ಬಿಸಿ ಬಿಸಿ ಸುದ್ದಿ

ಕಾಂಗ್ರೆಸ್ ಪಕ್ಷದ ಹುಚ್ಚಾಟ ಮುಗಿಯಿತು, ಇನ್ನೂ ಬಿಜೆಪಿಯವರ ಸರದಿ

ಬೆಳಗಾವಿ: ಶಾಸಕರು ಮಾಸ್ಕ್ ಧರಿಸದೆ, ವೀರಾವೇಶದಿಂದ ಮರಾಠಿ ಭಾಷೆಯಲ್ಲಿ ಭಾಷಣ ಬಿಗಿಯುತ್ತಿದ್ದಾರೆ. ಅವರ ಭಾಷಣ ಕೇಳುತ್ತಿದ್ದರೆ, ಇದು ಕರ್ನಾಟಕವಾ ಅಥವಾ ಮಹಾರಾಷ್ಟವಾ ಎಂಬ ಗೊಂದಲ ಮೂಡುತ್ತದೆ. ಸರಿ ಇನ್ನು ವೇದಿಕೆ ಮೇಲೆ ಕುಳಿತಿರುವ ಜನರನ್ನು ನೋಡಿ, ಅವರಲ್ಲಿ ಒಂದಿಬ್ಬರು ಮಾತ್ರ ಮಾಸ್ಕ್ ಧರಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನ ಆಗ್ರಹಿಸಿ ನಡೆಸಿದ ಪಾದಯಾತ್ರೆಯನ್ನು ಕೇವಲ ಕರ್ನಾಟಕ ಮಾತ್ರವಲ್ಲ ಇಡೀ ದೇಶದಲ್ಲೇ ಖಂಡಿಸಲಾಯಿತು. ಕೋವಿಡ್ ಪ್ರಕರಣಗಳು ಮಿತಿಮೀರಿ ಹೆಚ್ಚುತ್ತಿದ್ದರೂ ಕೋರ್ಟ್ ಛೀಮಾರಿ ಹಾಕುವವರೆಗೆ 4-ದಿನಗಳ ಕಾಲ ನಡೆದ ಪಾದಯಾತ್ರೆಯಲ್ಲಿ ಸಾವಿರಾರು ಜನ ಭಾಗವಹಿಸಿದ್ದರು. ಕೋರ್ಟ್ ಆದೇಶಕ್ಕನುಗುಣವಾಗಿ ಕಾಂಗ್ರೆಸ್ ಪಾದಯಾತ್ರೆ ನಿಲ್ಲಿಸಿದ್ದು ಎಲ್ಲ ರಾಜಕೀಯ ಒಂದು ಮಾದರಿಯಾಗುತ್ತದೆ ಅಂತಲೇ ಎಲ್ಲರೂ ಭಾವಿಸಿದ್ದರು. ಆದರೆ, ನಮ್ಮ ರಾಜಕಾರಣಿಗಳು ದಪ್ಪ ಚರ್ಮದವರು ಮಾರಾಯ್ರೇ, ಅವರಿಗೆ ಬುದ್ಧಿಮಾತು ಬೇಗ ಅರ್ಥವಾಗುವುದಿಲ್ಲ, ತಲೆಗೆ ಹೋಗುವುದಿಲ್ಲ. ಇದನ್ನು ಯಾಕೆ ಹೇಳಬೇಕಾಗಿದೆಯೆಂದರೆ, ಶುಕ್ರವಾರದಂದು ಬಿಜೆಪಿಯ ಶಾಸಕ ಅನಿಲ ಬೆನಕೆ ಅವರು ಬೆಳಗಾವಿಯ ಚವ್ಹಾಟ್ನಲ್ಲಿ ಎಮ್ಮೆ ಓಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವಿಡಿಯೋ ನೋಡಿ. ಶಾಸಕರು ಮಾಸ್ಕ್ ಧರಿಸದೆ, ವೀರಾವೇಶದಿಂದ ಮರಾಠಿ ಭಾಷೆಯಲ್ಲಿ ಭಾಷಣ ಬಿಗಿಯುತ್ತಿದ್ದಾರೆ. ಅವರ ಭಾಷಣ ಕೇಳುತ್ತಿದ್ದರೆ, ಇದು ಕರ್ನಾಟಕವಾ ಅಥವಾ ಮಹಾರಾಷ್ಟವಾ ಎಂಬ ಗೊಂದಲ ಮೂಡುತ್ತದೆ. ಸರಿ ಇನ್ನು ವೇದಿಕೆ ಮೇಲೆ ಕುಳಿತಿರುವ ಜನರನ್ನು ನೋಡಿ, ಅವರಲ್ಲಿ ಒಂದಿಬ್ಬರು ಮಾತ್ರ ಮಾಸ್ಕ್ ಧರಿಸಿದ್ದಾರೆ.

