ಹಸುಗಳಿಗೆ ವಿಶೇಷ ಅಲಂಕಾರ ಮೆರವಣಿಗೆ

0
7

ತೊರ‍್ನಹಳ್ಳಿ: ಸಂಕ್ರಾಂತಿ ಹಬ್ಬ ದೇಶ ವಿದೇಶಗಳಲ್ಲಿ ಬೇರೆ ಬೇರೆ ಹೆಸರುಗಳಲ್ಲಿ ಆಚರಿಸುವ ಒಂದು ಸುಗ್ಗಿ ಹಬ್ಬ. ಸೂರ್ಯನು ಮಕರ ಸಂಕ್ರಾಂತಿಯಂದು ಮಕರ ರಾಶಿಯನ್ನು ಪ್ರವೇಶ ಮಾಡುತ್ತಾನೆ. ಆದ್ದರಿಂದಲೇ ಉತ್ತರ ಭಾರತದಲ್ಲಿ ಈ ಹಬ್ಬಕ್ಕೆ ಮಕರ ಸಂಕ್ರಾಂತಿಯೆಂದು ಹೆಸರು.

ಇಂದು ಮಕರ ಸಂಕ್ರಾಂತಿಯ ಪ್ರಯುಕ್ತ ಮಾಲೂರು ತಾಲ್ಲೂಕಿನ ಮಡಿವಾಳ ಗ್ರಾಮ ಪಂಚಾಯಿತಿಯ ಚೊಕ್ಕಂಡಹಳ್ಳಿ ಗ್ರಾಮದಲ್ಲಿ ಹಸು, ದನ, ಕರುಗಳನ್ನು ವಿಶೇಷವಾಗಿ ಅಲಂಕರಿಸಿ ಪೂಜೆ ಮಾಡಲಾಯಿತು. ಅಲ್ಲದೆ ಹಸುಗಳನ್ನು ಊರಿನಲ್ಲಿ ಮೆರವಣಿಗೆ ಮಾಡಲಾಯಿತು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಮಾರಿ ಜಯರಾಮೇಗೌಡ, ಸದಸ್ಯರಾದ, ಸಿ.ಎಲ್.ಧನಸಿಂಗ್, ಸಿ.ಎಂ.ವೆಂಕಟೇಶ್ ಹಾಗೂ ಗ್ರಾಮಸ್ಥರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here