಜಯ್ ಹಿರೇಮಠ,ನಗರಾಧ್ಯಕ್ಷ ಶಿವಕುಮಾರ ಹಿರೇಮಠ, ಉಪಾಧ್ಯಕ್ಷ ಶರಣಯ್ಯ ಹಿರೇಮಠ, ಕಾರ್ಯದರ್ಶಿ ಜಗದೀಶ ಮಠಪತಿ, ತಾಲೂಕಾ ಸಂಚಾಲಕ ಬಸಯ್ಯಸ್ವಾಮಿ ಮಠಪತಿ, ಮಲ್ಲಿಕಾರ್ಜುನ ತುಪ್ಪದ ಮಠ,ಶರಣಯ್ಯಸ್ವಾಮಿ ಮಠಪತಿ, ರಾವೂರ,ಬಸಯ್ಯಸ್ವಾಮಿ ನಂದಿಕೋಲ, ಸೋಮಶೇಖರಸ್ವಾಮಿ ಮಠಪತಿ ಇತರರು ಇದ್ದರು.
ಸುರಪುರ: ರಾಜ್ಯದಲ್ಲಿಯೇ ಅತ್ಯುತ್ತಮವಾದ ಕನ್ನಡ ಸಾಹಿತ್ಯ ಸಂಘ ಎಂದು ಸರಕಾರ ಗುರುತಿಸಿ ಕಳೆದ ವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡಿದೆ,ಇದಕ್ಕೆ ಅನೇಕ…
ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ದಸರಾ ಸಿ.ಎಂ ಕಪ್ ಕ್ರೀಡಾಕೂಟಕ್ಕೆ ಶಾಸಕ ಅಲ್ಲಂಪ್ರಭು ಪಾಟೀಲ್ ಅವರು ಚಾಲನೆ…
ಕಲಬುರಗಿ: ಸದಾ ಕನ್ನಡಪರ ಚಟುವಟಿಕೆಗಳನ್ನು ಕೈಗೊಳ್ಳುತ್ತಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ಮಾಣಗೊಂಡಿರುವ ಸಾಹಿತ್ಯ ಮಂಟಪಕ್ಕೆ ಅಗತ್ಯವಿರುವ ಸಲಕರಣೆಗಳ ಖರೀದಿಗೆ…
ಬೆಂಗಳೂರು: ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕ ಕಲಬುರಗಿ ವತಿಯಿಂದ ರವಿವಾರ ತಳವಾರ ಸಮುದಾಯದ ಸರಕಾರಿ ನೌಕರರ ಸಿಂಧುತ್ವ…
ಕಲಬುರಗಿ; ಪ್ರಾಚೀನ ಭಾರತೀಯ ಜ್ಞಾನ ವ್ಯವಸ್ಥೆಯು ಜೀವನದಲ್ಲಿ ಸವಾರ್ಂಗೀಣ ಆರೋಗ್ಯ ಮತ್ತು ಸ್ವಾಸ್ಥ್ಯವನ್ನು ಸಾಧಿಸಲು ಎಲ್ಲಾ ಸಮಸ್ಯೆಗಳಿಗೆ ಉತ್ತರ ಮತ್ತು…
ಕಲಬುರಗಿ: 'ಕಾವ್ಯ ದೊಂಬರಾಟವಲ್ಲ. ನಿಜವಾದ ಹಸಿವು ಗುರುತಿಸುವುದು ಕಾವ್ಯ' ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಅಭಿಪ್ರಾಯ…