ಕಲಬುರಗಿ: ರಾಜ್ಯದಲ್ಲಿ ಶೀತ ಗಾಳಿ ವಾತಾವರಣ ಮುಂದುವರಿದಿದ್ದು, ನೆಗಡಿ, ಕೆಮ್ಮು, ಜ್ವರದಿಂದ ಜನ ಭಯ ಭೀತರಾಗದೆ ಬದುಕಬೇಕು ಎಂದು ಮಣೂರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಫಾರುಖ್ ಅಹ್ಮದ್ ಮಣೂರ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಡೆಲ್ಟಾ ವೈರಸ್ನಂತ ಓಮೊಕ್ರೊನಾನಿಂದ ಸರಾಸರಿ ಸಾವಿನ ಪ್ರಮಾಣ ಕಡಿಮೆ ಇದೆ. ಹೀಗಾಗಿ, ಸಾರ್ವಜನಿಕರು ಆತಂಕ ಪಡದೆ ಮುಂಜಾಗ್ರತೆವಹಿಸಬೇಕು. ಜ್ವರ ಕಮ್ಮಿಯಾಗದಿದ್ದರೆ ಆಸ್ಪತ್ರೆಗಳನ್ನು ಸಂಪರ್ಕಿಸಬೇಕು. ಸದ್ಯ ಮೂರನೇ ಅಲೆ ಎದುರಾದರೂ ಪರಿಣಾಮ ಅಷ್ಟೊಂದಿಲ್ಲ. ಹೀಗಾಗಿ, ಶೇ. ೧೦ ರಷ್ಟು ಜನ ಮಾತ್ರ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.
ಇನ್ನು ಕೋವಿಡ್ ಲಸಿಕೆ ಪಡೆಯದಿರುವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ, ಪ್ರತಿಯೊಬ್ಬರು ಕೋವಿಡ್ ಲಸಿಕೆ ಪಡೆಯಲು ಮುಂದಾಗಬೇಕು ಎಂದ ಅವರು, ಇನ್ನು ಯಾರು ಎರಡೂ ಲಸಿಕೆ ಪಡೆದು ೯ ತಿಂಗಳು ಪೂರೈಸಿರುವವರು ಕೂಡ ಮೂರನೇ ಡೋಸ್ (ಬೂಸ್ಟರ್) ಪಡೆದುಕೊಂಡು ಆರೋಗ್ಯ ಕಾಪಾಡಬೇಕು. ಈಗಾಗಲೇ ವಿದೇಶದಲ್ಲಿ ನಾಲ್ಕನೇ ಡೋಸ್ ತೆಗೆದುಕೊಳ್ಳುವ ಪ್ರಕ್ರಿಯೆ ಮುಂದುವರಿದಿದೆ ಎಂದಿದ್ದಾರೆ.
ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಪಾಡುವುದಲ್ಲದೆ, ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಳ್ಳಬೇಕು. ಆಗಾಗ ಕೈಗಳನ್ನು ಸ್ವಚ್ವವಾಗಿ ತೊಳೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…
ಹಾವೇರಿ: SSLC,PUC ಯಲ್ಲಿ 90% ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು,…
ಕಲಬುರಗಿ: ನೌಕರಿ ಕಾಯಕವಾದರೆ ತೃಪ್ತಿ ಜೀವನ, ವೃತ್ತಿಯಲ್ಲಿ ಸೇವಾ ಮನೋಭಾವ ಹೊಂದಿದರೆ ಆತ್ಮಶುದ್ಧಿಯಾಗಿ ಸಂತೃಪ್ತ ಜೀವನ ನಮ್ಮದಾಗುತ್ತದೆ ಎಂದು ಉಪಳಾಂವ…
ಕಲಬುರಗಿ: ಕಾರ್ಮಿಕ ಸಚಿವರ ಅಧ್ಯಕ್ಷತೆಯಲ್ಲಿ ಕಲಬುರಗಿ ಮತ್ತು ಬೀದರ್ ಕಂದಾಯ ವಿಭಾಗದ ಜಿಲ್ಲೆಗಳ ಕಾರ್ಮಿಕ ಆಯುಕ್ತಾಲಯ ಹಾಗೂ ಇಲಾಖೆಗೆ ಸಂಬಂಧಿಸಿದ…
ವಾಡಿ: ಪ್ರತಿಯೊಬ್ಬರಿಗೂ ಗುರಿ ಇರಬೇಕು. ಆ ಗುರಿ ಸಾಧನೆಗೆ ಸಮರ್ಥ ಗುರುಗಳು ಬೇಕು ಅಂದಾಗ ಮಾತ್ರ ನಮ್ಮ ಗುರಿ ಈಡೇರಲು…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಕಾಂಗ್ರೆಸ್ ಪಕ್ಷದ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಪಕ್ಷದ…