ಶ್ರೀಮತಿ ವಿ.ಜಿ.ಮಹಿಳಾ ಪದವಿ ಮಹಾವಿದ್ಯಾಲಯ ಕಲಬುರಗಿ .ರಾಷ್ಟೀಯ ಸೇವಾ ಯೋಜನಾ ಘಟಕಗಳ ಅಡಿಯಲ್ಲಿ ಸ್ವಾಮಿ ವಿವೇಕಾನಂದ ಅವರ ಜನ್ಮ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ ರಾಷ್ಟ್ರೀಯ ಯುವ ಸಪ್ತಾಹ -2022 ರ ಉದ್ಘಾಟನಾ ಸಮಾರಂಭ ಜರುಗಿತು.
ಪ್ರಾರ್ಥನೆ ಮಾಡುವ ತುಟಿಗಳಿಗಿಂತ ದುಡಿಯುವ ಕೈ ಶ್ರೇಷ್ಠ . ಎನ್ಬುವಂತೆ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಹಾಗೂ ವಿವೇಕಾನಂದರ ಜನ್ಮದಿನವನ್ನು ಯುವದಿನವನ್ನಾಗಿ ಆಚರಿಸುವ ಉದ್ದೇಶ ಅವರು ಯುವಶಕ್ತಿಯಲ್ಲಿಟ್ಟಿದ್ದ ಅಪಾರ ವಿಶ್ವಾಸವೆ ಕಾರಣ ಎಂದು ಪ್ರೊ.ನರೇಂದ್ರ ಬಡಶೇಷಿ ಉದ್ಘಾಟನಾ ಭಾಷಣದಲ್ಲಿ ಹೇಳಿದರು ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಡಾ.ಆರ್.ಬಿ ಕೊಂಡಾ ವಹಿಸಿಕೊಂಡಿದ್ದರು ಡಾ.ಮುಖಿಮೀಯ ಪ್ರಾರ್ಥಿಸಿದರು.
ಡಾ.ಶಾಂತಾ ಮಠ ಸ್ವಾಗತಿಸಿದರು ಡಾ.ಮಹೇಶ ಗಂವ್ಹಾರ ನಿರೂಪಿಸಿದರು ಕುಮಾರಿ ಸುಧಾ ವಂದಿಸಿದರು .ಕಾರ್ಯಕ್ರಮದ ಲ್ಲಿ ಮಹಾವಿದ್ಯಾಲಯದ ಸಿಬ್ಬಂದಿಗಳಾದ ಡಾ.ವಿಜಯಕುಮಾರ ಪರುತೆ,ಡಾ.ನಾಗೇಂದ್ರ ಮಸುತಿ,ಡಾ.ಶಿವರಾಜ ಮುಲಗೆ,ಡಾ.ಪ್ರೇಮಚಂದ ಚವ್ಹಾಣ,ಡಾ.ರಾಜೇಶ,ಪ್ರೊ.ಸಿದ್ದಲಿಂಗ ಪ್ರೊ ಉಮಾ ಮಿಣಜಗಿ ಹಾಗೂಬೋಧಕ, ಬೋಧಕೇತರ ಸಿಬ್ಬಂದಿ ,.ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಇದೆ ಸಂದರ್ಭದಲ್ಲಿ ಸಪ್ತಾಹದ ಅಂಗವಾಗಿ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ನಿಯರಿಗೆ ಉಚಿತ ಚರ್ಮ ಹಾಗೂ ಕೂದಲು ಉದುರುವಿಕೆಯ ಕುರಿತು ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು ಹಾಗೂ ಮಹಾವಿದ್ಯಾಲಯದ ಮಹಿಳಾ ದೌರ್ಜನ್ಯ ತಡೆ ಕೋಶದ ಸಹಯೋಗದೊಂದಿಗೆ ಮಹಿಳಾ ದೌರ್ಜನ್ಯ ಹಾಗು ಅಪರಾಧ ತಡೆ ಯ ಬಗ್ಗೆ ಅರಿವಿನ ಪಯಣದ ಮೂಲಕ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…