ಸ್ಲಂ ನಿವಾಸಿಗಳಿಗೆ ಪಿಎಂಎವಾಯ್ ಯೋಜನೆಯಲ್ಲಿ ಸಾಲ: ವಸತಿ ಸಚಿವ ವಿ.ಸೋಮಣ್ಣ

ಕಲಬುರಗಿ: ವಸತಿ ಸಚಿವರಾದ ವಿ.ಸೋಮಣ್ಣನವರನ್ನು ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಮಿತಿಯ ನಿಯೋಗ ಭೇಟಿಯಾಗಿ ರಾಜ್ಯದ ಸ್ಲಂ ನಿವಾಸಿಗಳಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಯಲ್ಲಿ ಸಬ್ಸಿಡಿ ೬ ಲಕ್ಷ ಹೆಚ್ಚಳಕ್ಕೆ ಮತ್ತು ಹಕ್ಕುಪತ್ರ ವಿತರಣೆಯನ್ನು ಚುರುಕುಗೊಳಿಸಲು ಆಗ್ರಹಿಸಿ, ವಸತಿ ಹಕ್ಕು ಕಾಯಿದೆ ಜಾರಿಗೊಳಿಸುವಂತೆ ಹಾಗೂ ಇತ್ತೀಚೆಗೆ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ನಡೆದ ಹೋರಾಟದ ಹಕ್ಕೋತ್ತಾಯಗಳನ್ನು ಸಲ್ಲಿಸಿ ಕುಂದುಕೊರತೆ ಸಭೆ ಕರೆಯಲು ಒತ್ತಾಯಿಸಲಾಯಿತು.

ಇದೇ ಸಂದರ್ಭದಲ್ಲಿ ವಸತಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯದ ೧೮೭೩ ಸರ್ಕಾರಿ ಮತ್ತು ಸ್ಥಳೀಯ ಸಂಸ್ಥೆಗಳ ಅಧೀನದಲ್ಲಿರುವ ಕೊಳಚೆ ಪ್ರದೇಶಗಳ ೩.೧೨ ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಶ್ರಮಿಸಿ ಭೂ ಒಡೆತನ ನೀಡಲು ವಸತಿ ಇಲಾಖೆಯಿಂದ ಸುತ್ತೋಲೆ ಹೊರಡಿಸಿರುವುದಕ್ಕಾಗಿ ಅಭಿನಂದಿಸಲಾಯಿತು.

