ಜಮಖಂಡಿಗೆ ವೈದ್ಯಕೀಯ ಸರ್ಕಾರಿ ಕಾಲೇಜು ನೀಡಿ : ಡಾ.ಗಿರೀಶ ಉದಪುಡಿ

ಜಮಖಂಡಿ: ತಾಲೂಕಿನಲ್ಲಿ ಹೆಚ್ಚಾಗುತ್ತಿರುವ ಜನಸಂಖ್ಯೆ ಅನುಗುಣವಾಗಿ ಪ್ರಸಕ್ತವಾಗಿ ಜಮಖಂಡಿ ನಗರಕ್ಕೆ ಸರಕಾರಿ ವೈದ್ಯಕೀಯ ಕಾಲೇಜು ಅಗತ್ಯವಾಗಿದೆ ಎಂದು ಹಿರಿಯ ವೈದ್ಯ ಡಾ.ಗಿರೀಶ ಉದಪುಡಿ ಹೇಳಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಜನಸಂಖ್ಯೆ ಹೆಚ್ಚಾದಂತೆ ವೈಧ್ಯಕೀಯ ಕ್ಷೇತ್ರದಲ್ಲಿ ಸವಾಲುಗಳಿದ್ದು, ಅವುಗಳನ್ನು ಸರ್ಮಕವಾಗಿ ಎದುರಿಸಲು ರಾಜ್ಯ ಸರಕಾರ ಹೊಸದಾಗಿ ಜಮಖಂಡಿ ನಗರಕ್ಕೆ ವೈದ್ಯಕೀಯ ಕಾಲೇಜಿಗೆ ಅನುಮತಿ ನೀಡಬೇಕು. ಈಗಾಗಲೇ ಸಾಮಾಜಿಕ, ರಾಜಕೀಯ ಮತ್ತು ಹಿರಿಯ ವೈಧ್ಯರ ನಡುವೆ ಮಾತುಕತೆ ಮಾಡಲಾಗಿದ್ದು, ಸಿದ್ಧತೆ ಮಾಡುವಂತೆ ಉತ್ತರ ಲಭ್ಯವಾಗಿದೆ ಎಂದರು.

ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಕೋಟ್ಯಂತರ ಹಣ ಪ್ರವೇಶ ಪಡೆಯುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಬಡಮಕ್ಕಳಿಗೆ μà ಭರಿಸುವ ಶಕ್ತಿ ಇರುವುದಿಲ್ಲ. ಪ್ರತಿಭಾನ್ವಿತ ವಿದ್ಯಾರ್ಥಿಗೆ ಹಣಕಾಸಿನ ತೊಂದರೆಯಿಂದ ಜೀವನದ ನಂಬಿಕೆ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗುತ್ತಿದೆ. ನಮ್ಮ ಭಾಗದಲ್ಲಿ ಸರಕಾರಿ ವೈದ್ಯಕೀಯ ಕಾಲೇಜ ನಿರ್ಮಾಣದಿಂದ ರಬಕವಿ,
ಬನಹಟ್ಟಿ, ತೇರದಾಳ, ಅಥಣಿ, ಮುಧೋಳ, ಬೀಳಗಿ, ಸಾವಳಗಿ ಸಹಿತ ವಿವಿಧ ತಾಲೂಕಿನ ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಅಧ್ಯಯನಕ್ಕೆ ಹೆಚ್ಚಿನ ಅನುಕೂಲವಾಗಿದೆ ಎಂದರು.

