ಬಿಸಿ ಬಿಸಿ ಸುದ್ದಿ

ನಿವೃತ್ತಿ ಜೀವನ ಸಂತೋ?ದ ಕ್ಷಣಗಳನ್ನು ತರುವಂತಾಗಲಿ: ಇರ್ಫಾನ್ ಪಟೇಲ್

ಶಹಾಬಾದ: ಸರ್ಕಾರಿ ಸೇವಾವಧಿಯ ನಂತರದ ನಿವೃತ್ತಿ ಜೀವನ ನಿಮ್ಮ ನೆಮ್ಮದಿಯ ಸುಖ, ಸಂತೋ?ದ ಕ್ಷಣಗಳನ್ನು ತರುವಂತಾಗಲಿ ಎಂದು ಉಪನ್ಯಾಸಕ ಇರ್ಫಾನ ಪಟೇಲ್ ಹೇಳಿದರು.

ಅವರು ಬುಧವಾರ ನಗರದಲ್ಲಿ ಆಯೋಜಿಸಲಾದ ಹಾಸ್ಟೆಲ್ ಮೇಲ್ವಿಚಾರಕರಾಗಿ ಸೇವಾ ನಿವೃತ್ತಿ ಹೊಂದಿದ ಶಂಕರ ಜಾನಾ ಅವರಿಗೆ ಆಯೋಜಿಸಲಾದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಸೇವಾವಧಿಯ ಸಂದರ್ಭದಲ್ಲಿ ಕರ್ತವ್ಯಕ್ಕೆ ಹೆಚ್ಚು ಮಹತ್ವ ನೀಡಿ ಪ್ರಾಮಾಣಿಕವಾದ ಸೇವೆ ಸಲ್ಲಿಸಿದರೆ ನಿವೃತ್ತಿಯ ನಂತರ ನೆಮ್ಮದಿ ತಾನೇ ಅರಸಿಕೊಂಡು ಬರುತ್ತದೆ. ಅಧಿಕಾರವಿದ್ದಾಗ ಸರ್ವರೊಂದಿಗೆ ಹೊಂದಾಣಿ ಮಾಡಿಕೊಂಡು ನ್ಯಾಯಯುತವಾಗಿ ಕೆಲಸ ಮಾಡಿದಲ್ಲಿ ನಿವೃತ್ತಿ ನಂತರ ಹೆಚ್ಚಿನ ಗೌರವ ಸಿಕ್ಕುತ್ತದೆ ಎಂಬುದಕ್ಕೆ ಶಂಕರ ಜಾನಾ ಅವರೇ ಸಾಕ್ಷಿಯಾಗಿದ್ದಾರೆ ಎಂದರು.

ಅನೀಲ ಮೈನಾಳಕರ್ ಹಾಘೂ ರವಿ ಬೆಳಮಗಿ ಮಾತನಾಡಿ, ಶಂಕರ ಜಾನಾ ಅವರು ಒಳ್ಳೆಯ ಸ್ವಭಾವದ ವ್ಯಕ್ತಿಗಳಾಗಿದ್ದು, ಸಮಾಜದ ಸಂಘಟನೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ. ಸರಕಾರಿ ಸೇವೆಗೆ ಸೇರುವ ಮುಂಚೆ ಅವರು ದಸಂಸದ ಚಳುವಳಿಯಲ್ಲಿ ಕ್ರಾಂತಿ ಗೀತೆಗಳು, ಹೋರಾಟದ ಹಾಡುಗಳನ್ನು ಹಾಡುವ ಮೂಲಕ ಸಂಘಟನೆಯನ್ನು ಬಲಪಡಿಸುವುದಲ್ಲದೇ, ಕಾರ್ಯಕರ್ತರನ್ನು ಹುರಿದಂಬಿಸುತ್ತಿದ್ದರು.

