ಸಚಿವ ಸಂಪುಟದಲ್ಲಿ ಮೇಜರ್ ಬದಲಾವಣೆ, ಮತ್ತೊಂದು ಬಾಂಬ್ ಸಿಡಿಸಿದ ಯತ್ನಾಳ್

ಬಾಗಲಕೋಟೆ: ಕೊರೋನಾ ಮೂರನೇ ಅಲೆ ಹಾಗೂ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಗಲಾಟೆ ಮಧ್ಯೆ ಸಚಿವ ಸಂಪುಟ ವಿಸ್ತರಣೆ ವಿಚಾರ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಹೌದು…ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಬ್ರೇಕಿಂಗ್ ಸುದ್ದಿ ಕೊಟ್ಟಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪಟ್ಟಣದಲ್ಲಿ ಯತ್ನಾಳ್, ಸಂಕ್ರಾಂತಿ ನಂತರ ಪಕ್ಷದಲ್ಲಿ ಮತ್ತು ಸಕಾ೯ರ ಸಚಿವ ಸಂಪುಟದಲ್ಲಿ ಬದಲಾವಣೆಗಳಾಗಲಿವೆ. ಸಚಿವ ಸಂಪುಟಕ್ಕೆ ಜೀವ ತುಂಬಬೇಕೆನ್ನುವ ಆಸೆ ಕೇಂದ್ರ ಮಂಡಳಿಗಿದೆ. ಸಂಕ್ರಾಂತಿ ನಂತರ ಸಚಿವ ಸಂಪುಟದಲ್ಲಿ ಮೇಜರ್ ಬದಲಾವಣೆ ಮಾಡಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.

ನೂತನ ಸಚಿವ ಸಂಪುಟಕ್ಕೆ ಯತ್ನಾಳ್ ಸೇತಾ೯ರ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನೆಂದು ಸಚಿವ ಸ್ಥಾನ ಕೇಳಿದವನಲ್ಲ. ಕೇಳೋಕೆ ಹೋಗಲ್ಲ. ಮಂತ್ರಿ ಮಾಡ್ರಿ ಅಂತ ಯಾರ ಕೈಕಾಲು ಹಿಡಿಯೋದಿಲ್ಲ‌. ಅದೇನು ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ನನಗೆ ವಾಜಪೇಯಿ ಸಕಾ೯ರದಲ್ಲಿ ಅವರೇ ಕರೆದು ಮಂತ್ರಿ ಮಾಡಿದ್ರು. ನಾನೆಂದು ಲಾಭಿ ಮಾಡಿಲ್ಲ.. ನಾವು ಅನಂತಕುಮಾರ್, ಪ್ರಮೋದ ಮಹಾಜನ್ ಅವಾಗ ಆಗಿದ್ವಿ. ನಮ್ಮ ಸೀನಿಯಾರಿಟಿ ನೋಡಿದ್ರೆ ನಾವು ಈಗಲೂ ಮಂತ್ರಿ ಆಗಬೇಕಾಗಿತ್ತು ಎಂದರು.

ಹಂಗೇ ನೋಡಿದ್ರೆ ಅನಂತಕುಮಾರ್, ಯಡಿಯೂರಪ್ಪ ಬಿಟ್ಟರೆ ಕನಾ೯ಟಕದಲ್ಲಿ ನಾನೇ ಸೀನಿಯರ್. ಕೇಂದ್ರದಲ್ಲಿ ರಾಜ್ಯದಿಂದ 4ನೇ ನಂಬರ್ ಮಂತ್ರಿ ಆದವನು ನಾನೇ ಎಂದು ಹೇಳಿದರು.

ಈ ಹಿಂದೆಯೂ ಹೇಳಿದ್ದ ಯತ್ನಾಳ್: ಸಂಕ್ರಾಂತಿ ಹಬ್ಬದೊಳಗೆ ಸಚಿವ ಸಂಪುಟದಲ್ಲಿ ಭಾರಿ ಬದಲಾವಣೆಯಾಗಲಿದೆ. ವಿಜಯಪುರಕ್ಕೂ ಸಚಿವ ಸ್ಥಾನ ದೊರೆಯಲಿದೆ ಎಂದು ಬಸನಗೌಡ ಪಾಟೀಲ್​ ಯತ್ನಾಳ್​ ಈ ಹಿಂದೆಯೇ ಹೇಳಿದ್ದರು.