ಭವಿಷ್ಯದಲ್ಲಿ ಜಮಖಂಡಿ ಜಿಲ್ಲಾಕೇಂದ್ರ ಆಗಲಿದ್ದು, ಸಾಕಷ್ಟು ಸಂಪನ್ಮೂಲ ಹೊಂದಿರುವ ನಮ್ಮ ತಾಲೂಕಿನಲ್ಲಿ ಸರಕಾರಿ ವೈಧ್ಯಕೀಯ ಕಾಲೇಜ ಅಂತ್ಯಂತ ಅವಶ್ಯಕವಾಗಿದೆ. ಒತ್ತಡ ಜೀವನದಲ್ಲಿ ಹೊಸ ರೋಗಗಳು ಹುಟ್ಟುತ್ತಿರುವ ಇಂದಿನ ದಿನಮಾನದಲ್ಲಿ ಚಿಕಿತ್ಸೆ ಪಡೆಯದು ಕಷ್ಟಕರವಾಗುತ್ತಿದೆ. ಪ್ರತಿಯೊಂದಕ್ಕೂ ಬಾಗಲಕೋಟೆ, ಬೆಳಗಾವಿ, ಮಿರಜ, ವಿಜಯಪುರ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚುವರಿ ವೈದ್ಯಕೀಯ ಚಿಕಿತ್ಸೆ ಪಡೆಯಬೇಕಾಗಿದೆ. ಈಗಾಗಲೇ ಕಳೆದ ನಾಲ್ಕು ವರ್ಷಗಳ ಹಿಂದೆ ಬಾಗಲಕೋಟೆ ಜಿಲ್ಲೆಗೆ ಹೊಸದಾಗಿ ಸರಕಾರಿ
ವೈಧ್ಯಕೀಯ ಕಾಲೇಜು ಮಂಜೂರಿ ಆಗಿದ್ದು, ಯಾರು ಆಸಕ್ತಿ ತೋರದ ಹಿನ್ನಲೆಯಲ್ಲಿ ಯಥಾಸ್ಥಿತಿಯಲ್ಲಿದೆ.

ಬಾಗಲಕೋಟೆಗೆ ಮಂಜೂರಿ ಆಗಿರುವ ಸರಕಾರಿ ವೈಧ್ಯಕೀಯ ಕಾಲೇಜ್‌ ಜಮಖಂಡಿ ಹಸ್ತಾಂತರೆಗೊಳಿಸುವ ಕೆಲಸ ಆಗಬೇಕು. ಇಲ್ಲವಾದರೇ ಜಮಖಂಡಿ ಹೊಸದಾಗಿ ವೈಧ್ಯಕೀಯ ಕಾಲೇಜ ಮಂಜೂರಿ ಮಾಡಬೇಕೆಂದು ಒತ್ತಾಯಿಸಿದರು.

ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಮಾತನಾಡಿ, ಜಮಖಂಡಿ ಉಪವಿಭಾಗ ಸ್ಥಾನಮಾನ ಹೊಂದಿರುವ ಹಿನ್ನೆಲೆಯಲ್ಲಿ ಜಮಖಂಡಿ ಜಿಲ್ಲಾಕೇಂದ್ರ ಆಗುವ ನಿಟ್ಟಿನಲ್ಲಿ ಎಲ್ಲ ರೀತಿಯ ಅರ್ಹತೆ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಜಮಖಂಡಿ ನಗರದ ಸಮಾನ ಮನಸ್ಕರ ಮತ್ತು ಹಿರಿಯ ವೈದ್ಯರು, ನಗರದ ಹಿರಿಯರು ಕೂಡಿಕೊಂಡು ಸಮಿತಿ ರಚಿಸುವ ಮೂಲಕ ನಿಯೋಗದೊಂದಿಗೆ ತೆರಳಿ ಮುಖ್ಯಮಂತ್ರಿ ಅವರಿಗೆ ಜಮಖಂಡಿಗೆ ಸರಕಾರಿ ಮೆಡಿಕಲ್‌ ಕಾಲೇಜು ಅನುಮತಿ ನೀಡುವಂತೆ ಒತ್ತಾಯಿಸುವುದಾಗಿ ಹೇಳಿದರು.

emedialine

Recent Posts

ಕೋಲಿ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕು ಕೋಲಿ ಸಮಾಜದ ಅಧ್ಯಕ್ಷರಾಗಿ ಮೂರು ವರ್ಷಗಳ ಅವಧಿ ಪೂರ್ಣಗೊಂಡಿದ್ದರಿಂದ ನೂತನ ಪದಾಧಿಕಾರಿಗಳ ಆಯ್ಕೆಗೆ…

51 mins ago

ನೂತನ ಪದಾಧಿಕಾರಿಗಳ ಪದಗೃಹಣ, ಅಭಿನಂದನಾ ಸಮಾರಂಭ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಚಿತ್ತಾಪುರ ತಾಲೂಕಿನ…

2 hours ago

ಕೆಬಿಎನ ಆಸ್ಪತ್ರೆಯಲ್ಲಿ ಉಚಿತ ಇಸಿಜಿ ತಪಾಸಣೆ

ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…

3 hours ago

ವಿದ್ಯಾರ್ಥಿಗಳ ಕೌಶಲ್ಯ ಉತ್ತೇಜನ ಕಾರ್ಯಕ್ರಮ (Technical event)

ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್‌ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…

4 hours ago

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

17 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

17 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420