ಬಿಸಿ ಬಿಸಿ ಸುದ್ದಿ

ಕರಡ್ಯಾಳ ಗುರುಕುಲ ಕಾಲೇಜಿನಲ್ಲಿ ದಾಸೋಹ ದಿನ ಆಚರಣೆ

ಭಾಲಿ: ಶ್ರೀ ಚನ್ನಬಸವೇಶ್ವರ ಗುರುಕುಲ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜು ಕರಡ್ಯಾಳ ಆವರಣದಲ್ಲಿ ತುಮಕೂರು ಸಿದ್ಧಗಂಗಾ ಮಠದ ಲಿಂಗೈಕ್ಯ ಪೂಜ್ಯ ಶ್ರೀ ಡಾ.ಶಿವಕುಮಾರ ಮಹಾಸ್ವಾಮಿಗಳವರ ೩ನೇ ಪುಣ್ಯಸ್ಮರಣೆಯನ್ನು ದಾಸೋಹ ದಿನವನ್ನಾಗಿ ಆಚರಿಸಲಾಯಿತು.

ಪರಮಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರು ಸನ್ನಿಧಾನವಹಿಸಿ, ಸಿದ್ಧಗಂಗಾ ಮಠದ ಪೂಜ್ಯ ಶ್ರೀ ಶಿವಕುಮಾರ ಮಹಾಸ್ವಾಮಿಗಳವರು ನಡೆದಾಡುವ ದೇವರೆಂದೇ ಪ್ರಖ್ಯಾತ ಪಡೆದವರು. ಅವರು ಬಸವಾದಿ ಶರಣರ ತತ್ವಸಿದ್ಧಾಂತಗಳನ್ನು ನಿಜಾಚರಣೆಯಲ್ಲಿ ತಂದ ಮಹಾನ್ ಶರಣರು. ೧೨ನೇ ಶತಮಾನದಲ್ಲಿ ಕಲ್ಯಾಣದ ಅನುಭವಮಂಟಪದಲ್ಲಿ ಸಾವಿರಾರು ಜನರಿಗೆ ದಾಸೋಹ ನಡೆಯುತ್ತಿತ್ತು ಎಂದು ನಾವು ಚರಿತ್ರೆಯಲ್ಲಿ ಓದುತ್ತೇವೆ.

ಇಂದಿನ ದಿನಮಾನಗಳಲ್ಲಿ ಅದೇ ದಾಸೋಹ ಪರಂಪರೆಯನ್ನು ಮುಂದುವರೆಸುತ್ತಾ ಸುಮಾರು ೧೦ ಸಾವಿರ ಮಕ್ಕಳಿಗೆ ದಿನನಿತ್ಯ ಅನ್ನ, ಜ್ಞಾನ ದಾಸೋಹ ಮಾಡುತ್ತಿರುವ ಪೂಜ್ಯರ ಕಾರ್ಯ ಎಲ್ಲ ಯುವ ಮಠಾಧೀಶರಿಗೆ ಆದರ್ಶಪ್ರಾಯ ಹಾಗೂ ಪ್ರೇರಕವಾಗಿದೆ. ಪೂಜ್ಯರು ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ ಎಂಬ ಬಸವವಾಣಿಯನ್ನು ಅಕ್ಷರಸಹ ಬದುಕಿನಲ್ಲಿ ಅಳವಡಿಸಿಕೊಂಡವರು. ಶತಾಯುಷಿಗಳಾದರು ಲಿಂಗಪೂಜೆ, ಕಾಯಕ ಮತ್ತು ದಾಸೋಹ ನಿರಂತರವಾಗಿ ಮಾಡುತ್ತಲೇ ಬಂದಿರುವರು. ಅವರ ಲಿಂಗೈಕ್ಯ ದಿನವನ್ನು ಕರ್ನಾಟಕ ಸರಕಾರ ದಾಸೋಹ ದಿನವನ್ನಾಗಿ ಆಚರಿಸುತ್ತಿರುವುದು ಅತ್ಯಂತ ಅರ್ಥಪೂರ್ಣ ಮತ್ತು ಅಭಿನಂದನೀಯವಾಗಿದೆ ಎಂದು ನುಡಿದರು.

ಸಮಾರಂಭದಲ್ಲಿ, ಸಂಸ್ಥೆ ಆಡಳಿತಾಧಿಕಾರಿಗಳಾದ ಶರಣ ಮೋಹನರೆಡ್ಡಿ, ಪ್ರಾಚಾರ್ಯರಾದ ಶರಣ ಬಸವರಾಜ ಮೋಳಕೆರೆ, ಉಪಪ್ರಾಚಾರ್ಯ ಶರಣ ಸಿದ್ರಾಮ ಗೊಗ್ಗಾ, ಪ್ರಾಚಾರ್ಯ ಮಹಾದೇವ ಪಟ್ನೆ, ಉಪನ್ಯಾಸಕರಾದ ರಾಮಕೃಷ್ಣ, ಸದಾವಿಜಯ, ಶೇಖರಗೌಡ, ಪುರುಶೋತ್ತಮ ಹಾಗೂ ನಿರಜ್ ಮತ್ತು ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮುಂತಾದವರು ಉಪಸ್ಥಿತರಿದ್ದರು. ಕಾಲೇಜಿನ ಹಳೆಯ ವಿದ್ಯಾರ್ಥಿಗಳಾದ ರಾಹುಲ್ ಪುಣೆ, ಸಚೀನ್ ಕಾರಬಾರಿ, ಚನ್ನಬಸವ ಸ್ವಾಮಿ ಇವರಿಂದ ಪೂಜ್ಯ ಶಿವಕುಮಾರ ಮಹಾಸ್ವಾಮಿಗಳವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

emedialine

Recent Posts

ಶಹಾಪುರ: ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ

ಶಹಾಪುರ ತಾಲೂಕಿನ ಸಗರ ಗ್ರಾಮ ಆಡಳಿತ ಅಧಿಕಾರಿ ರಮೇಶ್ ರಾಠೋಡ್ ಶಹಾಪುರ : ರೈತರು ಬೆಳೆವಿಮೆ, ಪರಿಹಾರ,ಸಾಲ ಮನ್ನಾ,ಇತರೆ ಸೇರಿದಂತೆ…

44 mins ago

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

7 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

19 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

20 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

21 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

21 hours ago