ಜತ್ತ ಕನ್ನಡಿಗರಿಂದ ಚಂಪಾ, ಬಸಲಿಂಗಯ್ಯಾ ಹಿರೇಮಠರಿಗೆ ನುಡಿ ನಮನ

ಸೊಲ್ಲಾಪುರ :  ಕನ್ನಡದ ಹಿರಿಯ ಹೋರಾಟಗಾರ, ಸಾಹಿತಿ, ನಾಟಕಕಾರರಾದ ದಿ. ಚಂದ್ರಕಾಂತ ಪಾಟೀಲ ಮತ್ತು ಜಾನಪದ ಕಲಾವಿದ ಬಸಲಿಂಗಯ್ಯಾ ಹಿರೇಮಠರಿಗೆ ಜತ್ತ ತಾಲ್ಲೂಕಿನ ಕನ್ನಡಿಗರಿಂದ ನುಡಿ ನಮನಗಳನ್ನು ಸಲ್ಲಿಸಲಾಯಿತು.

ಗಡಿನಾಡು ಕನ್ನಡ ಸಾಹಿತ್ಯ ಪರಿಷತ್ತು ಜತ್ತ ಹಾಗೂ ಕನ್ನಡ ಮಾಧ್ಯಮ ವಿದ್ಯಾಲಯ ಜತ್ತ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾಲಯದ ಆವರಣದಲ್ಲಿ ಏರ್ಪಡಿಸಿದ್ದ ನುಡಿ ನಮನ ಕಾರ್ಯಕ್ರಮ ಅಧ್ಯಕ್ಷತೆ ಹಿರಿಯ ಸಾಹಿತಿ ಜಿ. ಎಸ್. ಕುಂಬಾರರು ವಹಿಸಿದ್ದರು. ವಿದ್ಯಾಲಯದ ಪ್ರಾಂಶುಪಾಲರಾದ ಎಮ್ ಎಸ್ ಸೋಲಾಪುರೆಯವರು ಚಂಪಾರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.

ಕನ್ನಡ ಹೋರಾಟಗಾರ ಸುಭಾಷ ಬೆಳ್ಳುಬ್ಬಿ ಮಾತನಾಡಿ, ಗಡಿನಾಡು ಕನ್ನಡಿಗರು ಚಂಪಾರವರ ಋಣ ತೀರಿಸಲು ಸಾಧ್ಯವಿಲ್ಲ. ಚಂಪಾ ಅವರು “ಕನ್ನಡ ಕನ್ನಡ ಬರ‍್ರಿ ನಮ್ಮ ಸಂಗಡ” ಎಂದು ಕನ್ನಡಿಗರಿಗೆ ಕರೆ ಕೊಟ್ಟಿದ್ದರು. ಅದರಂತೆ ನಾವೆಲ್ಲಾ ಒಟ್ಟಾಗಿ ಗಡಿ ಭಾಗದಲ್ಲಿ ಕನ್ನಡ ಉಳಿಸಿ ಬೆಳಸಬೇಕಿದೆ ಎಂದರು.

ಮುಖ್ಯ ಅತಿಥಿಯಾಗಿ ಆದರ್ಶ ಕನ್ನಡ ಬಳಗದ ಅಧ್ಯಕ್ಷ ಮಲಿಕಜಾನ ಶೇಖ ಮಾತನಾಡಿ, ಚಂಪಾರ ನಿಧನ ಕನ್ನಡ ನಾಡಿಗೆ ಬಹುದೊಡ್ಡ ಹಾನಿ ಮಾಡಿದೆ. ಹೋರಾಟದ ಕೊಂಡಿ ಕಳಚಿದಂತಾಗಿದೆ. ಮಹಾಜನ ವರದಿ ಯಥಾವತ್ತಾಗಿ ಜಾರಿ ಆಗಬೇಕೆಂಬುದು ಚಂಪಾರ ಹೋರಾಟವಾಗಿತ್ತು. ಜತ್ತ ಮತ್ತು ಅಕ್ಕಲಕೋಟ ತಾಲ್ಲೂಕಿನ ಕನ್ನಡರಿಗೂ ನಮ್ಮವರು. ನಮಗಾಗಿದ್ದ ಅವರ ಅಪಾರ ಕಾಳಜಿಯು ನಮ್ಮಲ್ಲಿ ಸದಾ ಉತ್ಸಾಹ ತುಂಬುತ್ತಿತ್ತು. ಅವರನ್ನು ಕಳೆದುಕೊಂಡದ್ದು ಇಂದು ನಮಗೆ  ನಮ್ಮ ಮನೆಯವರನ್ನೆ ಕಳೆದುಕೊಂಡಷ್ಟು ದುಃಖವಾಗುತ್ತಿದೆ. ಅವರು ಯಾವಾಗಲು ಗಡಿ ಕನ್ನಡಿಗರ ಹೃದಯದಲ್ಲಿ ಅಜರಾಮರ ಎಂದರು.

ಅಧ್ಯಕ್ಷ ಸ್ಥಾನ ವಹಿಸಿ ಮಾತನಾಡಿದ ಸಾಹಿತಿ ಜಿ ಎಸ್ ಕುಂಬಾರ, ಚಂಪಾ ಪ್ರತಿಯೊಂದು ಕ್ಷೇತ್ರದಲ್ಲಿ ತಮ್ಮದೆಯಾದ ಕಾಣಿಕೆ ನೀಡಿದ್ದಾರೆ. ಅವರೊಬ್ಬರು ಬಹುಮುಖ ಪ್ರತಿಭೆ. ನಾಡು ಅವರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.

ಶಿಕ್ಷಕ ಆರ್ ಬಿ ಯರಗಲ್ಲ ಮತ್ತು ಇನ್ನಿತರ ಸಾಹಿತಿ ಹೋರಾಟಗಾರರು ಚಂಪಾರಿಗೆ ನುಡಿ ನಮನಗಳನ್ನು ಸಲ್ಲಿಸಿದರು. ಈ ನುಡಿನಮನ ಕಾರ್ಯಕ್ರಮಕ್ಕೆ ಜತ್ತ ತಾಲ್ಲೂಕಿನ ಸಾಹಿತ್ಯಾಸಕ್ತರು, ಹೋರಾಟಗಾರರು, ಪ್ರಾಥಮಿಕ ಶಿಕ್ಷಕರು, ವಿದ್ಯಾಲಯ ಶಿಕ್ಷಕ ಮತ್ತು ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಜೋತೆಗೆ ಬಹುಸಂಖ್ಯೆಯಲ್ಲಿ ಕನ್ನಡ ಪ್ರೇಮಿಗಳು ಉಪಸ್ಥಿತರಿದ್ದರು.

ಕನ್ನಡದ ಹಿರಿಯ ಸಾಹಿತಿ ದಿ. ಚಂದ್ರಕಾಂತ ಪಾಟೀಲ ಮತ್ತು ಜಾನಪದ ಕಲಾವಿದ ಬಸಲಿಂಗಯ್ಯಾ ಹಿರೇಮಠರ  ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮೌನ ಆಚರಣೆಯೊಂದಿಗೆ ಶ್ರದ್ಧಾಂಜಲಿ ವಹಿಸಿಲಾಯಿತು. ಬಿ ಜಿ ಕುಂಬಾರ ನಿರೂಪಿಸಿದರು ಮತ್ತು ಆರ್ ಜಿ ವಾಳವೇಕರರು ವಂದಿಸಿದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

9 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

9 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

9 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

9 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

10 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420