ಬಿಸಿ ಬಿಸಿ ಸುದ್ದಿ

ಚುನಾವಣಾ ಕಾರ್ಯದಲ್ಲಿ ನಿರತ ಸಿಬ್ಬಂದಿಗಳಿಗೆ ಅಂಚೆ ಮತ ಹಾಕಲು ಸೂಚನೆ

ಕಲಬುರಗಿ: ಲೋಕಸಭೆ ಸಾರ್ವತ್ರಿಕ ಚುನಾವಣಾ ಕರ್ತವ್ಯದ ಮೇಲಿರುವ ಪೊಲೀಸ್, ಕೆ.ಎಸ್.ಆರ್.ಪಿ., ಗೃಹರಕ್ಷಕ ದಳ, ಎನ್.ಇ.ಕೆ.ಆರ್.ಟಿ.ಸಿ. ಸಿಬ್ಬಂದಿಗಳು ಹಾಗೂ ಆಳಂದ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳಿಗೆ ನಿಯೋಜಿಸಲಾದ ಸಿಬ್ಬಂದಿಗಳು ಇದೇ ಏಪ್ರಿಲ್ ೧೫ ರಿಂದ ೧೭ರ ವರೆಗೆ ನಿಗದಿಪಡಿಸಿದ ಅಂಚೆ ಮತಪತ್ರ ಸೌಲಭ್ಯ ಕೇಂದ್ರದಲ್ಲಿ ತಮ್ಮ ಅಂಚೆ ಮತವನ್ನು ಚಲಾಯಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಆರ್.ವೆಂಕಟೇಶ ಕುಮಾರ ಸೂಚನೆ ನೀಡಿದ್ದಾರೆ.


ಚುನಾವಣಾ ಕರ್ತವ್ಯದಲ್ಲಿರುವ ಸಿಬ್ಬಂದಿಗಳು ತಮ್ಮ ಚುನಾವಣಾ ಗುರುತಿನ ಚೀಟಿ, ಚುನಾವಣಾ ಕರ್ತವ್ಯ ನೇಮಕಾತಿ ಆದೇಶದೊಂದಿಗೆ ಏಪ್ರಿಲ್ ೧೫ ರಿಂದ ೧೭ರ ವರೆಗೆ ಬೆಳಿಗ್ಗೆ ೯ ರಿಂದ ಸಾಯಂಕಾಲ ೫ ಗಂಟೆ ವರೆಗೆ ಅಂಚೆ ಮತಪತ್ರ ಸೌಲಭ್ಯ ಕೇಂದ್ರದಲ್ಲಿ ಮತ ಚಲಾಯಿಸಬೇಕು. ಇನ್ನು ಇದೂವರೆಗೆ ಚುನಾವಣಾ ಕರ್ತವ್ಯ ಪ್ರಮಾಣ ಪತ್ರ (ಇಆಅ) ಪಡೆಯದವರು ಸದರಿ ಕೇಂದ್ರದಿಂದ ಕಡ್ಡಾಯವಾಗಿ ಇ.ಡಿ.ಸಿ ಪಡೆದು ಮತ ಚಲಾಯಿಸಲು ತಿಳಿಸಲಾಗಿದೆ.
ವಿಧಾನಸಭಾ ಕ್ಷೇತ್ರವಾರು ಸ್ಥಾಪಿಸಲಾಗಿರುವ ಅಂಚೆ ಮತಪತ್ರ ಸೌಲಭ್ಯ ಕೇಂದ್ರಗಳ ವಿವರ. ೩೪-ಅಫಜಲಪೂರ: ತಹಶೀಲ್ದಾರ ಕಚೇರಿ, ಅಫಜಲಪೂರ. ೩೫-ಜೇವರ್ಗಿ: ತಹಶೀಲ್ದಾರ ಕಚೇರಿ, ಜೇವರ್ಗಿ. ೪೦-ಚಿತ್ತಾಪುರ: ತಹಶೀಲ್ದಾರ ಕಚೇರಿ, ಚಿತ್ತಾಪುರ. ೪೧-ಸೇಡಂ: ಸಹಾಯಕ ಆಯುಕ್ತರ ಕಚೇರಿ, ಸ್ಟೇಷನ್ ರಸ್ತೆ ಸೇಡಂ. ೪೩-ಕಲಬುರಗಿ ಗ್ರಾಮೀಣ: ತಹಶೀಲ್ದಾರ ಕಚೇರಿ, ಕಲಬುರಗಿ. ೪೪-ಕಲಬುರಗಿ ದಕ್ಷಿಣ: ಮಹಾನಗರ ಪಾಲಿಕೆ ಕಟ್ಟಡ(ಹಳೆದು) ಕಲಬುರಗಿ. ೪೫-ಕಲಬುರಗಿ ಉತ್ತರ: ಮಹಾನಗರ ಪಾಲಿಕೆ ಕಟ್ಟಡ(ಹೊಸದು), ಜಗತ್ ವೃತ್ತ ಕಲಬುರಗಿ ಮತ್ತು ೩೯-ಗುರಮಿಟಕಲ್: ತಹಶೀಲ್ದಾರ ಕಚೇರಿ, ಯಾದಗಿರಿ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

9 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

11 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

11 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

11 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

11 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420