ಆಳಂದ: ಕರ್ನಾಟಕ ದಲಿತ ಸೇನೆಯ ರಾಜ್ಯ ಘಟಕದ ಅಂಗವಿಕಲ ಒಕ್ಕೂಟದ ಅಧ್ಯಕ್ಷರಾಗಿ ತಾಲೂಕಿನ ಎಲೆನಾವದಗಿ ಗ್ರಾಮದ ಸಿದ್ಧು ನಾವದಗಿ ಅವರು ನೇಮಕಗೊಂಡಿದ್ದಾರೆ.
ಪಟ್ಟಣದ ಬುದ್ಧ, ಬಸವ, ಡಾ| ಅಂಬೇಡ್ಕರ್ ಭವನದಲ್ಲಿ ಗುರುವಾರ ಕರೆದ ಸೇನೆಯ ಕಾರ್ಯಕಾರಿ ಸಮತಿಯ ಸಭೆಯಲ್ಲಿ ರಾಜ್ಯಾಧ್ಯಕ್ಷ ಬಾಬುರಾವ್ ಅರುಣೋದಯ ಪದಾಧಿಕಾರಿಗಳ ನೇಮಕಾತಿ ಪ್ರಕಟಿಸಿದರು.
ಅಲ್ಲದೆ, ಅಂಗವಿಕಲ ಘಟಕದ ಪದಾಧಿಕಾರಿಗಳನ್ನು ಪ್ರಕಟಿಸಿ ಆಯ್ಕೆಯಾದ ಪದಾಧಿಕಾರಿಗಳಿಗೆ ಅಧಿಕಾರ ವಹಿಸಿಕೊಟ್ಟು ಅಂಗವಿಕಲ ಕಲ್ಯಾಣ ಕಾರ್ಯಗಳಿಗೆ ಶ್ರಮಿಸುವಂತೆ ಅವರು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀಶೈಲ ಚಲಗೇರಿ, ಜಮಾಲ್ ಮಕಾಂದಾರ, ಶಿವುಪುತ್ರ ತೆಲಾಕುಣ ಸೇರಿ ಕಾರ್ಯಕಾರಣಿ ಸದಸ್ಯ ಮಲ್ಲಿನಾಥ ನಿಂಬಾಳ, ಶಿವುಕುಮಾರ ಉಳ್ಳೆ, ಕರಬಸಪ್ಪ ಖಜೂರಿ, ಅಂಬಾದಾಸ ಲಿಂಗದಳಿ ಉಪಸ್ಥಿತರಿದ್ದರು.
ಇದೇ ವೇಳೆ ಅಂಗವಿಕಲ ಒಕ್ಕೂಟದ ಪದಾಧಿಕಾರಿಗಳನ್ನು ನೇಮಿಸಲಾಯಿತು. ಸಿದ್ಧು ಎಲೆನಾವದಗಿ (ರಾಜ್ಯ ಅಧ್ಯಕ್ಷ), ಸದಾಶಿವ ಕುಮ್ಮೆ (ತಾಲೂಕು ಅಧ್ಯಕ್ಷ), ಶರಣಯ್ಯ ಹಿರೇಮಠ (ತಾ| ಉಪಾಧ್ಯಕ್ಷ), ಅವರನ್ನು ಆಯ್ಕೆ ಮಾಡಿ ಅಧಿಕಾರ ವಹಿಸಿಕೊಟ್ಟು ಸನ್ಮಾನಿಸಲಾಯಿತು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…