ಮನವಿ ಸ್ವೀಕರಿಸಿ ಮಾತನಾಡಿದ ವಿ.ಸೋಮಣ್ಣನವರು ಹಿಂದಿನ ಸರ್ಕಾರಗಳು ಸ್ಲಂ ಜನರಿಗೆ ಹಕ್ಕುಪತ್ರ ನೀಡದೇ ಮೋಸ ಮಾಡಿದ್ದವು, ನಾನು ವಸತಿ ಸಚಿವನಾದ ಮೇಲೆ ರಾಜ್ಯದಲ್ಲಿರುವ ಲಕ್ಷಾಂತರ ಕುಟುಂಬಗಳಿಗೆ ಗುಡಿಸಲು ಮುಕ್ತ ಮಾಡಲು ಹಾಗೂ ಕೊಳಚೆ ಪ್ರದೇಶಗಳ ವಾಸಿಗಳು ವಾಣಿಜ್ಯ ಬ್ಯಾಂಕುಗಳಿಂದ ಸಾಲ ಪಡೆಯಲು ಹಕ್ಕುಪತ್ರ ಕೊಡುವ ಜೊತೆಗೆ ಸಾಂಕೇತಿಕ ದರದಲ್ಲಿ ನೊಂದಾಯಿಸಿ ಭೂ ಒಡೆತನ ಕೊಡುವ ಮೂಲಕ ಅನುಕೂಲ ಕಲ್ಪಿಸಲಾಗುತ್ತಿದೆ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳ ನಗರ ವಸತಿ ಯೋಜನೆಯಲ್ಲಿ ರಾಜ್ಯದಲ್ಲಿರುವ ನಿವೇಶನ ರಹಿತರಿಗೆ ಭೂಮಿ ಮೀಸಲಿಡುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ಮಾಡುತ್ತಿದ್ದು, ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಈಗಾಗಲೇ ೯೭ ಸಾವಿರ ಮನೆಗಳನ್ನು ನಿರ್ಮಿಸಲು ಅನುಮೋದನೆ ನೀಡಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾಲಿನ ಸಬ್ಸಿಡಿ ಫಲಾನುಭವಿಗಳ ವಂತಿಕೆ ಕ್ರೂಢೀಕರಿಸಿ ಉಳಿದ ಮೊತ್ತವನ್ನು ಬ್ಯಾಂಕುಗಳಲ್ಲಿ ಸಾಲ ಪಡೆಯಲು ಮುಂದಾಗಿದ್ದೇವು, ಆದರೆ ಹಲವಾರು ತೊಡಕುಗಳಿರುವುದರಿಂದ ಮಂಡಳಿಯೇ ಹುಡ್ಕೋದಿಂದ ಸಾಲ ಪಡೆದು ಫಲಾನುಭವಿಗಳಿಂದ ೨೦ ವರ್ಷಗಳಲ್ಲಿ ಸಂಗ್ರಹಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದ್ದು, ಕನಿಷ್ಠ ೫ ಲಕ್ಷ ರೂಗಳ ನೆರವನ್ನು ಸರ್ಕಾರದಿಂದ ನೀಡುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯ ರಾಜ್ಯ ಸಂಚಾಲಕರಾದ ಎ.ನರಸಿಂಹಮೂರ್ತಿ ಮಾತನಾಡಿ, ಸ್ಲಂ ನಿವಾಸಿಗಳಿಗೆ ಪಿಎಂಎವಾಯ್ ಸರ್ವರಿಗೂ ಸೂರು ಯೋಜನೆಯಲ್ಲಿ ಸಂಪನ್ಮೂಲ ಮತ್ತು ದಾಖಲಾತಿಗಳ ಕ್ರೂಢೀಕರಣಕ್ಕೆ ಸಿಂಗಲ್ ವಿಂಡೋ ಯೋಜನೆ ಜಾರಿಗೊಳಿಸಿ ಸಬ್ಸಿಡಿಯನ್ನು ೬ ಲಕ್ಷಕ್ಕೆ ಏರಿಕೆ ಮಾಡಬೇಕು. ಹಕ್ಕುಪತ್ರ ನೀಡುವ ಸಂಬಂಧ ಜಿಲ್ಲಾ ಮಟ್ಟಗಳಲ್ಲಿ ಸಮಿತಿ ರಚಿಸಿ ೬ ತಿಂಗಳ ಒಳಗಾಗಿ ವಿತರಿಸಬೇಕು.

ಸಮ್ರಗ ವಸತಿ ಹಕ್ಕು ಕಾಯಿದೆ ಜಾರಿಗೊಳಿಸುವ ಮೂಲಕ ಸ್ಲಂ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಭೂಮಿ ಮೀಸಲಿಡುವ ಲ್ಯಾಂಡ್‌ಬ್ಯಾಂಕ್ ಘೋಷಿಸಬೇಕು. ೨೦೧೬ರ ಸ್ಲಂ ನೀತಿ ಅನ್ವಯ ಜಿಲ್ಲಾ ಮಟ್ಟದ ಸಮಿತಿಗಳ ರಚನೆಗೆ ವಸತಿ ಇಲಾಖೆಯಿಂದ ಸುತ್ತೋಲೆ ಹೊರಡಿಸಬೇಕೆಂದರು. ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿದ ಸಚಿವರು, ಸಂಘಟನೆಯೊಂದಿಗೆ ಸಭೆ ಕರೆಯುವುದಾಗಿ ಹೇಳಿದರು.

ವಿಭಾಗೀಯ ಸಂಚಾಲಕರಾದ ಚಂದ್ರಮ್ಮ, ಜನಾರ್ಧನ್ ಹಳ್ಳಿಬೆಂಚಿ, ಇಮ್ತಿಯಾಜ್ ಆರ್ ಮಾನ್ವಿ, ರೇಣುಕಾ ಸರಡಗಿ, ಮಂಜಣ್ಣ ಕೆ, ರೇಣುಕಾ ಯಲ್ಲಮ್ಮ, ಶೇಖರ್ ಬಾಬು, ಅಲ್ಲಮಪ್ರಭು ನಿಂಬರ್ಗಾ ಕೆಂಪರಾಜ ವಿ. ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

4 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

7 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

7 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

7 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420