ಅದಾದ ಮೇಲೆ ಸ್ಫರ್ಧೆ ನಡೆಯುತ್ತಿರುವ ಸ್ಥಳವನ್ನೊಮ್ಮೆ ನೋಡಿ. ಜನ ಜಾತ್ರೆಯಂತೆ ನೆರೆದಿದ್ದಾರೆ. ಕೆಲವೇ ಕೆಲವು ಜನರ ಮುಖದ ಮೇಲೆ ಮಾಸ್ಕ್ ಕಾಣಿಸುತ್ತಿದೆ. ದೈಹಿಕ ಅಂತರ ಕಾಯ್ದುಕೊಳ್ಳುವ ನಿಯಮ ಇಲ್ಲಿ ಯಾರಿಗೂ ಗೊತ್ತಿಲ್ಲ. ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಜನರಿಗೆ ಸೋಂಕಿನ ಬಗ್ಗೆ ಕಿಂಚಿತ್ತೂ ಭಯವಿದ್ದಂತಿಲ್ಲ.

ಬೇಜವಬ್ದಾರಿತನದ ಪರಮಾವಧಿ ಇದು. ಅವರು ಆರಿಸಿ ಕಳಿಸಿದ ಪ್ರತಿನಿಧಿಗೆ ಅದರ ಪರಿವೆ ಇಲ್ಲ ಅಂತಾದರೆ ಜನರಲ್ಲಿ ಅದು ಹೇಗೆ ಹುಟ್ಟೀತು, ಬಹಳ ಸರಳ ವಿಷಯವಿದು.

emedialine

Recent Posts

ಡಾ.ಶರಣಬಸಪ್ಪ ಕ್ಯಾತನಾಳಗೆ ಮುಖ್ಯಮಂತ್ರಿಗಳಿಂದ ಶ್ರೇಷ್ಠ ವೈದ್ಯ ಶ್ರೀ ಪ್ರಶಸ್ತಿ ಪ್ರದಾನ

ಕಲಬುರಗಿ: ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜುಲೈ…

10 mins ago

ಮುಸ್ಲಿಮರಿಗೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸ್ಥಾನ ನೀಡಿ: ಅಬ್ದುಲ್ ರಹೀಮಾನ್ ಪಟೇಲ್

ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…

43 mins ago

ಡಾ. ಫ.ಗು. ಹಳಕಟ್ಟಿ ಯವರ ಜಯಂತಿ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…

2 hours ago

ಮೊಬೈಲ್ ರೀಚಾರ್ಜ್‍ಗಳ ಬೆಲೆ ಹೆಚ್ಚಳ ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಪ್ರತಿಭಟನೆ

ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್‍ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್‍ಓ ವತಿಯಿಂದ…

2 hours ago

ಸಾರ್ವಜನಿಕರು ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಿಸಿ

ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…

2 hours ago

ಪಠ್ಯಕ್ರಮ ರಚನೆ ಗುಣಾತ್ಮಕ ಅಂಶಗಳಿಂದ ಕೂಡಿರಲಿ

ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…

4 hours ago