ರಾಜ್ಯ

ಜುಜುಬಿ ವೋಟಿಗಾಗಿ ಶಾಂತಿ ಸೌಹರ್ದತೆಗೆ ಧಕ್ಕೆತರುವ ಅವಕಾಶ SDPIಯಲ್ಲಿ ಇಲ್ಲ: ಇಲಿಯಾಸ್

ಮಂಗಳೂರು: ದಶಕಗಳಿಂದ ಜುಜುಬಿ ವೋಟಿಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಕೋಮುಸೌಹಾರ್ದತೆಗೆ ದಕ್ಕೆ ಯಾಗುವ ಕೆಲಸ ಮಾಡುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹರ್ದತೆ ಮತ್ತು ಅಭಿವೃದ್ದಿಗೆ ಆದ್ಯತೆಯಲ್ಲಿ ಎಸ್‌ಡಿಪಿಐ ಕೆಲಸ ಮಾಡಲಿದೆ ಎಂದು ಎಸ್‌ಡಿಪಿಐ ಪಕ್ಷದ ಲೋಕಸಭಾ ಅಭ್ಯರ್ಥಿ ಮಹಮ್ಮದ್ ಇಲಿಯಾಸ್ ಹೇಳಿದ್ದರು.

ಅವರು ಕೆ.ಸಿ ರೊಡ್ ನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಜಿಲ್ಲೆಯ ಹಿಂದೂ- ಮುಸ್ಲಿಂ-ಕ್ರೈಸ್ತ ಬಾಂಧವರು ಅಣ್ಣ ತಂಮ್ಮಂದಿರಂತೆ ಬಾಳಬೇಕು. ಎಸ್‌ಡಿಪಿಐ ಎಲ್ಲಾ ಧರ್ಮಗಳ ಅವಕಾಶ ವಂಚಿತ ಜನ ಸಮುದಾಯಗಳ ಸಬಲೀಕರಣಕ್ಕೆ 10 ವರ್ಷದಿಂದ ಕೆಲಸ ಮಾಡುತ್ತಿದೆ ಜುಜುಬಿ ವೋಟಿಗಾಗಿ ಸೌಹರ್ದತೆಗೆ ಧಕ್ಕೆ ಆಗಬಾರದೆಂದು ಹೇಳಿದ್ದರು.

ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಮಂಚಿ ಮಾತನಾಡಿ ಎಸ್‌ಡಿಪಿಐ ಜಿಲ್ಲೆಯಲ್ಲಿ ಹಲವಾರು ಹಿಂದೂ ಕುಟುಂಬಗಳಿಗೆ ಸಂಕಷ್ಟಕ್ಕೆ ನೆರವಾಗಿದೆ ಎಂದರು. ರಾಜ್ಯ ಕಾರ್ಯದರ್ಶಿ ಅಕ್ರಮ್ ಹಸಮ್ ಮಾತನಾಡಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಮುಸ್ಲಿಮರಿಗೆ ನೀಡಿದ ಭರವಸೆ ಈಡೇರಿಸಲಿಲ್ಲ. ಸಾಚಾರ್ ವರದಿ ಅನುಷ್ಟಾನ ವಾಗಿಲ್ಲ, ಕೋಮುಗಲಬೆ ನಿಯಂತ್ರಣ ಮಸೂದೆ ಜಾರಿ ಮಾಡಲಿಲ್ಲ, ಖಾಸಗಿ ವಲಯದಲ್ಲಿ ಅಹಿಂದಾ ವರ್ಗಗಳಿಗೆ ಮೀಸಲಾತಿ ತಂದಿಲ್ಲ ಎಂದರು.

ವೇದಿಕೆಯಲ್ಲಿ ಪಕ್ಷದ ಮುಖಂಡರಾದ ಅಬ್ಬಾಸ್ ಕಿನ್ಯಾ, ರಶೀದ್ ಇಂಜಿನಿಯರ್, ಶಾಫಿ ಬಬ್ಬುಕಟ್ಟೆ, ಇಕ್ಬಾಲ್ ಐ.ಎಮ್.ಆರ್, ಹಕೀಮ್, ಮುಶರಫ್, ಇರ್ಶಾದ್ ಕೆ.ಸಿ ರೋಡ್, ಲತೀಫ್ ಕೋಡಿಜಾಲ್ ಮತ್ತಿತರು ಉಪಸ್ಥಿತರಿದ್ದರು
ಧನ್ಯವಾದಗಳು

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

5 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

5 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

5 hours ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

6 hours ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

6 hours ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

6 hours ago