ಆಳಂದ: ಸೃಜನಾತ್ಮಕವಾಗಿರುವ ಸಾಹಿತ್ಯವನ್ನು ಪೋಷಿಸಿಕೊಂಡು ಸಾಹಿತಿಗಳ ಆಶಯದಂತೆ ತಾಲೂಕಿನಲ್ಲಿ ಕನ್ನಡ ನಾಡು ನುಡಿಯ ಆದ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸಲಾಗುವುದು ಎಂದು ಆಳಂದ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹಣಮಂತ ಶೇರಿ ಹೇಳಿದರು.
ಬುಧುವಾರ ಪಟ್ಟಣದಲ್ಲಿ ಸಮಾನ ಮನಸ್ಕ ಸಾಹಿತ್ಯ ಆಸಕ್ತ ಶಿಕ್ಷಕರು ಹಮ್ಮಿಕೊಂಡಿದ್ದ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದರು. ತಾಲೂಕಿನಲ್ಲಿ ಕನ್ನಡದ ಕಾರ್ಯಗಳು ನಿರಂತರವಾಗಿರುವಂತೆ ಮಾಡುವುದರ ಜೊತೆಗೆ ಪರಿಷತ್ ವತಿಯಿಂದ ಪ್ರಕಟಣೆ, ಪ್ರೋತ್ಸಾಹ, ವಿಚಾರ ಸಂಕೀರಣ, ಕಾರ್ಯಾಗಾರ ಸೇರಿದಂತೆ ವೈಶಿಷ್ಟ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.
ಹಿರಿಯ ಶಿಕ್ಷಕ ಪಂಚಪ್ಪ ಪಾಟೀಲ ಮಾತನಾಡಿ, ತಾಲೂಕಿನ ಶಿಕ್ಷಕ ಸಮುದಾಯದಲ್ಲಿಯೂ ಹಲವಾರು ಜನ ಪ್ರತಿಭಾವಂತ ಸಾಹಿತಿಗಳಿದ್ದಾರೆ ಅವರನ್ನು ಬಳಸಿಕೊಂಡು ಕನ್ನಡ ಭಾಷೆ ಬೆಳವಣಿಗೆಗೆ ಜೊತೆಯಾಗಿ ಸಾಗೋಣಾ ಎಂದು ಆಶಯ ವ್ಯಕ್ತಪಡಿಸಿದರು.
ಶಿಕ್ಷಕ ಸಾಹಿತಿ ಅಂಬಾರಾಯ ಕಾಂಬಳೆ ಮಾತನಾಡಿದರು. ಸಿಆರ್ಪಿ ನಾಗೇಂದ್ರಪ್ಪ ಗಾಡೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಹಿರಿಯ ಶಿಕ್ಷ ವಿಶ್ವನಾಥ ಘೋಡಕೆ, ಶಿಕ್ಷಕರ ಸಂಘದ ಖಜಾಂಚಿ ಮಹಾದೇವ ಗುಣಕಿ, ರಾಜಕುಮಾರ ಕೋಷ್ಟಿ, ಶಿಕ್ಷಕರಾದ ಪ್ರಫುಲಕುಮಾರ, ವಿನಾಯಕ ಚೋಳಕೆ, ಸುರೇಶ ಹಂಚಿನಾಳ, ಪರಮಾನಂದ ಜಮಾದಾರ, ಶಿಕ್ಷಕರ ಸಂಘದ ಕಾರ್ಯದರ್ಶಿ ವೆಂಕಟೇಶ ಇಳಿಗಾರ, ಮಾರುತಿ, ಶ್ರೀನಾಥ ನಾಗೂರ, ಶಿವುಕುಮಾರ ಮೇಟಿ, ಅನೀಲ ಸೇರಿದಂತೆ ಶಿಕ್ಷಕರು ಇದ್ದರು. ಚಂದ್ರಶೇಖರ ನಿರೂಪಿಸಿ, ವಂದಿಸಿದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…