ಬೀದರ್ ಜಿಲ್ಲೆಯಲ್ಲಿ ಅರಣ್ಯ ಪ್ರದೇಶ ಹೆಚ್ಚಳ, ಕಲಬುರಗಿಯಲ್ಲಿ ಅಲ್ಪಪ್ರಮಾಣದ ಕುಸಿತ

ಕಲಬುರಗಿ: ದೇಶದ ವಿವಿಧ ರಾಜ್ಯಗಳು ಹಾಗೂ ಜಿಲ್ಲೆಗಳಲ್ಲಿ ಎರಡು ವರ್ಷಗಳಲ್ಲಿ ಅರಣ್ಯ ಪ್ರಮಾಣದ ಸ್ಥಿತಿಗತಿ ಬಗ್ಗೆ ವರದಿ ಬಿಡುಗಡೆಯಾಗಿದ್ದು, ಬೀದರ್‌ ಜಿಲ್ಲೆಯಲ್ಲಿ ಅರಣ್ಯ ಪ್ರದೇಶ ಹೆಚ್ಚಾಗಿದ್ದರೆ, ಕಲಬುರಗಿ ಜಿಲ್ಲೆಯಲ್ಲಿ ಅಲ್ಪ ಪ್ರಮಾಣದ ಕುಸಿತ ಕಂಡು ಬಂದಿದೆ.

ಜಿಲ್ಲೆಯ ಆರ್ಥಶಾಸ್ತ್ರಜ್ಞೆ ಸಂಗೀತಾ ಕಟ್ಟಿಮನಿ ಅವರು ಈ ಅಂಕಿ ಅಂಶಗಳನ್ನು ಹಂಚಿಕೊಂಡಿದ್ದು, 2019ರಿಂದ ಈಚೆಗೆ ದಟ್ಟ ಅರಣ್ಯ ಪ್ರದೇಶದಲ್ಲಿ ಹೆಚ್ಚಳವಾಗಿಲ್ಲ ಎಂದು ಹೇಳಿದ್ದಾರೆ. 2019ರಲ್ಲಿ ಕಲ್ಯಾಣ ಕರ್ನಾಟಕದಲ್ಲಿ (ಅಖಂಡ ಬಳ್ಳಾರಿ ಜಿಲ್ಲೆ ಹೊರತುಪಡಿಸಿ) 131.96 ಚದರ ಕಿ.ಮೀ. ಇದ್ದ ದಟ್ಟಾರಣ್ಯ ಪ್ರಮಾಣ 2021ಕ್ಕೆ 131.37 ಚದರ ಮೀಟರ್‌ಗೆ ಕುಸಿತ ಕಂಡಿದೆ. ಬಯಲು ಅರಣ್ಯ ಪ್ರಮಾಣವು 2019ರಲ್ಲಿ 508.66 ಚ.ಕಿ.ಮೀ. ಇದ್ದುದು 2021ಕ್ಕೆ 469.57 ಚ.ಕಿ.ಮೀ.ಗೆ ಇಳಿಕೆಯಾಗಿದೆ.

ಕರ್ನಾಟಕದ ಭೂಶಿರ ಬೀದರ್ ಜಿಲ್ಲೆಯ ಅರಣ್ಯ ಪ್ರಮಾಣ ಕಳೆದ ಎರಡು ವರ್ಷಗಳಲ್ಲಿ 88.42 ಕಿ.ಮೀ.ನಿಂದ 97.58 ಕಿ.ಮೀ.ಗೆ ಹೆಚ್ಚಳವಾಗಿದೆ. ಕೊಪ್ಪಳ ಜಿಲ್ಲೆಯ ಅರಣ್ಯವೂ ಏರುಗತಿಯಲ್ಲಿದ್ದು, 194.89 ಚ.ಕಿ.ಮೀ. ಇದ್ದುದು 195.05 ಚ.ಕಿ.ಮೀ.ಗೆ ಹೆಚ್ಚಳವಾಗಿದೆ.

ಕಲಬುರಗಿ ಜಿಲ್ಲೆಯು 195.05 ಚದರ ಕಿ.ಮೀ.ನಿಂದ 194.89 ಚ.ಕಿ.ಮೀ.ಗೆ ಅಲ್ಪ ಕುಸಿತ ಕಂಡು ಬಂದಿದೆ. ಪಕ್ಕದ ಯಾದಗಿರಿ ಜಿಲ್ಲೆಯಲ್ಲಿ 147.64 ಚದರ ಕಿ.ಮೀ.ನಿಂದ 146.91 ಚದರ ಕಿ.ಮೀ.ಗೆ ಕುಸಿದಿದೆ. ರಾಯಚೂರು ಜಿಲ್ಲೆಯಲ್ಲಿ ಹೆಚ್ಚಳವೂ ಆಗಿಲ್ಲ, ಕುಸಿತವೂ ಆಗಿಲ್ಲ. 44.23 ಚ.ಕಿ.ಮೀ.ನಷ್ಟೇ ಅರಣ್ಯ ಪ್ರದೇಶವಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

2019ರಲ್ಲಿ ಕಲ್ಯಾಣ ಕರ್ನಾಟಕದ 1.42ರಷ್ಟು ಭೌಗೋಳಿಕ ಪ್ರದೇಶದಲ್ಲಿ ಅರಣ್ಯವಿತ್ತು. ಆ ಪ್ರಮಾಣ ಶೇ 1.31ಕ್ಕೆ ಕುಸಿದಿದೆ. ವಿಜಯಪುರ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳು ಒಟ್ಟು ಭೂಪ್ರದೇಶದ ಶೇ 1ಕ್ಕಿಂತಲೂ ಕಡಿಮೆ ಅರಣ್ಯ ಪ್ರದೇಶವನ್ನು ಹೊಂದಿವೆ.

1988ರಲ್ಲಿ ರೂಪಿಸಲಾದ ರಾಷ್ಟ್ರೀಯ ಅರಣ್ಯ ಕಾಯ್ದೆಯ ಅನುಸಾರ ಒಟ್ಟಾರೆ ಭೂಭಾಗದಲ್ಲಿ ಶೇ 33ರಷ್ಟು ಅರಣ್ಯ ಪ್ರದೇಶವನ್ನು ಹೊಂದಿರಬೇಕು. ಆದರೆ, ಕೇವಲ ಶೇ 1.31ರಷ್ಟು ಸರಾಸರಿ ಅರಣ್ಯವಿದೆ.

emedialine

Recent Posts

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

4 mins ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

7 mins ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

12 mins ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ್ಲ –ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

17 mins ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

22 mins ago

ನಾನು ಆಕಾಂಕ್ಷಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸವಿದೆ; ಕೋರವಿ

ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420