ವಿಜಯಪುರ ಜಿಲ್ಲೆಗೆ ಸೂಕ್ತ ಗೌರವಯುತ ಸ್ಥಾನಮಾನ ಸಿಗುತ್ತದೆ ಎಂಬ ವಿಶ್ವಾಸ ಇದೆ. ನಾನು ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಭೇಟಿಯಾಗುವುದಿಲ್ಲ. ಪ್ರಧಾನಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಬಳಿ ಎಲ್ಲರ ಲೆಕ್ಕಪತ್ರ ಇದೆ. ಲಾಬಿ ಮಾಡುವ ಅಗತ್ಯ ಪಕ್ಷಕ್ಕಿಲ್ಲ. ನಮ್ಮ ಪಕ್ಷದ ಶಾಸಕರ ಅರ್ಹತೆ ಬಗ್ಗೆ ನಾಯಕರಿಗೆ ಗೊತ್ತಿದೆ. ಅದರ ಆಧಾರದ ಮೇಲೆ ಸಚಿವ ಸ್ಥಾನ ಲಭಿಸಲಿದೆ ಎಂದಿದ್ದರು.

ಮಂತ್ರಿಯಾಗುವ ಸುಳಿವು ಕೊಟ್ಟಿದ್ದ ಯತ್ನಾಳ್: ಸಂಕ್ರಾಂತಿ ಹಬ್ಬದೊಳಗೆ ಸಚಿವ ಸಂಪುಟದಲ್ಲಿ ಭಾರಿ ಬದಲಾವಣೆಯಾಗಲಿದೆ. ವಿಜಯಪುರಕ್ಕೂ ಸಚಿವ ಸ್ಥಾನ ದೊರೆಯಲಿದೆ ಎಂದು ಪರೋಕ್ಷವಾಗಿ ತಾವು ಮಂತ್ರಿಯಾಗುತ್ತೇನೆಂದು ಸುಳಿವು ಕೊಟ್ಟಿದ್ದರು.

ಸಚಿವ ಸಂಪುಟ ಬದಲಾವಣೆ ವೇಳೆ ಎಲ್ಲ ಜಿಲ್ಲೆಗಳಿಗೂ ಪ್ರಾತಿನಿಧ್ಯ ಸಿಗಲಿದೆ. ಹೆಚ್ಚು ಕ್ರಿಯಾಶೀಲ ಶಾಸಕರನ್ನು ಸಚಿವರನ್ನಾಗಿ ಮಾಡಬೇಕು. ಜ.8, 9ರಂದು ಪಕ್ಷದ ಬೈಠಕ್ ನಡೆಯಲಿದೆ. ಅಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದಿದ್ದರು.

ವಿಜಯಪುರ ಜಿಲ್ಲೆಗೆ ಸೂಕ್ತ ಗೌರವಯುತ ಸ್ಥಾನಮಾನ ಸಿಗುತ್ತದೆ ಎಂಬ ವಿಶ್ವಾಸ ಇದೆ. ನಾನು ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಭೇಟಿಯಾಗುವುದಿಲ್ಲ. ಪ್ರಧಾನಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಬಳಿ ಎಲ್ಲರ ಲೆಕ್ಕಪತ್ರ ಇದೆ. ಲಾಬಿ ಮಾಡುವ ಅಗತ್ಯ ಪಕ್ಷಕ್ಕಿಲ್ಲ. ನಮ್ಮ ಪಕ್ಷದ ಶಾಸಕರ ಅರ್ಹತೆ ಬಗ್ಗೆ ನಾಯಕರಿಗೆ ಗೊತ್ತಿದೆ. ಅದರ ಆಧಾರದ ಮೇಲೆ ಸಚಿವ ಸ್ಥಾನ ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

13 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

13 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

13 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

13 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

13 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420