ಅನೇಕ ದಲಿತ ಒಕ್ಕೂಟಗಳಲ್ಲಿ ಕೆಲಸ ಮಾಡಿದ್ದಾರೆ. ಸಮಾವೇಶಗಳನ್ನು, ವಿಚಾರ ಸಂಕೀರಣಗಳನ್ನು ಹಮ್ಮಿಕೊಂಡಿದ್ದಾರೆ.ಅಲ್ಲದೇ ಸಮಾಜದ ಜಾಗೃತಿಗಾಗಿ ಜೀಪ ಜಾಥಾ, ಕಲನಡಿಗೆ ಜಾಥಾ, ಸೈಕಲ್ ಜಾಥಾ ಸೇರಿದಮತೆ ಅನೇಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ನಂತರ ಸಮಾಜ ಕಲ್ಯಾಣ ಇಲಾಖೆಯಲ್ಲಿ ಸುಮಾರು ೨೮ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ ಎಂದರು.ಸರಕಾರಿ ನೌಕರಿ ಸಿಗುವುದು ಭಾಗ್ಯವಂತರಿಗೆ ಮಾತ್ರ ಒಲಿಯುತ್ತದೆ.ಇದೊಂದು ಶ್ರೇಷ್ಠ ಸೇವೆ. ಈ ಸೇವೆ ಸಿಗುವುದು ತುಂಬಾ ಅದೃ?ವಂತರಿಗೆ ಮಾತ್ರ. ಸೇವಾವಧಿಯಲ್ಲಿ ವೇತನಕ್ಕಾಗಿ ದುಡಿಯದೇ ಸಮಾಜದ ಏಳ್ಗೆಗಾಗಿ ದುಡಿಯಬೇಕು. ಸಮಾಜದ ಋಣ ತೀರಿಸಬೇಕು. ಪ್ರತಿ ಕೆಲಸ ದೇವರ ಕೆಲಸವೆಂದು ನಂಬಿ ಸಾಗಬೇಕು.

ಪತ್ರಕರ್ತ ರಮೇಶ ಭಟ್,ಕಟ್ಟಡ ಕಾರ್ಮಿಕ ಸಂಘದ ನಾಗಪ್ಪ ರಾಯಚೂರಕರ್, ಕರವೇ ತಾಲೂಕಾಧ್ಯಕ್ಷ ವಿಶ್ವರಾಜ ಫಿರೋಜಬಾದ, ಅಂಗವಿಕಲ ಕ್ಷೇಮಾಭಿವೃದ್ಧಿ ಸಂಘದ ಮಲ್ಲೇಶಿ ಭಜಂತ್ರಿ, ಶಿವಕುಮಾರ ಕಾರೊಳ್ಳಿ, ದೇವೆಂದ್ರ ಹೊಸಮನಿ, ಸಂತೋಷ ಹುಲಿ, ಆನಂದ ನಿಂಗದಲ್ಲಿ, ಲಕ್ಷಮಿಕಾಂತ ಬಳಿಚಕ್ರ, ಯಲ್ಲಾಲಿಂಗ ಹೈಯಾಳಕರ್, ಬಸವರಾಜ ತುಮಕೂರ, ರಮೇಶ ಬಾಡಿಯಾಳಕರ್,ಗುರು ದೊಡ್ಡಮನಿ, ತಿಪ್ಪಣ್ಣ ಬೆಳಗುಂಪಿ,ಭೀಮಶಪ್ಪ ಹಳ್ಳಿ, ಸದಾಶಿವ ಗೋಳಾ ಇತರರು ಇದ್ದರು.

emedialine

Recent Posts

ನೇಕಾರರ ಸೌಹಾರ್ದ ಸಹಕಾರಿಗೆ ನೂತನ ಪದಾಧಿಕಾರಿಗಳ ನೇಮಕ

ಸುರಪುರ: ತಾಲೂಕ ನೇಕಾರರ ಸೌಹಾರ್ದ ಸಹಕಾರಿಗೆ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಲಾಗಿದೆ. ನಗರದ ತಿಮ್ಮಾಪುರದ ಚೌಡೇಶ್ವರಿ ದೇವಸ್ಥಾನದಲ್ಲಿನ ಸಹಕಾರಿ ಸಂಘದ ಕಚೇರಿಯಲ್ಲಿ…

