ಕಲಬುರಗಿ:19ರಂದು ಪ್ರಕಟಗೊಂಡ ಪೆÇಲೀಸ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಹುದ್ದೆಗಳ ನೇಮಕಾತಿಯಲ್ಲಿ ಆಳಂದ ತಾಲೂಕಿನ ಯಳಸಂಗಿ ಗ್ರಾಮದ ಇಬ್ಬರು ಕುವರಿಯರು ಪಿಎಸ್ಐ ಹುದ್ದೆಗೆ ಆಯ್ಕೆಯಾಗಿ ಗ್ರಾಮಕ್ಕೆ ‘ಡಬಲ್ ಪಿಎಸ್ಐ ಗರಿ’ ನೀಡಿ ಸಾಧನೆ ಮೆರೆದಿದ್ದಾರೆ.
ರೇವತಿ ಎಸ್. ಪಾಟೀಲ್ ಹಾಗೂ ಸಂಧ್ಯಾರಾಣ ಎಚ್. ಕುರನಳ್ಳಿ ಅವರೇ ನೂತನವಾಗಿ ಪಿಎಸ್ಐಯಾಗಿ ಸಾಧನೆ ಮಾಡಿದ್ದಾರೆ. ಕಲ್ಯಾಣ ಕರ್ನಾಟಕ ವೃಂದದ 25 ಹುದ್ದೆಗಳ ನೇಮಕಾತಿಯಲ್ಲಿ ರೇವತಿ (14ನೇ ರ್ಯಾಂಕ್), ಸಂಧ್ಯಾರಾಣ (25ನೇ ರ್ಯಾಂಕ್) ಗಿಟ್ಟಿಸಿ, ಸ್ಪರ್ಧಾಕಾಂಕ್ಷಿಗಳಿಗೆ ಸ್ಪೂರ್ತಿಯಾಗಿದ್ದಾರೆ.
ಸದ್ಯ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಲಕೇರಿ ಪೆÇಲೀಸ ಠಾಣೆಯಲ್ಲಿ ಕಳೆದ ವರ್ಷದಿಂದ ಪೆÇಲೀಸ ಕಾನ್ಸ್ಟೆಬಲ್ ಆಗಿ ಕೆಲಸ ನಿರ್ವಹಿಸುತ್ತಿದ್ದ ರೇವತಿ ಶಾಂತಗೌಡ ಪಾಟೀಲ್, ಕೆಲಸದ ವೇಳೆಯಲ್ಲೂ ನಿರಂತರ ಅಭ್ಯಾಸ ಮಾಡುತ್ತ ಛಲ ಬಿಡದೇ ಕೊನೆಗೆ ಪಿಎಸ್ಐ ಹುದ್ದೆಯ ಅಲಂಕರಿಸಿಯೇ ಬಿಟ್ಟಿದ್ದಾಳೆ.
ಇನ್ನೋರ್ವ ಕು. ಸಂಧ್ಯಾರಾಣ ಹುಸೇನಪ್ಪ ಕುರನಳ್ಳಿ ಎಂಬವರು ಇತ್ತೀಚೆಗೆ ನೀರಾವರಿ ಇಲಾಖೆಯಲ್ಲಿ ಅಸಿಸ್ಟಂಟ್ ಎಂಜಿನಿಯರ್ (ಎಇ) ಆಗಿ ಆಯ್ಕೆಯಾಗಿದ್ದಳು. ಇದೀಗ ಪಿಎಸ್ಐ ಹುದ್ದೆಯೂ ಸಹ ಬೆನ್ನಟ್ಟಿ ಬಂದಿದೆ. ಸಂಧ್ಯಾರಾಣ ಗೂ ಡಬಲ್ ಹುದ್ದೆಗಳು ಹುಡುಕಿಕೊಂಡು ಬಂದಿರುವುದು ಕಷ್ಟಪಟ್ಟರೇ ಎಲ್ಲವೂ ಸಾಧ್ಯವೆಂದು ತೋರಿಸಿಕೊಟ್ಟಿದ್ದಾರೆ.
ಯಳಸಂಗಿ ಗ್ರಾಮದ ಕುವರಿದ್ವಯರ ಸಾಧನೆಗೆ ಊರಿನ ಶಾಲಾ ಶಿಕ್ಷಕರು ಸೇರಿದಂತೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…