ಬಿಸಿ ಬಿಸಿ ಸುದ್ದಿ

ಕಾಮ್ರೇಡ್ ಲೆನಿನ್ ರವರ ೯೮ನೇ ಸ್ಮಾರಕ ಸಭೆ

ಕಲಬುರಗಿ: ಪ್ರಪ್ರಥಮವಾಗಿ  ಮಾರ್ಕ್ಸವಾದ ತತ್ವಶಾಸ್ತ್ರದ  ಆದರದ ಮೆಲೆ ಸಮಾಜವಾದಿ ಸಮಜವನ್ನು ನಿರ್ಮಿಸಿದ ಮಹಾನ್ ನಾಯಕ ಕಾಮ್ರೇಡ್ ವಿ ಐ ಲೆನಿನ್  ಎಂದು ಎಸ್.ಯು. ಸಿ.ಐ (ಸಿ) ಪಕ್ಷದ ಜಿಲ್ಲಾ ಸಮಿತಿ ಸದಸ್ಯರಾದ ರಾಮಣ್ ಎಸ್ ಇಬ್ರಾಹಿಂಪೂರ  ಹೇಳಿದರು.

ಅವರು ಎಸ್.ಯು.ಸಿ.ಐ (ಸಿ) ಪಕ್ಷದ ಶಹಾಬಾದ ಸ್ಥಳೀಯ ಸಮಿತಿಯಿಂದ ರಷ್ಯಾದ ಸಮಾಜವಾದಿ ಕ್ರಾಂತಿಯ ಶಿಲ್ಪಿಯಾದ  ಕಾಮ್ರೇಡ್ ಲೆನಿನ್ ರವರ ೯೮ನೇ ಸ್ಮಾರಕ ಸಭೆಯಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.

ಮುಂದುವರೆದು ಅವರು ಯುರೋಪಿಯ ರೋಗಗ್ರಸ್ಥ ರಾಷ್ಟ್ರವಾದ ರಷ್ಯಾವು ಕಾರ್ಲ್ ಮಾರ್ಕ್ಸ್ ರವರ ವಿಚಾರ ಧಾರೆಯ ಆಧಾರದ ಮೇಲೆ ಕ್ರಾಂತಿಯನ್ನು ನರೆವೇರಿಸಿ ಹೊಸ ಸಮಾಜಕ್ಕೆ ನಾಂದಿ ಹಾಡಿದರು. ಬಡತನ, ನಿರುದ್ಯೋಗ, ಹಸಿವು, ಬಿಕ್ಷಾಟನೆ, ಮಹಿಳೆಯರ ಮೇಲಿನ ದೌರ್ಜನ್ಯ ದಂತಹ ಸಮಾಜಿಕ ಸಮಸ್ಯಗಳಿಲ್ಲದ ಮಾನವನಿಂದ ಮಾನವ ಶೋಷಣೆ ರಹಿತ ಸಮಾಜವನ್ನು ಕಟ್ಟಿದರು  ಎಂದು ಹೇಳಿದರು.

ಎಸ್.ಯು. ಸಿ.ಐ (ಸಿ) ಪಕ್ಷದ ಸ್ಥಳೀಯ ಕಾರ್ಯದರ್ಶಿಗಳಾದ ಗಣಪತ್ ರಾವ್ ಕೆ. ಮಾನೆ ರವರು ಲೆನಿನ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಗೌರವವನ್ನು ಸಲ್ಲಿಸಿದರು. ನಂತರ ಮಾತನಾಡುತ್ತಾ, ಭಾರತದಲ್ಲಿ ಕೂಡ ಮಾರ್ಕ್ಸವಾದದ ಆದರದ ಮೇಲೆ ದುಡಿಯು ವರ್ಗದ ವಿಮುಕಿಗಾಗ್ತಿ ಬಂಡವಾಳ ಶಾಹಿ ವಿರೋಧಿ ಸಮಜವಾದಿ ಕ್ರಾಂತಿಯನ್ನು ನೆರವೇರಿಸಲು ಸಜ್ಜಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪಕ್ಷದ ಸ್ಥಳೀಯ ಸಮಿತಿ ಸದಸ್ಯರಾದ ರಾಘವೇಂದ್ರ ಎಂ.ಜಿ. ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಪಕ್ಷದ ಸದಸ್ಯರಾದ ಜಗನ್ನಾಥ ಎಸ್.ಎಚ್. ರಾಜೇಂದ್ರ ಅತನೂರು, ಗುಂಡಮ್ಮಾ ಮಡಿವಾಳ, ಸಿದ್ದು ಚೌಧರಿ, ತುಳಜಾರಾಮ ಎನ್.ಕೆ. ನೀಲಕಂಠ ಹುಲಿ, ತಿಮ್ಮಯ್ಯ ಬಿ. ಮಾನೆ, ರಘು ಪವರ್, ಶ್ರೀನಿವಾಸ ರಮೇಶ ಡಿ. ಕಾರ್ಯಕರ್ತರು ಭಾಗವಹಸಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

12 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

12 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

14 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

14 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

14 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

15 hours ago