6 mins ago

ರಾಜಕೀಯಕ್ಕಾಗಿ ಮಠಾಧೀಶರು ನೀತಿ ಬಿಟ್ಟು ಜಾತಿವಂತರಾಗಿದ್ದಾರೆ; ಅರ್ಜುನ ಭದ್ರೆ

ಸುರಪುರ: ರಾಜಕೀಯಕ್ಕಾಗಿ ಇಂದು ಕೆಲವು ಮಠಾಧೀಶರು ಮುಖ್ಯಮಂತ್ರಿ ಹುದ್ದೆ ತಮ್ಮ ಜಾತಿ ಅಥವಾ ತಮ್ಮ ಸಮುದಾಯದವರಿಗೆ ನೀಡುವಂತೆ ಬಹಿರಂಗವಾಗಿ ಹೇಳಿಕೆ…

12 mins ago

ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಾಧಕ ರತ್ನ ಪ್ರಶಸ್ತಿ ಪ್ರದಾನ

ಕಲಬುರಗಿ; ಸ್ನೇಹ ಸಂಗಮ ವಿವಿಧೋದ್ದೇಶ ಸೇವಾ ಸಂಘದ ವತಿಯಿಂದ "ನಮ್ಮ ನಡಿಗೆ, ಹಳ್ಳಿಯ ಕನ್ನಡ ಸರಕಾರಿ ಶಾಲೆಯ ಕಡೆಗೆ" ಎಂಬ…

21 mins ago

ಸಿಯುಕೆಯಲ್ಲಿ ‘ಡೆಕ್ಕನ್ನಿನ ಸೂಫಿ ಸಂಗೀತ ಮತ್ತು ಕಾವ್ಯ’ ಕುರಿತು ವಿಶೇಷ ಉಪನ್ಯಾಸ

ಕಲಬುರಗಿ: “ವಿನಯ, ಉದಾರತೆ, ಪ್ರೀತಿ ಮತ್ತು ವಾತ್ಸಲ್ಯಗಳು ಸೂಫಿ ಸಂತರ ಪ್ರಮುಖ ಬೋಧನೆಗಳಾಗಿವೆ. ಸೂಫಿ ಸಂತ ಮೊಯಿನುದ್ದೀನ್ ಚಿಸ್ತಿ ಅವರು ಸೂರ್ಯನಂತೆ…

27 mins ago

ಗ್ರಾ.ಪಂ ಉಪಾಧ್ಯಕ್ಷ ಚುನಾವಣೆಗೆ ಸಿದ್ದು ಸಜ್ಜನ ಅವಿರೋಧ ಆಯ್ಕೆ

ಶಹಾಬಾದ :ತಾಲೂಕಿನ ತೊನಸನಹಳ್ಳಿ(ಎಸ್) ಗ್ರಾ.ಪಂಯ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಸಿದ್ದು ಸಜ್ಜನ ಅವಿರೋಧ ಆಯ್ಕೆಯಾಗಿದ್ದಾರೆ. ಸಾಮಾನ್ಯ…

34 mins ago

ನಿರುದ್ಯೋಗ ಸಮಸ್ಯೆಯ ವಿರುದ್ಧ ಸಂಘಟಿತ ಆಂದೋಲನ ಕಟ್ಟಬೇಕಾಗಿದೆ

ಶಹಾಬಾದ: ನಿರುದ್ಯೋಗ ಸಮಸ್ಯೆಯಿಂದ ನಮ್ಮ ಯುವಜನತೆ ಇಂದು ದಾರಿ ತಪ್ಪುತ್ತಿದೆ ಇದರ ವಿರುದ್ಧ ಇದರ ವಿರುದ್ದ ಸಂಘಟಿತ ಆಂದೋಲನ ಕಟ್ಟಬೇಕೆಂದು…

39 mins ago