ಅಖಿಲ ಭಾರತ ವೀರಶೈವ ಮಹಾಸಭಾ ಸಿದ್ದಗಂಗಾ ಶ್ರೀಗಳ ಸ್ಮರಣೆ

0
9

ಸುರಪುರ: ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಘಟಕ ಹಾಗು ತಾಲೂಕು ಯುವ ಘಟಕದಿಂದ ನಗರದ ಬಸವೇಶ್ವರ ಪತ್ತಿನ ಸಹಕಾರ ಸಂಘದ ಭವನದಲ್ಲಿನ ಮಹಾಸಭಾ ಕಾರ್ಯಾಲಯದಲ್ಲಿ ಸಿದ್ದಗಂಗಾದ ಲಿಂ ಶ್ರೀ ಶಿವಕುಮಾರ ಸ್ವಾಮೀಜಿಯವರ ಸ್ಮರಣೋತ್ಸವ ಹಾಗು ಅಂಬಿಗರ ಚೌಡಯ್ಯನವರ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಮಹಾಸಭಾ ತಾಲೂಕು ಅಧ್ಯಕ್ಷ ಮಂಜುನಾಥ ಎಂ ಜಾಲಹಳ್ಳಿ ಅಂಬಿಗರ ಚೌಡಯ್ಯನವರ ಹಾಗು ಸಿದ್ದಗಂಗಾಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.ನಂತರ ಭಾಗವಹಿಸಿದ್ದ ಎಲ್ಲರು ಗೌರವ ವಂದನೆಯನ್ನು ಸಲ್ಲಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಮಹಾಸಭಾ ಯುವ ಘಟಕದ ತಾಲೂಕು ಅಧ್ಯಕ್ಷ ಶಿವರಾಜ ಕಲಕೇರಿ,ವೀರಶೈವ ಲಿಂಗಾಯತ ಯುವ ವೇದಿಕೆ ಜಿಲ್ಲಾಧ್ಯಕ್ಷ ಪ್ರದೀಪ ಕದರಾಪುರ,ಸರ್ವಜ್ಞ ಸೇವಾ ಟ್ರಸ್ಟ್ ಅಧ್ಯಕ್ಷ ಅಮರೇಶ ಕುಂಬಾರ,ಬಸವೇಶ್ವರ ಪತ್ತಿನ ಸಹಕಾರ ಸಂಘದ ನಿರ್ದೇಶಕ ಜಗದೀಶ ಪಾಟೀಲ್, ಮುಖಂಡರಾದ ಸೂಗುರೇಶ ಮಡ್ಡಿ,ಸಿದ್ದನಗೌಡ ಹೆಬ್ಬಾಳ,ಮಂಜುನಾಥ ಸಪ್ಪಂಡಿ,ಸಾಗರ ಹಿರೇಮಠ,ರವಿಕುಮಾರ ಗೌಡ ಹೆಮನೂರ,ಪ್ರಕಾಶ ಅಂಗಡಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here