ಕಲಬುರಗಿ: ಅಂಬೇಡ್ಕರ್ ಯುವ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ತಳಕೇರಿ, ಉಪಾಧ್ಯಕ್ಷರಾದ ಲೋಹಿತ ಹೊಸಮನಿ, ಪ್ರಧಾನ ಕಾರ್ಯದರ್ಶಿಗಳಾದ ರಾಜು ಶ್ರೀಚಂದ ಹಾಗೂ ಅಂಬೇಡ್ಕರ್ ಯುವ ಸೇನೆ ಸೇಡಂ ತಾಲೂಕು ಸಮಿತಿ ಪದಾಧಿಕಾರಿಗಳಾದ ಸಿದ್ದು ಉಡಗಿ, ಗೋಪಾಲ ನಾಟೆಕರ್, ಮಹಾದೇವ ಸಕಲೇಶಪಲ್ಲಿ ರವರ ನ್ಯಾಯಯುತ ಹೋರಾಟದಿಂದಾಗಿ ಕಲಬುರಗಿ ಜಿಲ್ಲಾ ಪಂಚಾಯತ್ ಸಿಇಓ ಡಾ. ದಿಲಿಶ್ ಶಾಸಿ ರವರು ಸಂವಿಧಾನ ದಿನಾಚರಣೆ ಆಚರಣೆ ಮಾಡದೇ ಇರುವ ಸೇಡಂ ತಾಲೂಕಿನ ಇಬ್ಬರು ಪಿಡಿಓ ಗಳಿಗೆ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.
ದಿನಾಂಕ: 26-11-2021 ರಂದು ಸರ್ಕಾರದ ಎಲ್ಲಾ ಕಛೇರಿಯಲ್ಲಿ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿ ಸಂವಿಧಾನದ ಪೀಠಿಕೆಯನ್ನು ಓದುವುದರ ಮೂಲಕ ಆಚರಣೆ ಮಾಡುವಂತೆ ಸರ್ಕಾರದ ಆದೇಶವಿರುತ್ತದೆ.
ಆದರೆ ಸೇಡಂ ತಾಲೂಕಿನ ಮದನಾ ಗ್ರಾಮ ಪಂಚಾಯತಿ ಪಿಡಿಓ ಶಾಂತಪ್ಪ ಹಾಗೂ ಕೋಲಕುಂದ ಪಿಡಿಓ ನಿಂಗಪ್ಪ ಕೆಂಬಾವಿ ಅವರು ಗ್ರಾಮ ಪಂಚಾಯತ ನಲ್ಲಿ ಸಂವಿಧಾನ ದಿನಾಚರಣೆ ಆಚರಣೆ ಮಾಡದೆ ಸರ್ಕಾರದ ಅದೇಶ ಉಲಂಘಿಸಿ ಸಂವಿಧಾನಕ್ಕೆ ಅಗೌರವ ತೋರಿರುತ್ತಾರೆ.
ಸದರಿ ವಿಷಯದ ಬಗ್ಗೆ ಗಮನಕ್ಕೆ ಬಂದ ತಕ್ಷಣ. ಡಾ. ಅಂಬೇಡ್ಕರ್ ಯುವ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ತಳಕೇರಿ ಅವರು ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿಗಳಿಗೆ ದೂರವಾಣಿ ಕರೆ ಮಾಡಿ ಕೂಲಂಕುಷ ತನಿಖೆಗೆ ಆಗ್ರಹಿಸಿದರು.
ಸಂವಿಧಾನ ದಿನಾಚರಣೆ ಮಾಡದೆ ಸಂವಿಧಾನಕ್ಕೆ ಅಗೌರವ ತೋರಿದ್ದು ಅವರ ಮೇಲೆ ಕ್ರಮ ಜರುಗಿಸುವಂತೆ ಆಗ್ರಹಿಸಿ ಜಿಲ್ಲಾ ಪಂಚಾಯತ್ ಸಿಇಓ ದಿಲಿಶ್ ಶಾಸಿ ರವರು ಸೇಡಂ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಮದನಾ ಪಿಡಿಓ ಶಾಂತಪ್ಪ ಹಾಗೂ ಕೋಲಕುಂದ ಪಿಡಿಓ ನಿಂಗಪ್ಪ ಕೆಂಬಾವಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…