ಶಹಾಬಾದ : ಜೀವನದ ಸಂಸ್ಕೃತಿ, ಸಂಪ್ರದಾಯ, ಆಚರಣೆಗಳನ್ನು ಒಟ್ಟುಗೂಡಿಸಿ ಅನುಸರಣೆ ಮಾಡುವುದೇ ಸಂಸ್ಕಾರ. ಈ ಸಂಸ್ಕಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ವೇಮನರಂತಹ ಮಹನೀಯರ ಸಂದೇಶಗಳನ್ನು ದಿನನಿತ್ಯ ಪಾಲಿಸಬೇಕು ಎಂದು ಅನುದಾನಿತ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಚನ್ನಬಸಪ್ಪ ಕೊಲ್ಲೂರ್ ಹೇಳಿದರು.
ಅವರು ಬುಧವಾರ ನಗರದ ರಾಷ್ಟ್ರಭಾಷಾ ಶಿಕ್ಷಣ ಸಮಿತಿಯಲ್ಲಿ ಆಯೋಜಿಸಲಾದ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಬದುಕಿನ ಎಲ್ಲಾ ಅನುಭವಗಳನ್ನು ಅನುಭವಿಸಿ, ಅದರ ಮೂಲ ಸತ್ಯಾಸತ್ಯತೆ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸಿದ ಪ್ರತಿಯೊಬ್ಬರು ಇಂದು ದಾರ್ಶನಿಕರಾಗಿದ್ದಾರೆ. ಜಾತಿ, ಸಮುದಾಯ, ಸಂಕುಚಿತ ಮನೋಭಾವದಿಂದ ಹೊರಬಂದು ದಾರ್ಶನಿಕರ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಶಿಕ್ಷಕ ಬಾಬಾಸಾಹೇಬ ಸಾಳುಂಕೆ ಮಾತನಾಡಿ, ಶರಣರ ಹಾಗೇ ಅತಿ ಹೆಚ್ಚು ಸಂಶೋಧನೆಗೆ ಒಳಪಟ್ಟವರಲ್ಲಿ ವೇಮನರು ಕೂಡ ಒಬ್ಬರು. ಉತ್ತರ ಕರ್ನಾಟಕದ ಖ್ಯಾತ ಸಂಶೋಧಕ ಪ್ರಕಾರ ವೇಮನರು ೧೪೧೨-೧೪೮೪ ರವರೆಗಿನ ಜೀವನ ನಡೆಸಿದರು ಎಂಬ ಉಲ್ಲೇಖವಿದೆ. ವೇಮನರ ವಚನಗಳು ಹಿಂದಿ, ಇಂಗ್ಲೀ? ಭಾ?ಗಳಿಗೆಲ್ಲಾ ತರ್ಜುಮೆಗೊಂಡಿವೆ. ನೆರೆ ರಾ?ಗಳಾದ ಇಂಗ್ಲೇಂಡ್ ಮತ್ತು ಫ್ರಾನ್ಸ್ ರಾ?ಗಳ ಗ್ರಂಥಾಲಯಗಳಲ್ಲಿ ವೇಮನ ವಚನಗಳ ಸಂಗ್ರಹವಿರುವುದು ಹೆಮ್ಮೆಯ ಸಂಗತಿ ಎಂದರು.
ಮುಖ್ಯಗುರುಗಳಾದ ದಮಯಂತಿ ಸೂರ್ಯವಂಶಿ,ಅನಿತಾ ಶರ್ಮಾ,ಸುಧೀರ ಕುಲಕರ್ಣಿ,ಮಹೇಶ್ವರಿ ಗುಳಿಗಿ, ಗೀತಾ,ರಾಜೇಶ್ವರಿ ಮಹೇಶ,ಮಲ್ಲಿನಾಥ ಪಾಟೀಲ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…
ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…