ಜೇವರ್ಗಿ: ಕೊರೊನೊ ನಿಯಮ ಉಲ್ಲಘಿಸಿ ಹಾಗೂ ಕಚೇರಿಯ ಸಮಯದಲ್ಲಿಯೇ ತಹಶೀಲ್ದಾರ ವಿನಯಕುಮಾರ ಪಾಟೀಲ ಸೋಮವಾರ ವಿಜ್ರಂಭಣಿಯಿಂದ ಮಾಸ್ಕ್ ಧರಿಸದೆ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುವುದರ ಮೂಲಕ ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದಾರೆ.
ಕೊರೊನೊ ನಿಯಮಗಳನ್ನು ಉಲ್ಲಂಘಿಸಿ ಒಬ್ಬ ತಾಲ್ಲೂಕ ದಂಡಾಧಿಕಾರಿ ಹೀಗೆ ಕಚೇರಿಯಲ್ಲಿಯೇ ಹುಟ್ಟುಹಬ್ಬ ಆಚರಿಸಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಅಲ್ಲದೆ ಆಹಾರ ನಿರೀಕ್ಷಕ ಡಿ.ಬಿ ಪಾಟೀಲ್ ಸೇರಿ ಹಲವರು ಮಾಸ್ಕ್ ಧರಿಸಿರಲಿಲ್ಲ. ಜನರು ತಮ್ಮ ಅಹವಾಲುಗಳನ್ನು ಸಲ್ಲಿಸಲು ದೂರದ ಊರುಗಳಿಂದ ಬಂದಿದ್ದರು. ಆದರೆ ಅಧಿಕಾರಿ ಮಾತ್ರ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುವುದರಲ್ಲಿ ಬ್ಯೂಸಿಯಾಗಿದ್ದರು.
ಅಹವಾಲು ಸಲ್ಲಿಸಲು ಬಂದಿದ್ದ ಸಾರ್ವಜನಿಕರು ಹಿಡಿಶಾಪ ಹಾಕುತ್ತ ಗಂಟೆಗಟ್ಟಲೆ ನಿಲ್ಲಬೇಕಾದ ಪರಿಸ್ಥಿತಿ ಉಂಟಾಯಿತು. ಅಧಿಕಾರಿಗಳು ಕಚೇರಿಯಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಬಾರದೆಂಬ ನಿಯಮವಿದ್ದರೂ ಸಹ ಪಾಲನೆಯಾಗುತ್ತಿಲ್ಲ. ಈ ಹಿಂದೆ ಬಿಸಿಎಂ ಇಲಾಖೆಯ ಜಿಲ್ಲಾ ಅಧಿಕಾರಿ ರಮೇಶ ಸಂಗಾ ಅವರು ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದ ಆರೋಪದ ಮೇಲೆ ವಿಚಾರಣೆ ಮಾಡಲಾಗಿತ್ತು.
ಆದರೂ ಅಧಿಕಾರಿಗಳ ಹುಟ್ಟುಹಬ್ಬದ ಆಚರಣೆಗಳು ಮಾತ್ರ ನಿಲ್ಲುತ್ತಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುವುದು ಕಾಯ್ದು ನೋಡಬೇಕಾಗಿದೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…