ತುಳಿದು ಬದುಕುವುದಕ್ಕಿಂತ ತಿಳಿದು ಬದುಕುವದೆ ಶ್ರೇಷ್ಠ: ಪ್ರಭುದೇವ

ಕಲಬುರಗಿ: ತುಳಿದು ಬದುಕುವುದಕ್ಕಿಂತ ತಿಳಿದು ಬದುಕುವದೆ ಶ್ರೇಷ್ಠ, ತುಳಿದು ಬದುಕಿರುವವರು ಬಹುಬೇಗ ಅಳಿಯುತ್ತಾರೆ, ಆದ್ರೆ ತಿಳಿದು ಬದುಕಿರುವವರು ಅಳಿದ ಮೇಲೂ ಉಳಿಯುತ್ತಾರೆ ಈ ಸಾಲಿಗೆ ಸೇರಿದ ಆಧುನಿಕ ಮಹಾಸಂತ ತುಮಕೂರಿನ ಸಿದ್ಧಗಂಗಾ ಶಿವಕುಮಾರ ಮಹಾಸ್ವಾಮಿಗಳು ಎಂದು ಹೋರಾಟಗಾರ ಪ್ರಭುದೇವ  ಯಳಸಂಗಿ ಹೇಳಿದರು.

ಇ೦ದು  ಕಲಬುರಗಿ ನಗರದ ಆಳಂದ ರಸ್ತೆಯ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ   ಸ್ನೇಹ ಸಂಗಮ ವಿವಿಧೋದ್ದೇಶ ಸೇವಾ ಸಂಘವು ಹಮ್ಮಿಕೊಂಡಿರುವ  ತುಮಕೂರ ದಿ. ಡಾ. ಶಿವಕುಮಾರ ಮಹಾಸ್ವಾಮಿಗಳ ಸ್ಮರಣೋತ್ಸವದ ಮುನ್ನಾ ದಿನದ ಕಾರ್ಯಕ್ರಮದ ನಿಮಿತ್ಯ ವಿವಿಧ ಕ್ಷೇತ್ರದಲ್ಲಿ ಸಾಧನೆಗೈಯುತ್ತಿರುವ ಕಾಯಕ ಜೀವಿಗಳಿಗೆ ಗೌರವ ಸನ್ಮಾನಿಸಿ ಮಾತನಾಡುತ್ತಾ ಸಂಘವು ಎಲೆಮರೆ ಕಾಯಿಯಂತೆ ಸೇವೆ ಗೈಯುತ್ತಿರುವವರನ್ನು  ಸಮಾಜಕ್ಕೆ ಪರಿಚಯಿಸುವ ಕಾರ್ಯ ಮಾಡುತ್ತಿರುವುದು ಹೆಮ್ಮೆಯ ವಿಷಯ.ಈ ಭಾಗದ ಸಾಹಿತಿಗಳು, ಲೇಖಕರು, ಕಲಾವಿದರನ್ನು ರಾಜ್ಯಮಟ್ಟಕ್ಕೆ ಪರಿಚಯಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ನ್ಯಾಯವಾದಿ ಹಣಮಂತರಾಯ ಎಸ್. ಅಟ್ಟೂರ  ಮಾತನಾಡುತ್ತಾ ಜಾತಿ, ಮತ, ಪಂಥ, ಮೀರಿ ಬೆಳೆದು ಸಮಸಮಾಜ ನಿರ್ಮಾಣ ಮಾಡಲು ಪೂಜ್ಯರ ಪರಿಶ್ರಮ ಅಪಾರ ಇಂದಿನ ವಿದ್ಯಾರ್ಥಿ ಯುವಕರಿಗೆ   ಇ೦ತಹ ಮಹಾನ ವ್ಯಕ್ತಿಗಳೆ  ಆದರ್ಶವಾಗಬೇಕೆಂದು ಹೇಳಿದರು.ವೇದಿಕೆ ಮೇಲೆ ರಘುನಂದನ ಕುಲಕರ್ಣಿ, ಮಲಕಾರಿ ಪೂಜಾರಿ, ಲಕ್ಷ್ಮೀ ಧಾಕಲಿ,  ಕಲ್ಯಾಣಿ ತುಕ್ಕಾಣಿ, ಜನಪದ ಕಲಾವಿದ ರಾಜು ಹೆಬ್ಬಾಳ, ಇತರರು ಉಪಸ್ಥಿತರಿದ್ದರು.

ಇದೆ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಎಲೆಮರೆ ಕಾಯಿಯಂತೆ ಸೇವೆ ಗೈಯುತ್ತಿರುವ ಕೇದಾರನಾಥ ಎಸ್. ಕುಲಕರ್ಣಿ, ರವಿಕುಮಾರ ಶಹಾಪುರಕರ, ಪಾಂಡುರಂಗ ಕಟಕೆ ಅವರನ್ನು ವಿಶೇಷವಾಗಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ  ಸುಲ್ತಾನಾ ಯಾದಗೀರ, ರ೦ಜಿತಾ ಶ್ರೀಚಂದ, ಅಶ್ವಿನಿ  ಆಚಾರ್ಯ,ತ್ರಿವೇಣಿ ಸೇರಿದಂತೆ ಸಂಘದ ಸದಸ್ಯರು ಹಾಗೂ ವಿದ್ಯಾರ್ಥಿಗಳು  ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

4 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

7 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

11 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

12 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

14 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420