ಕಲಬುರಗಿ: ವಿಮಾನ ನಿಲ್ದಾಣದಲ್ಲಿ ಸಿಗುವ ಸವಲತ್ತುಗಳು ಕಲಬುರಗಿ ರೈಲ್ವೇ ನಿಲ್ದಾಣದಲ್ಲಿ ಸಿಗುವಂತೆ ಮಾಡುವುದು ನಮ್ಮ ಉದ್ದೇಶ ಇದಕ್ಕೆ ಬೇಕಾಗುವ ಎಲ್ಲಾ ಸವಲತ್ತುಗಳು ಕೇಂದ್ರದಿಂದ ಮತ್ತು ರಾಜ್ಯದಿಂದ ತರಿಸುವ ಕಾರ್ಯ ಮಾಡಲಾಗುವುದು ಎಂದು ಲೋಕಸಭಾ ಸದಸ್ಯರಾದ ಡಾ. ಉಮೇಶ ಜಾಧವ ಅವರು ಹೇಳಿದರು.
ಅವರು ಬುಧುವಾರ ಕಲಬುರಗಿ ರೈಲ್ವೆ ನಿಲ್ದಾಣದ ೨ ಮತ್ತು ೪ ನೇ ಪ್ಲಾಟ್ ಫಾರಂನಲ್ಲಿ ಹೊಸದಾಗಿ ನಿರ್ಮಿಸಿರುವ ಲಿಫ್ಟಗಳನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ಕಲಬುರಗಿ ಜಿಲ್ಲೆಯ ವೃದ್ದರು, ಚಿಕಿತ್ಸೆಗಾಗಿ ತೆರಳಲು ರೋಗಿಗಳು ಹಾಗೂ ಜನರು, ಪ್ರತಿದಿನ ರೈಲ್ವೆ ನಿಲ್ದಾಣಕ್ಕೆ ಆಗಮಿಸಿಸುತ್ತಾರೆ ಇವರ ಸೇವೆಗಾಗಿ ಈ ಲಿಫ್ಟಗಳನ್ನು ನಿರ್ಮಿಸಲಾಗಿದೆ ಎಂದರು.
ಸರ್ಕಾರದ ಕೋರನಾ ನಿಯಮಗಳನ್ನು ಪಾಲಿಸಿ ಲಿಫ್ಟಗಳಲ್ಲಿ ಜನರಿಗೆ ಬಿಡಲು ತಿಳಿಸಿದರು ವೃದ್ದರಿಗೆ ಹಾಗೂ ರೋಗಿಗಳಿಗೆ ಮೊದಲ ಆದ್ಯತೆ ನೀಡಬೇಕಾಗಿ ಸಿಬ್ಬಂದಿಗಳಿಗೆ ಸೂಚಿಸಬೇಕಾಗಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಿರ್ಮಿಸಿರುವ ಲಿಫ್ಟಗಳನ್ನು ಪ್ರತಿ ಆರುತಿಂಗಳಿಗೊಮ್ಮೆ ಇದರ ನಿರ್ವಹಣೆ ಮಾಡಬೇಕು ಲಿಫ್ಟಗಳನ್ನು ಯಾವ ಸಂಧರ್ಭದಲ್ಲೂ ನಿಲ್ಲಾದಿರ ಹಾಗೆ ನೋಡಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೆವೋರ, ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕರಾದ ಬಸವರಾಜ ಮತ್ತಿಮಡು, ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶೀಲೇಶ್ ಗುಪ್ತಾ, ಹಾಗೂ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…