ನಟ ಪುನೀತ್ ಸಮಾಧಿಗೆ ಪಾದಯಾತ್ರೆ ಹೊರಟ ಅಂಗವಿಕಲ ರವಿಕುಮಾರ ಕುಂಬಾರ

ಸುರಪುರ: ದಿವ್ಯಂಗತ ನಟ ಪುನೀತ್ ರಾಜಕುಮಾರ್ ಅವರ ಅಭಿಮಾನಿಯೊಬ್ಬ ಬೆಂಗಳೂರಿನಲ್ಲಿರುವ ಪುನೀತ್ ರಾಜಕುಮಾರ್ ಸಮಾಧಿ ವರೆಗೆ ಪಾದಯಾತ್ರೆ ಮಾಡಿ ಅಪ್ಪು ಸಮಾಧಿ ದರ್ಶನಕ್ಕೆ ಹೊರಟಿದ್ದಾನೆ.

ಶಹಾಪುರ ತಾಲೂಕಿನ ಐಕೂರು ಗ್ರಾiದ ಅಂಗವಿಕಲ ಯುವಕ ರವಿಕುಮಾರ್ ಮಹಾದೇವಪ್ಪ ಕುಂಬಾರ ಎನ್ನುವ ಯುವಕ ನಟ ಪುನೀತ್ ರಾಜಕುಮಾರ್ ಎಂದರೆ ಎಲ್ಲಿಲ್ಲದ ಅಭಿಮಾನ.ಬದುಕಿರುವಾಗ ಅವರನ್ನು ಭೇಟಿ ಮಾಡಬೇಕೆಂದರೆ ಆಗಲಿಲ್ಲ,ಆದರೆ ಈಗ ಅವರಿಲ್ಲದಿದ್ದರೂ ಅವರ ಸಮಾಧಿ ದರ್ಶನವನ್ನು ಪಾದಯಾತ್ರೆ ಮೂಲಕ ಹೋಗಿ ಮಾಡಬೇಕೆಂಬ ಆಸೆಯಿಂದು ಬುಧವಾರ ಬೆಳಿಗ್ಗೆಯೆ ಮನೆಯಿಂದ ಪಾದಯಾತ್ರೆ ಆರಂಭಿಸಿದ್ದಾನೆ.ತಾನೊಬ್ಬ ಅಂಗವಿಕಲನಾಗಿದ್ದರು,ಬೆಂಗಳೂರಿನ ವರೆಗೂ ನಡೆದುಕೊಂಡೇ ಹೋಗಬೇಕೆಂಬ ಮಹದಾಸೆಯಿಂದ ಹೊರಟಿದ್ದು.ಮನೆಯಲ್ಲಿ ತಂದೆಗೂ ಯಾವುದೇ ವಿಷಯ ಹೇಳದೆ ಹೊರಟಿದ್ದಾನೆ.

ಈ ಕುರಿತು ಮಾತನಾಡಿ,ನಾನು ಅಪ್ಪು ಸರನ್ನು ನೊಡಬೇಕೆಂದು ಪ್ರಯತ್ನ ಮಾಡಿದರು ಆಗಲಿಲ್ಲ ಆದರೆ ಈಗ ಅವರಿಲ್ಲ ಎನ್ನುವ ನೋವು ತುಂಬಾ ಇದೆ.ಆದರೂ ಅವರನ್ನು ನೋಡು ಆಸೆಯಿಂದ ಈಗ ಅವರ ಸಮಾಧಿ ದರ್ಶನವನ್ನು ಮಾಡುವ ಮೂಲಕ ಅವರನ್ನು ಕಾಣುವೆ ಎಂದು ಹೋರಟಿರುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಸುರಪುರ ನಗರಕ್ಕೆ ಪ್ರವೇಶಿಸುತ್ತಿದ್ದಂತೆ ನಗರದ ಹಸನಾಪುರ ಪೆಟ್ರೋಲ್ ಬಂಕ್,ತಿಮ್ಮಾಪುರ ಮತ್ತು ಸುರಪುರದಲ್ಲಿ ಜಯಕರ್ನಾಟಕ ಸಂಘಟನೆಯಿಂದ ರವಿಕುಮಾರ್‌ನನ್ನು ಸನ್ಮಾನಿಸಿ ಗೌರವಿಸುವ ಮೂಲಕ ಪ್ರಯಾಣಕ್ಕೆ ಶುಭ ಹಾರೈಸಿ ಬೀಳ್ಕೊಟ್ಟರು.ಈ ಸಂದರ್ಭದಲ್ಲಿ ಜಯಕರ್ನಾಟಕ ತಾಲೂಕು ಅಧ್ಯಕ್ಷ ರವಿಕುಮಾರ ನಾಯಕ ಬೈರಿಮಡ್ಡಿ,ಜಿಲ್ಲಾ ಉಪಾಧ್ಯಕ್ಷ ಶರಣು ಬೈರಿಮಡ್ಡಿ,ತಾ.ಕಾರ್ಯದರ್ಶಿ ಯಲ್ಲಪ್ಪ ಕಬಾಡಗೇರಾ,ಯಲ್ಲಪ್ಪ ಶಿಬಾರಬಂಡಿ ಸೇರಿದಂತೆ ಅನೇಕರಿದ್ದರು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

2 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420