ವಿಷಹಾರ ಸೇವಿಸಿ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥವು

0
7

ದಾವಣಗೆರೆ: ವಿಷ ಆಹಾರ ಸೇವಿಸಿ ಐವತ್ತಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮದಲ್ಲಿರುವ ಇಂದಿರಾಗಾಂಧಿ ಪರಿಶಿಷ್ಟ ಜಾತಿಯ ವಸತಿ ಶಾಲೆಯಲ್ಲಿ ನಡೆದಿದೆ.

ಶಾಲೆಯಲ್ಲಿ ರಾತ್ರಿ ವೇಳೆ ಊಟ ಮಾಡಿದ ಮಕ್ಕಳಿಗೆ ಫುಡ್ ಪಾಯಿಜನ್ ಆಗಿದ್ದು, ಐವತ್ತಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ವೈದ್ಯರು ಮಾಹಿತಿ‌ ನೀಡಿದ್ದಾರೆ. ಅಸ್ವಸ್ಥರಾದ ಮಕ್ಕಳನ್ನು ತಕ್ಷಣ ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Contact Your\'s Advertisement; 9902492681

ಇಂದಿರಾಗಾಂಧಿ ವಸತಿ ಶಾಲೆಗೆ ಭೇಟಿ ನೀಡಿದ ಎಂ.ಪಿ ರೇಣುಕಾಚಾರ್ಯ ವಿಚಾರ ತಿಳಿಯುತ್ತಿದ್ದಂತೆ ಬೆಂಗಳೂರಿನಿಂದ ನೇರವಾಗಿ ಇಂದಿರಾ ಗಾಂಧಿ ವಸತಿ ಶಾಲೆಗೆ ಭೇಟಿ‌ ನೀಡಿದ ಶಾಸಕ ಎಂ.ಪಿ ರೇಣುಕಾಚಾರ್ಯರವರು ಮಕ್ಕಳ ಆರೋಗ್ಯ ವಿಚಾರಿಸಿ ಮಕ್ಕಳಿಗೆ ಹಾಗೂ ಪೋಷಕರಿಗೆ ಧೈರ್ಯ ಹೇಳಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here