ಸುರಪುರ:ಅಕ್ಷರ ದಾಸೋಹ ನೌಕರರ ಬೇಡಿಕೆಗಳಿಗಾಗಿ ಪ್ರತಿಭಟನೆ

0
9

ಸುರಪುರ: ರಾಜ್ಯದಲ್ಲಿನ ಅಕ್ಷರ ದಾಸೋಹ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ತಾಲೂಕು ಘಟಕದಿಂದ ನಗರದ ತಹಸೀಲ್ ಕಚೇರಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷ ದೇವಿಂದ್ರಪ್ಪ ಪತ್ತಾರ ಮಾತನಾಡಿ, ಮಧ್ಯಾಹ್ನದ ಉಪಹಾರ ಯೋಜನೆ ಅಡಿಯಲ್ಲಿ ಕಳೆದ 19 ವರ್ಷಗಳಿಂದ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಗಳಲ್ಲಿ ಬಿಸಿಯೂಟ ತಯಾರಕರಾಗಿ ನೌಕರರು ಕೆಲಸ ಮಾಡುತ್ತಿದ್ದಾರೆ. ಪ್ರತಿ ದಿನ 6 ಗಂಟೆ ಕೆಲಸ ಮಾಡುತ್ತಿರುವ ನೌಕರರಿಗೆ ಯಾವುದೇ ಉದ್ಯೋಗ ಭದ್ರತೆಯಿಲ್ಲ.ನಿವೃತ್ತಿ ವೇತನ, ವೈದ್ಯಕೀಯ, ಭವಿಷ್ಯ ನಿಧಿ, ಅಪಘಾತ ಪರಿಹಾರವಿಲ್ಲದೆ ಅತ್ಯಂತ ಕನಿಷ್ಠ ಗೌರವಧನಕ್ಕೆ ದುಡಿಯುತ್ತಿದ್ದಾರೆ.

Contact Your\'s Advertisement; 9902492681

ಮುಖ್ಯ ಅಡುಗೆಯವರಿಗೆ ರೂ.2700/ ಹಾಗೂ ಸಹಾಯಕಿಯರಿಗೆ ರೂ.2600 ಮಾಸಿಕ ಸಂಭಾವನೆ ನೀಡಲಾಗುತ್ತಿದೆ. ಗಗನಕ್ಕೆರುತ್ತಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ನಿರ್ವಹಣೆ ದುಸ್ತರವಾಗುತ್ತಿದೆ. ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಹಾಗೂ ಕನಿಷ್ಠ ಕೂಲಿಗಾಗಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ನಡೆಸಿದ ರಾಷ್ಟ್ರೀಯ ಮುಷ್ಕರಕ್ಕೆ ಕೇಂದ್ರ ಸರ್ಕಾರ ಸ್ಪಂದಿಸಿರುವುದಿಲ್ಲ.

ಆದುದರಿಂದ ಬಿಸಿಯೂಟ ತಯಾರಕರಿಗೆ ಕೇಂದ್ರ ಸರ್ಕಾರ 2021-22 ರೈ ಮುಂಗಡ ಪತ್ರದಲ್ಲಿ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನ ಜಾರಿಗೊಳಿಸುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಬೇಕೆಂದು ಸನ್ಮಾನ ಪ್ರಧಾನ ಮಂತ್ರಿಗಳು ನರೇಂದ್ರ ಮೋದಿಯವರಿಗೆ ಎಐಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಸುರಪುರ ತಾಲೂಕು ಸಮಿತಿ ಆಗ್ರಹಿಸುತ್ತಿದೆ ಎಂದರು.

ನಂತರ ಪ್ರಧಾನ ಮಂತ್ರಿಗಳಿಗೆ ಬರೆದ ಮನವಿಯನ್ನು ತಹಸೀಲ್ದಾರರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಬಿಸಿಯೂಟ ತಯಾರಕ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಕಾಂ. ಕಲ್ಪನಾ ಗುರುಸಣಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಂ. ಶ್ರೀ ದೇವಿ ಕೂಡ್ಲಿಗಿ, ಜಿಲ್ಲಾ ಖಜಾಂಚಿ ಬಸ್ಸಮ್ಮ ತಡಿಬಿಡಿ, ಜಿಲ್ಲಾ ಗೌರವಾಧ್ಯಕ್ಷ ದೇವೆಂದ್ರಪ್ಪ ಪತ್ತಾರ, ಯಮುನಾ ಕಕ್ಕೇರಿ,ಲಕ್ಷ್ಮೀ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here